<p><strong>ಧಾರವಾಡ:</strong> ‘ಮಕ್ಕಳು ಕಲಿಕೆಗೆ ಸೀಮಿತವಾಗಿ, ತಮ್ಮಲ್ಲಿರುವ ಅಪರಿಮಿತ ಕಲಾ ಶಕ್ತಿಯನ್ನು ಮರೆಯುತ್ತಿದ್ದಾರೆ’ ಎಂದು ಎಂದು ಸಿಸ್ಲೇಪ್ ನಿರ್ದೇಶಕ ಬಿ.ಕೆ.ಎಸ್. ವರ್ಧನ ಹೇಳಿದರು.</p>.<p>ನಗರದ ರಂಗಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಟ್ರಸ್ಟ್ಗಳ ಸಹಯೋಗದಲ್ಲಿ<br> ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ‘ಚಿಣ್ಣರ ನಾಟಕೋತ್ಸವ’ ಉದ್ಘಾಟಿಸಿ ಮಾತನಾಡಿದರು. </p>.<p>‘ಮಕ್ಕಳ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸಂವಿಧಾನ ಓದಬೇಕು. <br /> ಸಮಾನತೆ, ಸಹೋದರತ್ವ, ಸ್ವಾತಂತ್ರ್ಯದ ಬಗ್ಗೆ ತಿಳಿದುಕೊಳ್ಳಬೇಕು’ ಎಂದರು.</p>.<p>ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಮಾತನಾಡಿ, ‘ನಮ್ಮ ಸಂವಿಧಾನ-ನಮ್ಮ ಕಲರವ ಧ್ಯೇಯವಾಕ್ಯದಡಿ ಈ ಬಾರಿಯ ಚಿಣ್ಣರಮೇಳ ಆಯೋಜಿಸಲಾಗಿದೆ. ಈ ಮೂಲಕ ಮಕ್ಕಳಿಗೆ ಸಂವಿಧಾನದ ಕುರಿತು ಅರಿವು ಮೂಡಿಸಲಾಗಿದೆ’ ಎಂದು ಹೇಳಿದರು. </p>.<p>‘ಮಕ್ಕಳಲ್ಲಿನ ಸಂಗೀತ, ಚಿತ್ರಕಲೆ, ನೃತ್ಯ, ನಟನಾ ಕೌಶಲ ಸೇರಿದಂತೆ ಹಲವಾರು ಕಲೆಗಳನ್ನು ಪ್ರದರ್ಶಿಸಲು ರಂಗಾಯಣವು ವೇದಿಕೆ ಕಲ್ಪಿಸಿಕೊಟ್ಟಿತು’ ಎಂದು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಶಿಬಿರದ ನಿರ್ದೇಶಕ ಲಕ್ಷ್ಮಣ ಪಿರಗಾರ, ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಮಕ್ಕಳು ಕಲಿಕೆಗೆ ಸೀಮಿತವಾಗಿ, ತಮ್ಮಲ್ಲಿರುವ ಅಪರಿಮಿತ ಕಲಾ ಶಕ್ತಿಯನ್ನು ಮರೆಯುತ್ತಿದ್ದಾರೆ’ ಎಂದು ಎಂದು ಸಿಸ್ಲೇಪ್ ನಿರ್ದೇಶಕ ಬಿ.ಕೆ.ಎಸ್. ವರ್ಧನ ಹೇಳಿದರು.</p>.<p>ನಗರದ ರಂಗಾಯಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಟ್ರಸ್ಟ್ಗಳ ಸಹಯೋಗದಲ್ಲಿ<br> ಪಂ. ಬಸವರಾಜ ರಾಜಗುರು ಬಯಲು ರಂಗಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ‘ಚಿಣ್ಣರ ನಾಟಕೋತ್ಸವ’ ಉದ್ಘಾಟಿಸಿ ಮಾತನಾಡಿದರು. </p>.<p>‘ಮಕ್ಕಳ ಓದಿನ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಸಂವಿಧಾನ ಓದಬೇಕು. <br /> ಸಮಾನತೆ, ಸಹೋದರತ್ವ, ಸ್ವಾತಂತ್ರ್ಯದ ಬಗ್ಗೆ ತಿಳಿದುಕೊಳ್ಳಬೇಕು’ ಎಂದರು.</p>.<p>ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ ಮಾತನಾಡಿ, ‘ನಮ್ಮ ಸಂವಿಧಾನ-ನಮ್ಮ ಕಲರವ ಧ್ಯೇಯವಾಕ್ಯದಡಿ ಈ ಬಾರಿಯ ಚಿಣ್ಣರಮೇಳ ಆಯೋಜಿಸಲಾಗಿದೆ. ಈ ಮೂಲಕ ಮಕ್ಕಳಿಗೆ ಸಂವಿಧಾನದ ಕುರಿತು ಅರಿವು ಮೂಡಿಸಲಾಗಿದೆ’ ಎಂದು ಹೇಳಿದರು. </p>.<p>‘ಮಕ್ಕಳಲ್ಲಿನ ಸಂಗೀತ, ಚಿತ್ರಕಲೆ, ನೃತ್ಯ, ನಟನಾ ಕೌಶಲ ಸೇರಿದಂತೆ ಹಲವಾರು ಕಲೆಗಳನ್ನು ಪ್ರದರ್ಶಿಸಲು ರಂಗಾಯಣವು ವೇದಿಕೆ ಕಲ್ಪಿಸಿಕೊಟ್ಟಿತು’ ಎಂದು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಶಿಬಿರದ ನಿರ್ದೇಶಕ ಲಕ್ಷ್ಮಣ ಪಿರಗಾರ, ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>