<p><strong>ಹುಬ್ಬಳ್ಳಿ</strong>: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಂಟೂರಲ್ಲಿ ನಿರ್ಮಿಸಿದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಬಂದ ಮೂವರ ಮೇಲೆ ಬೃಹತ್ ಕಟೌಟ್ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.</p><p>ಬ್ಯಾಹಟ್ಟಿಯ ಶಂಕರ ಹಡಪದ, ಗಂಗಾಧರ ನಗರದ ಶಾಂತಾ ಕ್ಯಾರಕಟ್ಟಿ ಮತ್ತು ಧಾರವಾಡದ ಮಂಜುನಾಥ ಕುಲಕರ್ಣಿ ಅವರು ಗಾಯಗೊಂಡಿದ್ದು, ಸುಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಗಾಯಾಳುಗಳು ಸಂಪೂರ್ಣ ಗುಣಮುಖರಾಗುವವರೆಗೆ ಉಚಿತವಾಗಿ ಅಗತ್ಯ ಚಿಕಿತ್ಸೆ ಹಾಗೂ ಔಷಧಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p><p>ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಗೆ ತೆರಳುವ ಮಾರ್ಗದ ಅಕ್ಕಪಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ಗಳನ್ನು ಅಳವಡಿಸಲಾಗಿತ್ತು. ಏಕಾಏಕಿ ಬೃಹತ್ ಕಟೌಟ್ ಬಿದ್ದು ಮೂವರು ಗಾಯಗೊಂಡಿದ್ದರು.</p>.ಚಿತ್ರದುರ್ಗ: ಕೊಹ್ಲಿ ಕಟೌಟ್ ಮುಂದೆ ಮೇಕೆ ಕತ್ತರಿಸಿ ರಕ್ತಾಭಿಷೇಕ; ಪ್ರಕರಣ ದಾಖಲು.ಬೆಂಗಳೂರು | ಹೆಚ್ಚಾದ ಕಟೌಟ್, ಬ್ಯಾನರ್ ಹಾವಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಂಟೂರಲ್ಲಿ ನಿರ್ಮಿಸಿದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಬಂದ ಮೂವರ ಮೇಲೆ ಬೃಹತ್ ಕಟೌಟ್ ಬಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.</p><p>ಬ್ಯಾಹಟ್ಟಿಯ ಶಂಕರ ಹಡಪದ, ಗಂಗಾಧರ ನಗರದ ಶಾಂತಾ ಕ್ಯಾರಕಟ್ಟಿ ಮತ್ತು ಧಾರವಾಡದ ಮಂಜುನಾಥ ಕುಲಕರ್ಣಿ ಅವರು ಗಾಯಗೊಂಡಿದ್ದು, ಸುಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದೆ.</p><p>ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದ ಸಿದ್ದರಾಮಯ್ಯ, ಗಾಯಾಳುಗಳು ಸಂಪೂರ್ಣ ಗುಣಮುಖರಾಗುವವರೆಗೆ ಉಚಿತವಾಗಿ ಅಗತ್ಯ ಚಿಕಿತ್ಸೆ ಹಾಗೂ ಔಷಧಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.</p><p>ಕಾರ್ಯಕ್ರಮದ ಹಿನ್ನೆಲೆಯಲ್ಲಿ ವೇದಿಕೆಗೆ ತೆರಳುವ ಮಾರ್ಗದ ಅಕ್ಕಪಕ್ಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ಗಳನ್ನು ಅಳವಡಿಸಲಾಗಿತ್ತು. ಏಕಾಏಕಿ ಬೃಹತ್ ಕಟೌಟ್ ಬಿದ್ದು ಮೂವರು ಗಾಯಗೊಂಡಿದ್ದರು.</p>.ಚಿತ್ರದುರ್ಗ: ಕೊಹ್ಲಿ ಕಟೌಟ್ ಮುಂದೆ ಮೇಕೆ ಕತ್ತರಿಸಿ ರಕ್ತಾಭಿಷೇಕ; ಪ್ರಕರಣ ದಾಖಲು.ಬೆಂಗಳೂರು | ಹೆಚ್ಚಾದ ಕಟೌಟ್, ಬ್ಯಾನರ್ ಹಾವಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>