<p><strong>ಹುಬ್ಬಳ್ಳಿ:</strong> ನಾಗರಿಕರಿಗೆ ಸಕಲ ಸೌಲಭ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಾಗಿ ಸಮುದಾಯ ಭವನ ನಿರ್ಮಾಣ ಮಾಡಿಕೊಡಲು ಬದ್ಧವಾಗಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ನಗರದ ಉಣಕಲ್ ಪ್ರದೇಶದ ಅಚ್ಚಮ್ಮ ಕಾಲೊನಿಯಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಅವರ ಆಸಕ್ತಿಯಿಂದಾಗಿ ವಾರ್ಡ್ನಲ್ಲಿ ಒಳಚರಂಡಿ, ಮುಖ್ಯರಸ್ತೆ ದುರಸ್ತಿ ಕಾರ್ಯ ಹಾಗೂ ಸಮುದಾಯ ನಿರ್ಮಾಣ ಕಾರ್ಯಗಳು ಆಗುತ್ತಿವೆ. ಅಭಿವೃದ್ಧಿಯಲ್ಲಿ ಇದು ಮಾದರಿ ಆಗಲಿದೆ ಎಂದರು.</p>.<p>ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಶಾಸಕ ಮಹೇಶ ಟೆಂಗಿನಕಾಯಿ ಅವರ ಸಹಕಾರದಲ್ಲಿ ಇನ್ನಷ್ಟು ಪ್ರಗತಿಪರ ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.</p>.<p>2024ರಲ್ಲಿ ಉಣಕಲ್ನಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಎಂಟು ಕುಟುಂಬಗಳ ಪೈಕಿ ನಾಲ್ಕು ಕುಟುಂಬಕ್ಕೆ ಮಹಾನಗರ ಪಾಲಿಕೆಯಿಂದ ತಲಾ ₹1 ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಲಾಗುವುದು. ದಾಖಲೆ ಒದಗಿಸುವುದು ಪೂರ್ಣವಾದ ಬಳಿಕ ಇನ್ನುಳಿದ ನಾಲ್ಕು ಕುಟುಂಬಕ್ಕೆ ಪರಿಹಾರ ದೊರಕಲಿದೆ ಎಂದು ತಿಳಿಸಲಾಯಿತು.</p>.<p>ಪಾಲಿಕೆ ವಲಯ ಆಯುಕ್ತ ಕೆಂಭಾವಿ, ಮುಖಂಡ ಸೋಮು ಪಾಟೀಲ, ಪರಶುರಾಮ ಹೊಂಬಾಳ, ಕೆ.ಎಸ್.ಕಾಮಟಿ, ರಾಯಣಗೌಡ ಭೀಮನಗೌಡ್ರ, ಶಂಕರ ಚಿಲ್ಲನ್ನವರ ಮತ್ತಿತರರು ಇದ್ದರು. ವಾರ್ಡ್ ಅಧ್ಯಕ್ಷ ಬಸವರಾಜ ಮಾಡಳ್ಳಿ ಸ್ವಾಗತಿಸಿದರು. ಹಿರಿಯರಾದ ಎಸ್.ಐ. ನೇಕಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಾಗರಿಕರಿಗೆ ಸಕಲ ಸೌಲಭ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಾಗಿ ಸಮುದಾಯ ಭವನ ನಿರ್ಮಾಣ ಮಾಡಿಕೊಡಲು ಬದ್ಧವಾಗಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ನಗರದ ಉಣಕಲ್ ಪ್ರದೇಶದ ಅಚ್ಚಮ್ಮ ಕಾಲೊನಿಯಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಅವರ ಆಸಕ್ತಿಯಿಂದಾಗಿ ವಾರ್ಡ್ನಲ್ಲಿ ಒಳಚರಂಡಿ, ಮುಖ್ಯರಸ್ತೆ ದುರಸ್ತಿ ಕಾರ್ಯ ಹಾಗೂ ಸಮುದಾಯ ನಿರ್ಮಾಣ ಕಾರ್ಯಗಳು ಆಗುತ್ತಿವೆ. ಅಭಿವೃದ್ಧಿಯಲ್ಲಿ ಇದು ಮಾದರಿ ಆಗಲಿದೆ ಎಂದರು.</p>.<p>ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಶಾಸಕ ಮಹೇಶ ಟೆಂಗಿನಕಾಯಿ ಅವರ ಸಹಕಾರದಲ್ಲಿ ಇನ್ನಷ್ಟು ಪ್ರಗತಿಪರ ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.</p>.<p>2024ರಲ್ಲಿ ಉಣಕಲ್ನಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಮೃತಪಟ್ಟವರ ಎಂಟು ಕುಟುಂಬಗಳ ಪೈಕಿ ನಾಲ್ಕು ಕುಟುಂಬಕ್ಕೆ ಮಹಾನಗರ ಪಾಲಿಕೆಯಿಂದ ತಲಾ ₹1 ಲಕ್ಷ ಮೊತ್ತದ ಚೆಕ್ ಹಸ್ತಾಂತರಿಸಲಾಗುವುದು. ದಾಖಲೆ ಒದಗಿಸುವುದು ಪೂರ್ಣವಾದ ಬಳಿಕ ಇನ್ನುಳಿದ ನಾಲ್ಕು ಕುಟುಂಬಕ್ಕೆ ಪರಿಹಾರ ದೊರಕಲಿದೆ ಎಂದು ತಿಳಿಸಲಾಯಿತು.</p>.<p>ಪಾಲಿಕೆ ವಲಯ ಆಯುಕ್ತ ಕೆಂಭಾವಿ, ಮುಖಂಡ ಸೋಮು ಪಾಟೀಲ, ಪರಶುರಾಮ ಹೊಂಬಾಳ, ಕೆ.ಎಸ್.ಕಾಮಟಿ, ರಾಯಣಗೌಡ ಭೀಮನಗೌಡ್ರ, ಶಂಕರ ಚಿಲ್ಲನ್ನವರ ಮತ್ತಿತರರು ಇದ್ದರು. ವಾರ್ಡ್ ಅಧ್ಯಕ್ಷ ಬಸವರಾಜ ಮಾಡಳ್ಳಿ ಸ್ವಾಗತಿಸಿದರು. ಹಿರಿಯರಾದ ಎಸ್.ಐ. ನೇಕಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>