<p><strong>ಹುಬ್ಬಳ್ಳಿ: </strong>‘ಖಾದಿ ಉದ್ಯಮ ಪುನಶ್ಚೇತನಗೊಳ್ಳಬೇಕಿದೆ. ನೇಕಾರಿಕೆ ಪರಂಪರೆ ಉಳಿಯಬೇಕಿದೆ. ಸರ್ಕಾರ ಅದಕ್ಕೆ ಬದ್ಧವಾಗಿದ್ದು ಸಬ್ಸಿಡಿ, ಸಾಲ ಮನ್ನಾ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಪ್ರೋತ್ಸಾಹದಾಯಕ ಕಾರ್ಯಕ್ರಮಗಳ ಮೂಲಕ, ಉದ್ಯಮದ ಬೆಳವಣಿಗೆಗೆ ಶ್ರಮಿಸುತ್ತಿದೆ’ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ಬೆಂಗೇರಿ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಶನಿವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗಾಂಧೀಜಿ ಅವರ ತತ್ವಾದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ಸ್ವದೇಶಿ ವಸ್ತುಗಳ ಬಳಕೆಗೆ ಗಾಂಧೀಜಿ ಮಹತ್ವ ನೀಡಿದ್ದರು. ಮೇಕ್ ಇನ್ ಇಂಡಿಯಾ ಘೋಷಣೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧೀಜಿ ಅವರ ಸ್ವದೇಶಿ ತತ್ವವನ್ನು ಪಾಲಿಸುತ್ತಿದ್ದಾರೆ. ಖಾದಿ ಬಟ್ಟೆಗಳನ್ನು ಧರಿಸುವ ಜೊತೆಗೆ, ಈ ಉದ್ಯಮದ ಬೆಂಬಲಕ್ಕೆ ಎಲ್ಲರೂ ನಿಲ್ಲಬೇಕು’ ಎಂದರು.</p>.<p>ಗ್ರಾಮೋದ್ಯೋಗದ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಮಹಾನಗರ ಪಾಲಿಕೆ ಸದಸ್ಯ ಬೀರಪ್ಪ ಖಂಡೇಕಾರ, ಸಂತೋಷ ಚವ್ಹಾಣ, ವೀರಣ್ಣ ಸವಡಿ, ಗೋಪಾಲ ಬದ್ದಿ, ಮನೋಜ ಪಾಟೀಲ, ಈಶ್ವರಗೌಡ ಪಾಟೀಲ್, ಎಂ.ವೈ. ನರಗುಂದ, ದತ್ತಮೂರ್ತಿ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>‘ಖಾದಿ ಉದ್ಯಮ ಪುನಶ್ಚೇತನಗೊಳ್ಳಬೇಕಿದೆ. ನೇಕಾರಿಕೆ ಪರಂಪರೆ ಉಳಿಯಬೇಕಿದೆ. ಸರ್ಕಾರ ಅದಕ್ಕೆ ಬದ್ಧವಾಗಿದ್ದು ಸಬ್ಸಿಡಿ, ಸಾಲ ಮನ್ನಾ, ಉದ್ಯೋಗ ಸೃಷ್ಟಿ ಸೇರಿದಂತೆ ಹಲವು ಪ್ರೋತ್ಸಾಹದಾಯಕ ಕಾರ್ಯಕ್ರಮಗಳ ಮೂಲಕ, ಉದ್ಯಮದ ಬೆಳವಣಿಗೆಗೆ ಶ್ರಮಿಸುತ್ತಿದೆ’ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.</p>.<p>ಬೆಂಗೇರಿ ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ಶನಿವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಗಾಂಧೀಜಿ ಅವರ ತತ್ವಾದರ್ಶಗಳನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಶಾಸಕ ಜಗದೀಶ ಶೆಟ್ಟರ್ ಮಾತನಾಡಿ, ‘ಸ್ವದೇಶಿ ವಸ್ತುಗಳ ಬಳಕೆಗೆ ಗಾಂಧೀಜಿ ಮಹತ್ವ ನೀಡಿದ್ದರು. ಮೇಕ್ ಇನ್ ಇಂಡಿಯಾ ಘೋಷಣೆ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಗಾಂಧೀಜಿ ಅವರ ಸ್ವದೇಶಿ ತತ್ವವನ್ನು ಪಾಲಿಸುತ್ತಿದ್ದಾರೆ. ಖಾದಿ ಬಟ್ಟೆಗಳನ್ನು ಧರಿಸುವ ಜೊತೆಗೆ, ಈ ಉದ್ಯಮದ ಬೆಂಬಲಕ್ಕೆ ಎಲ್ಲರೂ ನಿಲ್ಲಬೇಕು’ ಎಂದರು.</p>.<p>ಗ್ರಾಮೋದ್ಯೋಗದ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಮಹಾನಗರ ಪಾಲಿಕೆ ಸದಸ್ಯ ಬೀರಪ್ಪ ಖಂಡೇಕಾರ, ಸಂತೋಷ ಚವ್ಹಾಣ, ವೀರಣ್ಣ ಸವಡಿ, ಗೋಪಾಲ ಬದ್ದಿ, ಮನೋಜ ಪಾಟೀಲ, ಈಶ್ವರಗೌಡ ಪಾಟೀಲ್, ಎಂ.ವೈ. ನರಗುಂದ, ದತ್ತಮೂರ್ತಿ ಕುಲಕರ್ಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>