ಹುಬ್ಬಳ್ಳಿ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಗೋಕುಲ ರಸ್ತೆಯಲ್ಲಿ ಸಾಕಷ್ಟು ಜಾಗ ಹೊಂದಿದ್ದರೂ ಗೋಕುಲ ಪೊಲೀಸ್ ಠಾಣೆ ಹೊಸ ಕಟ್ಟಡ ನಿರ್ಮಾಣಕ್ಕೆ ಜಾಗ ನೀಡುತ್ತಿಲ್ಲ. ಇಲ್ಲದ ಸಬೂಬು ಹೇಳುತ್ತಿದ್ದಾರೆ ಎಂದು ಪ್ರಾದೇಶಿಕ ನ್ಯಾಯವಿಜ್ಞಾನ ಪ್ರಯೋಗಾಲಯದ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಶಾಸಕ ಜಗದೀಶ ಶೆಟ್ಟರ್ ವೇದಿಕೆ ಮೇಲೆಯೇ ಅಸಮಾಧಾನ ವ್ಯಕ್ತಪಡಿಸಿದರು.