‘ಬಹುತೇಕರಿಗೆ ಯುಪಿಎಸ್ಸಿ, ಕೆಪಿಎಸ್ಸಿ ಪರೀಕ್ಷೆ ಎಂದರೆ ಸಾಕಷ್ಟು ವಿಷಯಗಳನ್ನು ಓದಿಕೊಂಡಿರಬೇಕು ಎನ್ನುವ ಮನಸ್ಥಿತಿಯಿದೆ. ಅಂತಹ ಗೊಂದಲಗಳಿಗೆ ಅವಕಾಶ ನೀಡದೆ, ಯಾವ ವಿಷಯದಲ್ಲಿ ಆಸಕ್ತಿಯಿದೆಯೋ ಅದನ್ನೇ ಆಯ್ಕೆ ಮಾಡಿಕೊಳ್ಳಬೇಕು. ಆಗ ಅಭ್ಯಾಸ ಮಾಡುವುದು ಸುಲಭವಾಗುತ್ತದೆ. ಮಾನವಶಾಸ್ತ್ರದಲ್ಲಿ ಆಸಕ್ತಿ ಇದ್ದಿದ್ದರಿಂದ, ಅದನ್ನೇ ಆಯ್ಕೆ ಮಾಡಿಕೊಂಡಿದ್ದೆ. ಅದರ ಜೊತೆಗೆ ಇತಿಹಾಸ, ಸಾಮಾನ್ಯ ಜ್ಞಾನ ವಿಷಯಕ್ಕೂ ಹೆಚ್ಚಿನ ಒತ್ತು ನೀಡಿದ್ದೆ’ ಎಂದು ಶ್ರುತಿ ‘ಪ್ರಜಾವಾಣಿ’ಗೆ ತಿಳಿಸಿದರು.