ಹುಬ್ಬಳ್ಳಿ: ‘ವಾಮ ಮಾರ್ಗದಲ್ಲಿ ಸರ್ಕಾರ ರಚಿಸಿದಿರಲ್ಲ, ನಿಮಗೆ ನಾಚಿಕೆ ಆಗಬೇಕು. ರಮೇಶ ಜಾರಕಿಹೊಳಿ ಸಿ.ಡಿ ಹಿಡಿದು, ಗೃಹ ಸಚಿವರ ಬಳಿ ಹೋಗಿದ್ದಾರೆ. ವಿಷಕನ್ಯೆ ಬಗ್ಗೆ ಮಾತನಾಡುತ್ತಾರೆ. ಆ ಕಟೀಲು, ಪಿಟೀಲು ಬಾರಿಸಿ ಲವ್ ಜಿಹಾದ್ ಬಗ್ಗೆ ಮಾತನಾಡುತ್ತಾನೆ. ಇಂತಹ ಪಾಪಿಗಳನ್ನು ಕಟ್ಟಿಕೊಂಡು ಮುಖ್ಯಮಂತ್ರಿಯಾಗಿದ್ದೀರಿ. ಮೊದಲು ಆ ಸ್ಥಾನಕ್ಕೆ ರಾಜೀನಾಮೆ ನೀಡಿ’ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು, ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಆಗ್ರಹಿಸಿದರು.