<p><strong>ಹುಬ್ಬಳ್ಳಿ: </strong>ಕ್ರೈಸ್ತ ಸಮುದಾಯಕ್ಕೆ ಮತಾಂತರಕ್ಕೆ ಪ್ರಚೋದಿಸಿದ ಹಾಗೂ ಆಮಿಷ ಒಡ್ಡಿದ ಆರೋಪದ ಕುರಿತು ನಗರದಲ್ಲಿ ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್ ಸಮುದಾಯದವರು ಸೋಮವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.</p>.<p>ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ಮಹಾನಗರ ಪಾಲಿಕೆ ಸದಸ್ಯ ದೊರೆರಾಜ ಮಣಿಕುಂಟ್ಲ ನೇತೃತ್ವದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಹಿಂದೂಪರ ಸಂಘಟನೆಗಳಿಂದ ನಮಗೆ ಅನ್ಯಾಯವಾಗಿದೆ. ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.</p>.<p>ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಕೂಡ ಪಾಲ್ಗೊಂಡಿದ್ದು ಸರಿಯಲ್ಲ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/dharwad/protest-against-conversion-to-christianity-in-hubli-876191.html" itemprop="url">ಕ್ರೈಸ್ತ ಸಮುದಾಯಕ್ಕೆ ಮತಾಂತರ ಆರೋಪ: ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ </a></p>.<p>ಈ ಘಟನೆಯನ್ನು ಖಂಡಿಸಲು ಅ. 19ರಂದು ಪ್ರತಿಭಟನೆ ನಡೆಸಲು ಕ್ರಿಶ್ಚಿಯನ್ ಸಮುದಾಯದ ಮುಖಂಡರು ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಚರ್ಚಿಸಲು ಕೇಶ್ವಾಪುರದ ಸೇಂಟ್ ಪೀಟರ್ಸ್ ಚರ್ಚ್ನಲ್ಲಿ ಸಭೆ ಜರುಗಿತು. ಪ್ರತಿಭಟನೆಗೆ ಪ್ರಸಾದ ಅಬ್ಬಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಸೋಮು ಅವರಾಧಿ ಎಂಬ ವ್ಯಕ್ತಿ ಪ್ರಚೋದನೆ ನೀಡಿದ್ದು ಆತನನ್ನು ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ಭಾನುವಾರ ತಡರಾತ್ರಿಯ ತನಕ ರಸ್ತೆ ಬಂದ್ ಹಾಗೂ ಪ್ರತಿಭಟನೆ ಮಾಡಿದ್ದರು.</p>.<p><strong>ಆರೋಪಿ ಬಂಧನ?: </strong>ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಸೋಮು ಅವರಾಧಿಯನ್ನು ಚಿತ್ರದುರ್ಗದಲ್ಲಿ ನವನಗರ ಪೊಲೀಸರು ಬಂಧಿಸಿದ್ದಾರೆ. ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಕ್ರೈಸ್ತ ಸಮುದಾಯಕ್ಕೆ ಮತಾಂತರಕ್ಕೆ ಪ್ರಚೋದಿಸಿದ ಹಾಗೂ ಆಮಿಷ ಒಡ್ಡಿದ ಆರೋಪದ ಕುರಿತು ನಗರದಲ್ಲಿ ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್ ಸಮುದಾಯದವರು ಸೋಮವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು.</p>.<p>ಕಾಂಗ್ರೆಸ್ ಶಾಸಕ ಪ್ರಸಾದ ಅಬ್ಬಯ್ಯ ಹಾಗೂ ಮಹಾನಗರ ಪಾಲಿಕೆ ಸದಸ್ಯ ದೊರೆರಾಜ ಮಣಿಕುಂಟ್ಲ ನೇತೃತ್ವದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿ ಹಿಂದೂಪರ ಸಂಘಟನೆಗಳಿಂದ ನಮಗೆ ಅನ್ಯಾಯವಾಗಿದೆ. ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.</p>.<p>ಹಿಂದೂ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಕೂಡ ಪಾಲ್ಗೊಂಡಿದ್ದು ಸರಿಯಲ್ಲ ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/dharwad/protest-against-conversion-to-christianity-in-hubli-876191.html" itemprop="url">ಕ್ರೈಸ್ತ ಸಮುದಾಯಕ್ಕೆ ಮತಾಂತರ ಆರೋಪ: ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ </a></p>.<p>ಈ ಘಟನೆಯನ್ನು ಖಂಡಿಸಲು ಅ. 19ರಂದು ಪ್ರತಿಭಟನೆ ನಡೆಸಲು ಕ್ರಿಶ್ಚಿಯನ್ ಸಮುದಾಯದ ಮುಖಂಡರು ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ಬಗ್ಗೆ ಚರ್ಚಿಸಲು ಕೇಶ್ವಾಪುರದ ಸೇಂಟ್ ಪೀಟರ್ಸ್ ಚರ್ಚ್ನಲ್ಲಿ ಸಭೆ ಜರುಗಿತು. ಪ್ರತಿಭಟನೆಗೆ ಪ್ರಸಾದ ಅಬ್ಬಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ.</p>.<p>ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಸೋಮು ಅವರಾಧಿ ಎಂಬ ವ್ಯಕ್ತಿ ಪ್ರಚೋದನೆ ನೀಡಿದ್ದು ಆತನನ್ನು ಬಂಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಲಿಂಗಾಯತ ಸಮುದಾಯದ ಪ್ರಮುಖರು ಭಾನುವಾರ ತಡರಾತ್ರಿಯ ತನಕ ರಸ್ತೆ ಬಂದ್ ಹಾಗೂ ಪ್ರತಿಭಟನೆ ಮಾಡಿದ್ದರು.</p>.<p><strong>ಆರೋಪಿ ಬಂಧನ?: </strong>ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಸೋಮು ಅವರಾಧಿಯನ್ನು ಚಿತ್ರದುರ್ಗದಲ್ಲಿ ನವನಗರ ಪೊಲೀಸರು ಬಂಧಿಸಿದ್ದಾರೆ. ಗುಪ್ತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪ್ರಜಾವಾಣಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>