<p><strong>ಹುಬ್ಬಳ್ಳಿ: </strong>ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಬಿಜೆಪಿ ವತಿಯಿಂದ ಗುರುವಾರ 53ನೇ ವಾರ್ಡ್ನಲ್ಲಿ ದತ್ತಾತ್ರೇಯ ದೇವಸ್ಥಾನದ ಹತ್ತಿರ ‘ಚಾಯ್ ಪೇ ಚರ್ಚೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಯತೀರ್ಥ ಕಟ್ಟಿ ಮಾತನಾಡಿ ‘ಈ ಕಾಯ್ದೆಯ ಬಗ್ಗೆ ಜನರಲ್ಲಿ, ಅದರಲ್ಲಿಯೂ ಮುಖ್ಯವಾಗಿ ಮುಸ್ಲಿಮರಲ್ಲಿ ತಪ್ಪು ತಿಳಿವಳಿಕೆ ಮೂಡಿದೆ. ಇದನ್ನು ಹೋಗಲಾಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಸ್ಥಳೀಯ ನಿವಾಸಿಗಳಾದ ಬುಡನಸಾಬ್ ಧಾರವಾಡ ಮತ್ತು ಖುರೇಷಿ ಎಂಬುವರು ‘ದಾಖಲೆ ತೋರಿಸದಿದ್ದರೆ ದೇಶದಿಂದ ಹೊರಹಾಕುತ್ತಾರಂತೆ’ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕಟ್ಟಿ ‘ಭಾರತದಲ್ಲಿಯೇ ಹುಟ್ಟಿ ಬೆಳೆದವರು ದಾಖಲೆ ಕೊಡುವ ಅಗತ್ಯವಿಲ್ಲ. ಬಾಂಗ್ಲಾದೇಶ, ಅಫಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಧಾರ್ಮಿಕ ಶೋಷಣೆಗೆ ಒಳಗಾದವರು ಅರ್ಜಿ ಸಲ್ಲಿಸಿದರೆ ಭಾರತದ ಪೌರತ್ವ ನೀಡಲಾಗುತ್ತದೆ. ಹೊಸ ಕಾಯ್ದೆಯಿಂದ ದೇಶದ ಜನರಿಗೆ ಒಳ್ಳೆಯದಾಗುತ್ತದೆ’ ಎಂದರು.</p>.<p>ಮಾಜಿ ಶಾಸಕ ಅಶೋಕ ಕಾಟವೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಮುಖಂಡರಾದ ಪ್ರಭು ನವಲಗುಂದ ಮಠ, ಶಿವು ಮೆಣಸಿನಕಾಯಿ, ಚಂದ್ರಶೇಖರ ಗೋಕಾಕ, ರಂಗಾಬದ್ದಿ, ಕೆ. ರಾಜು, ಪೂರ್ಣಿಮಾ ಶಿಂಧೆ, ಅನುರಾಧಾ ಚಿಲ್ಲಾಳ, ಸುವರ್ಣ ಜಂಗಮಗೌಡರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಬಿಜೆಪಿ ವತಿಯಿಂದ ಗುರುವಾರ 53ನೇ ವಾರ್ಡ್ನಲ್ಲಿ ದತ್ತಾತ್ರೇಯ ದೇವಸ್ಥಾನದ ಹತ್ತಿರ ‘ಚಾಯ್ ಪೇ ಚರ್ಚೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಜಯತೀರ್ಥ ಕಟ್ಟಿ ಮಾತನಾಡಿ ‘ಈ ಕಾಯ್ದೆಯ ಬಗ್ಗೆ ಜನರಲ್ಲಿ, ಅದರಲ್ಲಿಯೂ ಮುಖ್ಯವಾಗಿ ಮುಸ್ಲಿಮರಲ್ಲಿ ತಪ್ಪು ತಿಳಿವಳಿಕೆ ಮೂಡಿದೆ. ಇದನ್ನು ಹೋಗಲಾಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.</p>.<p>ಸ್ಥಳೀಯ ನಿವಾಸಿಗಳಾದ ಬುಡನಸಾಬ್ ಧಾರವಾಡ ಮತ್ತು ಖುರೇಷಿ ಎಂಬುವರು ‘ದಾಖಲೆ ತೋರಿಸದಿದ್ದರೆ ದೇಶದಿಂದ ಹೊರಹಾಕುತ್ತಾರಂತೆ’ ಎಂದು ಪ್ರಶ್ನಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕಟ್ಟಿ ‘ಭಾರತದಲ್ಲಿಯೇ ಹುಟ್ಟಿ ಬೆಳೆದವರು ದಾಖಲೆ ಕೊಡುವ ಅಗತ್ಯವಿಲ್ಲ. ಬಾಂಗ್ಲಾದೇಶ, ಅಫಘಾನಿಸ್ತಾನ ಮತ್ತು ಪಾಕಿಸ್ತಾನದಲ್ಲಿ ಧಾರ್ಮಿಕ ಶೋಷಣೆಗೆ ಒಳಗಾದವರು ಅರ್ಜಿ ಸಲ್ಲಿಸಿದರೆ ಭಾರತದ ಪೌರತ್ವ ನೀಡಲಾಗುತ್ತದೆ. ಹೊಸ ಕಾಯ್ದೆಯಿಂದ ದೇಶದ ಜನರಿಗೆ ಒಳ್ಳೆಯದಾಗುತ್ತದೆ’ ಎಂದರು.</p>.<p>ಮಾಜಿ ಶಾಸಕ ಅಶೋಕ ಕಾಟವೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನಾಗೇಶ ಕಲಬುರ್ಗಿ, ಮುಖಂಡರಾದ ಪ್ರಭು ನವಲಗುಂದ ಮಠ, ಶಿವು ಮೆಣಸಿನಕಾಯಿ, ಚಂದ್ರಶೇಖರ ಗೋಕಾಕ, ರಂಗಾಬದ್ದಿ, ಕೆ. ರಾಜು, ಪೂರ್ಣಿಮಾ ಶಿಂಧೆ, ಅನುರಾಧಾ ಚಿಲ್ಲಾಳ, ಸುವರ್ಣ ಜಂಗಮಗೌಡರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>