<p><strong>ಹುಬ್ಬಳ್ಳಿ: ‘</strong>ಚಿತ್ತಾಪುರದಲ್ಲಿ ನವೆಂಬರ್ 2 ರಂದು ಭೀಮ ಆರ್ಮಿ, ದಲಿತ ಸಂಘಟನೆಗಳು, ಹಿಂದುಳಿದ ವರ್ಗಗಳು ಸೇರಿ ಯಾರಾದರೂ ಮೆರವಣಿಗೆ ನಡೆಸಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದರು.</p>.<p>‘ರಾಜ್ಯದಲ್ಲಿ ಆಡಳಿತ ಮತ್ತು ಕಾನೂನು ಸುವಸ್ಥೆ ಸಂಪೂರ್ಣ ಕುಸಿದಿದೆ. ಮುಖ್ಯಮಂತ್ರಿ ಅಧಿಕಾರದ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಆರ್ಎಸ್ಎಸ್ ವಿಷಯವನ್ನು ಮುನ್ನಲೆಗೆ ತರಲಾಗಿದೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>’ಆರ್ಎಸ್ಎಸ್ಗೆ ಎಲ್ಲಿಂದ ಹಣ ಬರುತ್ತದೆ ಎಂದು ಕೇಳಿರುವ ಪ್ರಿಯಾಂಕ್ ಖರ್ಗೆ ಅವರು, ಮೊದಲು ಕಾಂಗ್ರೆಸ್ಗೆ ಎಲ್ಲಿಂದ ಹಣ ಬರುತ್ತದೆ ಎಂಬುದನ್ನು ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದರು.</p>.<p>ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಮಾತನಾಡಿ, ‘ಆರ್ಎಸ್ಎಸ್ ಕಾರ್ಯಕರ್ತರ ಕೈಯಲ್ಲಿ ಲಾಠಿ ಜನರಲ್ಲಿ ಶಿಸ್ತು, ಆತ್ಮವಿಶ್ವಾಸ ಮತ್ತು ದೇಶಪ್ರೇಮ ಮೂಡಿಸಲು ಇದೆಯೇ ಹೊರತು ಸಂಘರ್ಷಕ್ಕಲ್ಲ. ಲಾಠಿಯ ಬಗ್ಗೆ ನಮಗೆ ಹೆಮ್ಮೆಯಿದೆ. ಯಾರು ಬೇಕಾದರೂ ಆರ್ಎಸ್ಎಸ್ ಸಂಘಟನೆ ಸೇರಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: ‘</strong>ಚಿತ್ತಾಪುರದಲ್ಲಿ ನವೆಂಬರ್ 2 ರಂದು ಭೀಮ ಆರ್ಮಿ, ದಲಿತ ಸಂಘಟನೆಗಳು, ಹಿಂದುಳಿದ ವರ್ಗಗಳು ಸೇರಿ ಯಾರಾದರೂ ಮೆರವಣಿಗೆ ನಡೆಸಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದರು.</p>.<p>‘ರಾಜ್ಯದಲ್ಲಿ ಆಡಳಿತ ಮತ್ತು ಕಾನೂನು ಸುವಸ್ಥೆ ಸಂಪೂರ್ಣ ಕುಸಿದಿದೆ. ಮುಖ್ಯಮಂತ್ರಿ ಅಧಿಕಾರದ ಹಸ್ತಾಂತರ ಪ್ರಕ್ರಿಯೆ ನಡೆಯುತ್ತಿರುವ ಕಾರಣ ಆರ್ಎಸ್ಎಸ್ ವಿಷಯವನ್ನು ಮುನ್ನಲೆಗೆ ತರಲಾಗಿದೆ’ ಎಂದು ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>’ಆರ್ಎಸ್ಎಸ್ಗೆ ಎಲ್ಲಿಂದ ಹಣ ಬರುತ್ತದೆ ಎಂದು ಕೇಳಿರುವ ಪ್ರಿಯಾಂಕ್ ಖರ್ಗೆ ಅವರು, ಮೊದಲು ಕಾಂಗ್ರೆಸ್ಗೆ ಎಲ್ಲಿಂದ ಹಣ ಬರುತ್ತದೆ ಎಂಬುದನ್ನು ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದರು.</p>.<p>ವಿಧಾನ ಪರಿಷತ್ತು ಸದಸ್ಯ ಸಿ.ಟಿ.ರವಿ ಮಾತನಾಡಿ, ‘ಆರ್ಎಸ್ಎಸ್ ಕಾರ್ಯಕರ್ತರ ಕೈಯಲ್ಲಿ ಲಾಠಿ ಜನರಲ್ಲಿ ಶಿಸ್ತು, ಆತ್ಮವಿಶ್ವಾಸ ಮತ್ತು ದೇಶಪ್ರೇಮ ಮೂಡಿಸಲು ಇದೆಯೇ ಹೊರತು ಸಂಘರ್ಷಕ್ಕಲ್ಲ. ಲಾಠಿಯ ಬಗ್ಗೆ ನಮಗೆ ಹೆಮ್ಮೆಯಿದೆ. ಯಾರು ಬೇಕಾದರೂ ಆರ್ಎಸ್ಎಸ್ ಸಂಘಟನೆ ಸೇರಬಹುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>