<p><strong>ಹುಬ್ಬಳ್ಳಿ</strong>: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಕೇಶ ಕಿಶೋರ ಶೂ ಎಸೆಯಲು ಯತ್ನಿಸಿದ ಘಟನೆ ಖಂಡಿಸಿ, ಆತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿವಿಧ ದಲಿತ ಸಂಘ– ಸಂಸ್ಥೆಗಳ ಮಹಾಮಂಡಳದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಸ್ಟೇಷನ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ರಾಕೇಶ ಕಿಶೋರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.</p>.<p>‘ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಥಿತಿ ಬದಲಾಗಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಇದು ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಮನುವಾದಕ್ಕೆ ಕೇಂದ್ರ ಸರ್ಕಾರ ಕುಮ್ಮಕ್ಕು ನೀಡಿದ್ದರಿಂದಲೇ ಇಂತಹ ಘಟನೆ ನಡೆದಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಘಟನೆ ಕುರಿತು ಕಾಂಗ್ರೆಸ್ ನಾಯಕರು ಖಂಡನೆ ವ್ಯಕ್ತಪಡಿಸಿದ ಬಳಿಕ ಪ್ರಧಾನಿ ಮೋದಿ ಅವರು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಕರೆ ಮಾಡಿ ವಿಷಾದಿಸಿದ್ದಾರೆ. ಆದರೆ, ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಿಲ್ಲ. ಇದು ದೇಶದ ಜನರನ್ನು ಸಂಶಯಕ್ಕೀಡು ಮಾಡಿದೆ’ ಎಂದರು.</p>.<p>‘ಯಾವುದೇ ಸಣ್ಣ ಪ್ರಕರಣಗಳು ನಡೆದರೂ ಮಾತನಾಡುತ್ತಿದ್ದ ಆರ್ಎಸ್ಎಸ್ ನಾಯಕರು, ಈ ಘಟನೆ ಕುರಿತು ಸುಮ್ಮನಿದ್ದಾರೆ. ರಾಕೇಶ ಕಿಶೋರ್ ಜಾಗದಲ್ಲಿ ಮುಸ್ಲಿಂ ಅಥವಾ ದಲಿತ ವ್ಯಕ್ತಿ ಇದ್ದಿದ್ದರೆ, ಆತನನ್ನು ಸ್ಥಳದಲ್ಲೇ ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಕೆ ನೀಡಿ ಪ್ರಚಾರ ಪಡೆಯುತ್ತಿದ್ದರು’ ಎಂದು ಟೀಕಿಸಿದರು.</p>.<p>ಪ್ರಮುಖರಾದ ಗುರುನಾಥ ಉಳ್ಳಿಕಾಶಿ, ಗುರುನಾಥ ಚಲವಾದಿ, ರೇವಣಸಿದ್ದಪ್ಪ ಹೊಸಮನಿ, ಶಿವಾನಂದ ಮುತ್ತಣ್ಣವರ, ಲೋಹಿತ್ ಗಾಮನಗಟ್ಟಿ, ರಾಜು ಎಸ್., ವಿನಾಯಕ ಅಮರಗೋಳ, ನಾಗಪ್ಪ ನರೇಂದ್ರ, ಶಿವಕುಮಾರ ಗೋಕಾವಿ, ನಾಗರಾಜ ದೊಡ್ಡಮನಿ, ಮಂಜುನಾಥ ವಾಲೀಕಾರ, ಗುರುಸಿದ್ದಪ್ಪ ಅಂಗಡಿ, ಭೀಮಪ್ಪ ಕೆಂಪಣ್ಣವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ವಕೀಲ ರಾಕೇಶ ಕಿಶೋರ ಶೂ ಎಸೆಯಲು ಯತ್ನಿಸಿದ ಘಟನೆ ಖಂಡಿಸಿ, ಆತನ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿವಿಧ ದಲಿತ ಸಂಘ– ಸಂಸ್ಥೆಗಳ ಮಹಾಮಂಡಳದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.</p>.<p>ಸ್ಟೇಷನ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ರಾಕೇಶ ಕಿಶೋರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು.</p>.<p>‘ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನಸ್ಥಿತಿ ಬದಲಾಗಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಇದು ಸಂವಿಧಾನದ ಮೇಲಿನ ಆಕ್ರಮಣವಾಗಿದೆ. ಮನುವಾದಕ್ಕೆ ಕೇಂದ್ರ ಸರ್ಕಾರ ಕುಮ್ಮಕ್ಕು ನೀಡಿದ್ದರಿಂದಲೇ ಇಂತಹ ಘಟನೆ ನಡೆದಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>‘ಘಟನೆ ಕುರಿತು ಕಾಂಗ್ರೆಸ್ ನಾಯಕರು ಖಂಡನೆ ವ್ಯಕ್ತಪಡಿಸಿದ ಬಳಿಕ ಪ್ರಧಾನಿ ಮೋದಿ ಅವರು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಕರೆ ಮಾಡಿ ವಿಷಾದಿಸಿದ್ದಾರೆ. ಆದರೆ, ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಿಲ್ಲ. ಇದು ದೇಶದ ಜನರನ್ನು ಸಂಶಯಕ್ಕೀಡು ಮಾಡಿದೆ’ ಎಂದರು.</p>.<p>‘ಯಾವುದೇ ಸಣ್ಣ ಪ್ರಕರಣಗಳು ನಡೆದರೂ ಮಾತನಾಡುತ್ತಿದ್ದ ಆರ್ಎಸ್ಎಸ್ ನಾಯಕರು, ಈ ಘಟನೆ ಕುರಿತು ಸುಮ್ಮನಿದ್ದಾರೆ. ರಾಕೇಶ ಕಿಶೋರ್ ಜಾಗದಲ್ಲಿ ಮುಸ್ಲಿಂ ಅಥವಾ ದಲಿತ ವ್ಯಕ್ತಿ ಇದ್ದಿದ್ದರೆ, ಆತನನ್ನು ಸ್ಥಳದಲ್ಲೇ ಗುಂಡಿಕ್ಕಿ ಕೊಲ್ಲಿ ಎಂದು ಹೇಳಿಕೆ ನೀಡಿ ಪ್ರಚಾರ ಪಡೆಯುತ್ತಿದ್ದರು’ ಎಂದು ಟೀಕಿಸಿದರು.</p>.<p>ಪ್ರಮುಖರಾದ ಗುರುನಾಥ ಉಳ್ಳಿಕಾಶಿ, ಗುರುನಾಥ ಚಲವಾದಿ, ರೇವಣಸಿದ್ದಪ್ಪ ಹೊಸಮನಿ, ಶಿವಾನಂದ ಮುತ್ತಣ್ಣವರ, ಲೋಹಿತ್ ಗಾಮನಗಟ್ಟಿ, ರಾಜು ಎಸ್., ವಿನಾಯಕ ಅಮರಗೋಳ, ನಾಗಪ್ಪ ನರೇಂದ್ರ, ಶಿವಕುಮಾರ ಗೋಕಾವಿ, ನಾಗರಾಜ ದೊಡ್ಡಮನಿ, ಮಂಜುನಾಥ ವಾಲೀಕಾರ, ಗುರುಸಿದ್ದಪ್ಪ ಅಂಗಡಿ, ಭೀಮಪ್ಪ ಕೆಂಪಣ್ಣವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>