ವೇದಿಕೆಯಲ್ಲಿ 6 ಮಂದಿ: ಪೌರ ಸನ್ಮಾನ ಸಮಾರಂಭದ ವೇದಿಕೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಧಾರವಾಡದ ಐಐಐಟಿ ಆಡಳಿತ ಮಂಡಳಿಯ ಚೇರ್ಮನ್ ಸುಧಾಮೂರ್ತಿ ಹಾಗೂ ಮತ್ತೊಬ್ಬ ಪ್ರಮುಖ ಅತಿಥಿ ಸೇರಿದಂತೆ ಒಟ್ಟು 6 ಮಂದಿಗೆ ಆಸನ ಕಾಯ್ದಿರಿಸಲಾಗಿದೆ. ರಾಷ್ಟ್ರಪತಿಯ ಬಲಭಾಗದಲ್ಲಿ ರಾಜ್ಯಪಾಲರು ಹಾಗೂ ಎಡಭಾಗದಲ್ಲಿ ಮುಖ್ಯಮಂತ್ರಿ ಆಸೀನರಾಗಲಿದ್ದಾರೆ.