<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 35ರ ಪಿಎಎಂಸಿ ಹಿಂಭಾಗದ ವಿವಿಧ ಬಡಾವಣೆಗಳ ಸಾರ್ವಜನಿಕರ ಅಹವಾಲುಗಳನ್ನು ಶಾಸಕ ಮಹೇಶ ಟೆಂಗಿನಕಾಯಿ ಶನಿವಾರ ಆಲಿಸಿದರು.</p>.<p>ನಂತರ ಮಾತನಾಡಿದ ಅವರು, ‘ರಾಜ್ಯ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುದಾನ ನೀಡದ ಕಾರಣ ಅಭಿವೃದ್ಧಿ ಕುಂಠಿತವಾಗಿದೆ. ಆದರೂ ಅನುದಾನ ತರಲು ಪ್ರಯತ್ನಿಸಲಾಗುತ್ತಿದೆ. ಕ್ಷೇತ್ರದ ಎಲ್ಲ ಬಡಾವಣೆಗಳ ಅಭಿವೃದ್ಧಿಗೆ ಬದ್ಧ’ ಎಂದರು.</p>.<p>‘ಕ್ಷೇತ್ರದಲ್ಲಿ ಕಳೆದೆರಡು ವರ್ಷಗಳಲ್ಲಿ 60 ಕಿ.ಮೀಗೂ ಹೆಚ್ಚು ರಸ್ತೆ ಅಭಿವೃದ್ಧಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ₹10 ಲಕ್ಷ ವೆಚ್ಚದಲ್ಲಿ ತೆರೆದ ಜಿಮ್ ನಿರ್ಮಿಸಲಾಗುತ್ತಿದ್ದು, ಎಪಿಎಂಸಿ ಹಿಂಭಾಗದ 11 ಬಡಾವಣೆಗಳ ಸಂಪೂರ್ಣ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.</p>.<p>‘ಅವಳಿ ನಗರಕ್ಕೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಆದರೆ, ರಾಜ್ಯ ಸರ್ಕಾರ ಅನುದಾನ ನೀಡಲು ವಿಳಂಬ ಮಾಡುತ್ತಿದೆ’ ಎಂದು ದೂರಿದರು.</p>.<p>ಎಪಿಎಂಸಿ ಹಿಂಭಾಗದ ಲೇಔಟ್ಗಳ ನಿವಾಸಿಗಳ ಸಂಘದ ಪ್ರಮುಖರು ಹಲವು ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದರು.</p>.<p>ಮಹಾನಗರ ಪಾಲಿಕೆಯಿಂದ ಕಸ ಸಂಗ್ರಹಿಸುವ ನೂತನ ವಾಹನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಬಸವರಾಜ್ ಶಿವಪುರ, ಹೆಮನಗೌಡ ಬದ್ನೂರ್, ರಮೇಶ ಮಡಿವಾಳರ, ಅಮರ ಹಬೀಬ, ಸಿದ್ದಲಿಂಗ ಮಿರ್ಜಿ, ನಂದೀಶ ಗುಂಡೂರು, ರವಿಕುಮಾರ ಪಾಟೀಲ ಇದ್ದರು.</p>.<div><blockquote>ವಾರ್ಡ್ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಮಲ್ಲಿಕಾರ್ಜುನ ಗುಂಡೂರು ಮಹಾನಗರ ಪಾಲಿಕೆ ಸದಸ್ಯ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 35ರ ಪಿಎಎಂಸಿ ಹಿಂಭಾಗದ ವಿವಿಧ ಬಡಾವಣೆಗಳ ಸಾರ್ವಜನಿಕರ ಅಹವಾಲುಗಳನ್ನು ಶಾಸಕ ಮಹೇಶ ಟೆಂಗಿನಕಾಯಿ ಶನಿವಾರ ಆಲಿಸಿದರು.</p>.<p>ನಂತರ ಮಾತನಾಡಿದ ಅವರು, ‘ರಾಜ್ಯ ಕಾಂಗ್ರೆಸ್ ಸರ್ಕಾರ ಸಮರ್ಪಕವಾಗಿ ಅನುದಾನ ನೀಡದ ಕಾರಣ ಅಭಿವೃದ್ಧಿ ಕುಂಠಿತವಾಗಿದೆ. ಆದರೂ ಅನುದಾನ ತರಲು ಪ್ರಯತ್ನಿಸಲಾಗುತ್ತಿದೆ. ಕ್ಷೇತ್ರದ ಎಲ್ಲ ಬಡಾವಣೆಗಳ ಅಭಿವೃದ್ಧಿಗೆ ಬದ್ಧ’ ಎಂದರು.</p>.<p>‘ಕ್ಷೇತ್ರದಲ್ಲಿ ಕಳೆದೆರಡು ವರ್ಷಗಳಲ್ಲಿ 60 ಕಿ.ಮೀಗೂ ಹೆಚ್ಚು ರಸ್ತೆ ಅಭಿವೃದ್ಧಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ₹10 ಲಕ್ಷ ವೆಚ್ಚದಲ್ಲಿ ತೆರೆದ ಜಿಮ್ ನಿರ್ಮಿಸಲಾಗುತ್ತಿದ್ದು, ಎಪಿಎಂಸಿ ಹಿಂಭಾಗದ 11 ಬಡಾವಣೆಗಳ ಸಂಪೂರ್ಣ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.</p>.<p>‘ಅವಳಿ ನಗರಕ್ಕೆ ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದೆ. ಆದರೆ, ರಾಜ್ಯ ಸರ್ಕಾರ ಅನುದಾನ ನೀಡಲು ವಿಳಂಬ ಮಾಡುತ್ತಿದೆ’ ಎಂದು ದೂರಿದರು.</p>.<p>ಎಪಿಎಂಸಿ ಹಿಂಭಾಗದ ಲೇಔಟ್ಗಳ ನಿವಾಸಿಗಳ ಸಂಘದ ಪ್ರಮುಖರು ಹಲವು ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆಸಿ, ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದರು.</p>.<p>ಮಹಾನಗರ ಪಾಲಿಕೆಯಿಂದ ಕಸ ಸಂಗ್ರಹಿಸುವ ನೂತನ ವಾಹನಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಬಸವರಾಜ್ ಶಿವಪುರ, ಹೆಮನಗೌಡ ಬದ್ನೂರ್, ರಮೇಶ ಮಡಿವಾಳರ, ಅಮರ ಹಬೀಬ, ಸಿದ್ದಲಿಂಗ ಮಿರ್ಜಿ, ನಂದೀಶ ಗುಂಡೂರು, ರವಿಕುಮಾರ ಪಾಟೀಲ ಇದ್ದರು.</p>.<div><blockquote>ವಾರ್ಡ್ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು </blockquote><span class="attribution">ಮಲ್ಲಿಕಾರ್ಜುನ ಗುಂಡೂರು ಮಹಾನಗರ ಪಾಲಿಕೆ ಸದಸ್ಯ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>