<p><strong>ಹುಬ್ಬಳ್ಳಿ:</strong> ಇಲ್ಲಿನ ಬೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಚರಣೆ ಮುಂದುವರಿದಿದ್ದು, ಪ್ರಾರ್ಥನಾ ಮಂದಿರ ಹಾಗೂ ಅಲ್ಲಿರುವ ನಾಲ್ಕು-ಐದು ಅಂಗಡಿಗಳನ್ನು ತೆರವು ಮಾಡಲಾಗಿದೆ.</p>.<p>ದರ್ಗಾ ಆವರಣದಲ್ಲಿ ದೊಡ್ಡ ಗೋರಿ ಸೇರಿದಂತೆ ಮೂರು ಗೋರಿಗಳಿವೆ. ಅವುಗಳನ್ನು ದರ್ಗಾ ಕಟ್ಟಡದ ಹಿಂದುಗಡೆ ಇರುವ ಜಾಗದಲ್ಲಿ ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ. ಸ್ಥಳಾಂತರದ ಉಸ್ತುವಾರಿ ಹುಬ್ಬಳ್ಳಿ ಅಂಜುಮನ್ ಸಂಸ್ಥೆ ವಹಿಸಿಕೊಂಡಿದ್ದು, ಸಂಜೆ 6ರವರೆಗೆ ಕಾಲಾವಕಾಶ ಪಡೆದಿದೆ.</p>.<p>ಹಜರತ್ ಸೈಯ್ಯದ್ ಮಹ್ಮದ್ ಶಾ ಖಾದ್ರಿ ಅವರ ಗೋರಿ 10*10 ಉದ್ದ-ಅಗಲವಿದ್ದು, ಅವರ ಇಬ್ಬರು ಶಿಷ್ಯಂದಿರ ಗೋರಿ 7*7 ಉದ್ದ-ಅಗಲವಿದೆ. ಇವುಗಳಿಗೆ ಧಕ್ಕೆ ಆಗದ ಹಾಗೆ ಯಥಾವತ್ತಾಗಿ ಸ್ಥಳಾಂತರಿಸಲು ನುರಿತ ಎಂಜಿನಿಯರ್'ಗಳು ಮೇಲುಸ್ತುವಾರಿ ವಹಿಸಿಕೊಂಡಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ಹುಬ್ಬಳ್ಳಿ ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಅಲ್ತಾಫ್ ಹಳ್ಳೂರ, 'ಗೋರಿಗಳ ಸ್ಥಳಾಂತರಕ್ಕೆ ಯಾವ ತಂತ್ರಜ್ಞಾನ ಬಳಸಬಹುದು ಎಂದು ಪರಿಣಿತರೊಂದಿಗೆ ಚರ್ಚಿಸಿದ್ದು, ಹಿಟಾಚಿ ಸೇರಿದಂತೆ ಬೃಹತ್ ಯಂತ್ರೋಪಕರಣಗಳನ್ನು ತರಿಸಿಕೊಳ್ಳಲಾಗಿದೆ. ಸಂಜೆಯೊಳಗೆ ಗೋರಿಗಳ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಲು ಯತ್ನಿಸಲಾಗುವುದು' ಎಂದರು.</p>.<p>'ಇಂದು ನಡೆಯುತ್ತಿರುವ ಐತಿಹಾಸಿಕ ದರ್ಗಾ ತೆರವು ಕಾರ್ಯಾಚರಣೆ ಮುಸ್ಲಿಮ್ ಸಮುದಾಯಕ್ಕೆ ಕರಾಳ ದಿನವಾಗಿದೆ. ತೆರವು ಕಾರ್ಯಕ್ಕೆ ಸಂಬಂಧಿಸಿ ಅಧಿಕಾರಿಗಳು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕೆಲವರು ದರ್ಗಾವನ್ನು ಸಂಪೂರ್ಣ ತೆರವು ಮಾಡಲು ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ' ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಇಲ್ಲಿನ ಬೈರಿದೇವರಕೊಪ್ಪದ ದರ್ಗಾ ತೆರವು ಕಾರ್ಯಚರಣೆ ಮುಂದುವರಿದಿದ್ದು, ಪ್ರಾರ್ಥನಾ ಮಂದಿರ ಹಾಗೂ ಅಲ್ಲಿರುವ ನಾಲ್ಕು-ಐದು ಅಂಗಡಿಗಳನ್ನು ತೆರವು ಮಾಡಲಾಗಿದೆ.</p>.<p>ದರ್ಗಾ ಆವರಣದಲ್ಲಿ ದೊಡ್ಡ ಗೋರಿ ಸೇರಿದಂತೆ ಮೂರು ಗೋರಿಗಳಿವೆ. ಅವುಗಳನ್ನು ದರ್ಗಾ ಕಟ್ಟಡದ ಹಿಂದುಗಡೆ ಇರುವ ಜಾಗದಲ್ಲಿ ಸ್ಥಳಾಂತರಿಸಲು ಯೋಜನೆ ರೂಪಿಸಲಾಗಿದೆ. ಸ್ಥಳಾಂತರದ ಉಸ್ತುವಾರಿ ಹುಬ್ಬಳ್ಳಿ ಅಂಜುಮನ್ ಸಂಸ್ಥೆ ವಹಿಸಿಕೊಂಡಿದ್ದು, ಸಂಜೆ 6ರವರೆಗೆ ಕಾಲಾವಕಾಶ ಪಡೆದಿದೆ.</p>.<p>ಹಜರತ್ ಸೈಯ್ಯದ್ ಮಹ್ಮದ್ ಶಾ ಖಾದ್ರಿ ಅವರ ಗೋರಿ 10*10 ಉದ್ದ-ಅಗಲವಿದ್ದು, ಅವರ ಇಬ್ಬರು ಶಿಷ್ಯಂದಿರ ಗೋರಿ 7*7 ಉದ್ದ-ಅಗಲವಿದೆ. ಇವುಗಳಿಗೆ ಧಕ್ಕೆ ಆಗದ ಹಾಗೆ ಯಥಾವತ್ತಾಗಿ ಸ್ಥಳಾಂತರಿಸಲು ನುರಿತ ಎಂಜಿನಿಯರ್'ಗಳು ಮೇಲುಸ್ತುವಾರಿ ವಹಿಸಿಕೊಂಡಿದ್ದಾರೆ.</p>.<p>ಈ ಕುರಿತು ಪ್ರತಿಕ್ರಿಯಿಸಿದ ಹುಬ್ಬಳ್ಳಿ ಅಂಜುಮನ್ ಸಂಸ್ಥೆ ಮಾಜಿ ಅಧ್ಯಕ್ಷ ಅಲ್ತಾಫ್ ಹಳ್ಳೂರ, 'ಗೋರಿಗಳ ಸ್ಥಳಾಂತರಕ್ಕೆ ಯಾವ ತಂತ್ರಜ್ಞಾನ ಬಳಸಬಹುದು ಎಂದು ಪರಿಣಿತರೊಂದಿಗೆ ಚರ್ಚಿಸಿದ್ದು, ಹಿಟಾಚಿ ಸೇರಿದಂತೆ ಬೃಹತ್ ಯಂತ್ರೋಪಕರಣಗಳನ್ನು ತರಿಸಿಕೊಳ್ಳಲಾಗಿದೆ. ಸಂಜೆಯೊಳಗೆ ಗೋರಿಗಳ ಸ್ಥಳಾಂತರ ಕಾರ್ಯ ಪೂರ್ಣಗೊಳಿಸಲು ಯತ್ನಿಸಲಾಗುವುದು' ಎಂದರು.</p>.<p>'ಇಂದು ನಡೆಯುತ್ತಿರುವ ಐತಿಹಾಸಿಕ ದರ್ಗಾ ತೆರವು ಕಾರ್ಯಾಚರಣೆ ಮುಸ್ಲಿಮ್ ಸಮುದಾಯಕ್ಕೆ ಕರಾಳ ದಿನವಾಗಿದೆ. ತೆರವು ಕಾರ್ಯಕ್ಕೆ ಸಂಬಂಧಿಸಿ ಅಧಿಕಾರಿಗಳು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಕೆಲವರು ದರ್ಗಾವನ್ನು ಸಂಪೂರ್ಣ ತೆರವು ಮಾಡಲು ಅವರ ಮೇಲೆ ಒತ್ತಡ ಹೇರುತ್ತಿದ್ದಾರೆ' ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>