ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಹಕಾರದಿಂದ ಶ್ರೇಯೋಭಿವೃದ್ಧಿ ಸಾಧ್ಯ’

Last Updated 17 ಸೆಪ್ಟೆಂಬರ್ 2022, 16:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಸಹಕಾರದಿಂದ ಸಹಕಾರ ಸಂಘಗಳು ಅಭಿವೃದ್ಧಿ ಹೊಂದಲು ಸಾಧ್ಯ. ಪರಸ್ಪರ ಸಹಕಾರ ಮತ್ತು ನಂಬಿಕೆಯಿಂದ ಶ್ರೇಯೋಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು.

ವಿದ್ಯಾನಗರದ ರಂಭಾ‍ಪುರಿ ವೀರಗಂಗಾಧರ ಸಮುದಾಯ ಭವನದಲ್ಲಿ ನಡೆದ ರೇಣುಕಾಚಾರ್ಯ ಕೋ–ಆಪ್‌ ಕ್ರೆಡಿಟ್‌ ಸೊಸೈಟಿಯ ರಜತ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಎಲ್ಲರೂ ಆರ್ಥಿಕವಾಗಿ ಸದೃಢರಾಗಬೇಕೆಂದು ಬಯಸುವುದು ಸಹಜ. ಇದಕ್ಕೆ ನಿರಂತರ ಪ್ರಯತ್ನ ಅಗತ್ಯ. ಆಗ ಮಾತ್ರ ಸಾಧನೆ ಸಾಧ್ಯವಾಗುತ್ತದೆ. ಅಂತೆಯೇ ಸಹಕಾರ ಸಂಘಗಳು ಅಭಿವೃದ್ಧಿ ಸಾಧಿಸಿ, ಆರ್ಥಿಕವಾಗಿ ದುರ್ಬಲವಿರುವವರ ನೆರವಿಗೆ ಮುಂದಾಗಬೇಕು’ ಎಂದರು.

ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ಸಹಕಾರಿ ಸಂಘಗಳುಹಿಂದೆಂದಿಗಿಂತಲೂ ಬಲಾಢ್ಯವಾಗಿ ಬೆಳೆಯುತ್ತಿವೆ. ರೇಣುಕಾಚಾರ್ಯರ ಹೆಸರಿನಲ್ಲಿ ಪ್ರಾರಂಭಗೊಂಡ ಸಹಕಾರ ಸಂಘ ಅನೇಕ ಬದಲಾವಣೆಗಳನ್ನು ಕಂಡಿದೆ’ ಎಂದು ಅಭಿಪ್ರಾಯಪಟ್ಟರು.

ಸುಳ್ಳ ಶಿವಸಿದ್ಧರಾಮೇಶ್ವರ ಸ್ವಾಮೀಜಿ, ಶಿರಕೋಳ ಗುರುಸಿದ್ಧೇಶ್ವರ ಸ್ವಾಮೀಜಿ, ಅಮ್ಮಿನಬಾವಿ ಅಭಿನವ ಶಾಂತಲಿಂಗ ಸ್ವಾಮೀಜಿ, ನರಗುಂದ ಸಿದ್ಧಲಿಂಗ ಸ್ವಾಮೀಜಿ ಇದ್ದರು. ರುದ್ರಪ್ಪ ಹಲಗತ್ತಿ, ಶಿವಲೀಲಾ, ಆರ್‌.ಟಿ ಪೋಳ್‌, ಎ.ಎಂ.ಮುಶಾಪುರಿ, ಸವಿತಾ ರಮೇಶ ಪಾತ್ರೋಟಿ, ಪ್ರಕಾಶ ಬೆಂಡಿಗೇರಿ, ವಿಶ್ವನಾಥ ಹಿರೇಗೌಡ ಸೇರಿದಂತೆ ಹಲವು ಗಣ್ಯರಿಗೆ ಗೌರವ ಗುರುರಕ್ಷೆ ನೀಡಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಸೊಸೈಟಿಯ ಅಧ್ಯಕ್ಷ ಶಿವಪುತ್ರಪ್ಪ ಅಂಗಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ದೀಪಾ ಪಟ್ಟಣಶೆಟ್ಟಿ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT