ಹುಬ್ಬಳ್ಳಿ: ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದರು.
ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಬೊಮ್ಮಾಯಿ, ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದರು. ಸ್ನೇಹಿತನ ಪಾರ್ಥೀವ ಶರೀರಕ್ಕೆ ಹೂಮಾಲೆ ಹಾಕಿ ಅಂತಿಮ ದರ್ಶನ ಪಡೆದ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ರಾಜು ಅವರು ಬುಧವಾರ ಹೃದಯಾಘಾತದಿಂದಾಗಿ ನಿಧನರಾಗಿದ್ದರು.
ಆಮೇಲೆ ಮಾತನಾಡುವೆ: ಸ್ನೇಹಿತನ ಸಾವಿನ ದುಃಖದಲ್ಲಿದ್ದ ಬೊಮ್ಮಾಯಿ ಅವರು, ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಲು ನಿರಾಕರಿಸಿದರು. ‘ಎಲ್ಲಾ ಮುಗಿಸಿಕೊಂಡು ಆಮೇಲೆ ನಿಮ್ಮೊಂದಿಗೆ ಮಾತನಾಡುವೆ’ ಎಂದು ಸ್ನೇಹಿತನ ಮನೆಯತ್ತ ಹೊರಟರು.
ಜವಳಿ ಮತ್ತು ಸಕ್ಕರೆ ಸಚಿವ ಶಂಕರಪಾಟೀಲ ಮುನೇನಕೊಪ್ಪ ಇದ್ದರು.
ಇಂದು ಹುಬ್ಬಳ್ಳಿಯಲ್ಲಿ ನನ್ನ ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ಶ್ರೀ ರಾಜು ಪಾಟೀಲ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪ ನಮನಗಳನ್ನು ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಲಾಯಿತು. pic.twitter.com/YVPbdYErn8