ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲ ಸೋಂಕಿತರಿಗೂ ಜಿನೋಮ್‌ ಪರೀಕ್ಷೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Last Updated 28 ಏಪ್ರಿಲ್ 2022, 7:35 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಕೋವಿಡ್‌ ಸೋಂಕಿತರಾಗುವ ಎಲ್ಲರಿಗೂ ವಂಶವಾಹಿ ಸಂರಚನೆ ವಿಶ್ಲೇಷಣೆಗೆ (ಜಿನೋಮ್‌ ಸಿಕ್ವೆನ್ಸಿಂಗ್) ಪರೀಕ್ಷೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ’ನಾಲ್ಕನೇ ಅಲೆ ಬಂದಿಲ್ಲ. ಲಸಿಕೆ ಪಡೆಯದ ಯುರೋಪ್‌ ರಾಷ್ಟ್ರಗಳಲ್ಲಿ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿದೆ. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗುವುದು.

ಸೋಂಕು ದೃಢಪಟ್ಟರೆ ಅವರನ್ನು ಜಿನೋಮ್‌ ಪರೀಕ್ಷೆಗೆ ಒಳಪಡಿಸಲಾಗುವುದು. ಇದರಿಂದ ಅವರಲ್ಲಿ ಸೋಂಕಿನ ಬೇರೆ ತಳಿಗಳಿದ್ದರೆ ಗೊತ್ತಾಗುತ್ತದೆ. ಈಗಾಗಲೇ ರಾಜ್ಯದಲ್ಲಿ 8,500 ಜನರಿಗೆ ಜಿನೋಮ್‌ ಪರೀಕ್ಷೆ ಮಾಡಲಾಗಿದೆ‘ ಎಂದು ತಿಳಿಸಿದರು.

’ರಾಜ್ಯದಲ್ಲಿ ಶೇ 98ರಷ್ಟು ಜನ ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದಾರೆ. ಬೂಸ್ಟರ್‌ ಡೋಸ್‌ ವಿತರಣೆ ಚುರುಕುಗೊಳಿಸಲಾಗುವುದು. 6ರಿಂದ 12 ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಅನುಮತಿ ಕೊಟ್ಟಿದ್ದು, ಪ್ರಾಥಮಿಕ ಶಾಲೆಗಳಲ್ಲಿ ಲಸಿಕಾ ಅಭಿಯಾನ ಆರಂಭಿಸಲು ನಿರ್ಧರಿಸಲಾಗಿದೆ‘ ಎಂದರು.

’ರಾಜ್ಯ ಮಾತ್ರವಲ್ಲ, ದೇಶದಾದ್ಯಂತ ಕೋಮುಗಲಭೆ ಸೃಷ್ಟಿಸುವ ಪ್ರಚೋದನಾ ಭಾಷಣಗಳನ್ನು ಕೆಲವರು ಮಾಡುತ್ತಿದ್ದಾರೆ. ವಿಶೇಷವಾಗಿ ಸಾಮಾಜಿಕ‌ ಜಾಲತಾಣದಲ್ಲಿ ಇದರ ಹಾವಳಿ ಹೆಚ್ಚಾಗಿದೆ. ಸುಪ್ರೀಂ ಕೋಟ್೯ ನಿರ್ದೇಶನದಂತೆ ಸಮಿತಿ ರಚನೆ ಮಾಡುತ್ತೇವೆ‘ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT