<p><strong>ಧಾರವಾಡ:</strong> ‘ಶ್ರದ್ಧೆ, ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಿ ಪರೀಕ್ಷೆ ಎದುರಿಸಿದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ’ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಹೇಳಿದರು.</p>.<p>ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್ ಆಯುಕ್ತರ ಕಚೇರಿ ವತಿಯಿಂದ ನಗರದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಭಾನುವಾರ ಆಯೋಜಿಸಿದ್ದ ವಿಶೇಷ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೃಢ ಮನಸ್ಸಿನಿಂದ ಸಾಧನೆ ಮಾಡುವವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧಿಸುವ ಛಲವಿರಬೇಕಷ್ಟೆ. ಸೋತರೆ ಕುಗ್ಗದೆ ಮತ್ತೆ ಪ್ರಯತ್ನ ಮಾಡಿದರೆ ಸೋಲೂ ಗೆಲುವಾಗಿ ಪರಿವರ್ತನೆಗೊಳ್ಳುತ್ತದೆ’ ಎಂದರು. </p>.<p>‘ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ಬೇಕೋ? ಅಥವಾ ಬೇಡವೋ? ಎಂಬುದು ಮುಖ್ಯ. ಏನು? ಓದಬೇಕು. ಎಷ್ಟು ಓದಬೇಕು. ಹೇಗೆ ಓದಬೇಕೆಂಬ ಅರಿವು ಇರಬೇಕು. ಪರೀಕ್ಷೆ ಎದುರಿಸಲು ಸಾಕಷ್ಟು ಪೂರ್ವ ತಯಾರಿ ನಡೆಸಬೇಕು’ ಎಂದು ಸಲಹೆ ನೀಡಿದರು. </p>.<p>‘ಮನೆಯಲ್ಲಿ ಕಷ್ಟ ಇದೆ, ಹಣಕಾಸಿನ ತೊಂದರೆ ಇದೆ, ಓದುವಾಗ ಏಕಾಗ್ರತೆ ಸಿಗುತ್ತಿಲ್ಲ. ಮುಂತಾದ ಕಾರಣಗಳನ್ನು ನೀಡಿ ಕಲಿಕೆಯಿಂದ ಹಲವರು ದೂರ ಹೋಗುತ್ತಾರೆ. ಸಮಸ್ಯೆಗಳನ್ನೆಲ್ಲಾ ಪಕ್ಕಕ್ಕಿಟ್ಟು ಕಷ್ಟ ಪಟ್ಟು ಓದಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಬದುಕಬೇಕು’ ಎಂದರು.</p>.<p>‘ಸ್ಪರ್ಧಾರ್ಥಿಗಳು ಪರೀಕ್ಷೆಗೆ ಅಗತ್ಯವಿರುವ ಪುಸ್ತಕಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ನಿಗದಿತ ಕಾಲಾವಧಿಯಲ್ಲಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವ ಕೌಶಲವನ್ನು ರೂಢಿಸಿಕೊಳ್ಳಿಬೇಕು. ಏಕಾಂಗಿ ಮತ್ತು ಗುಂಪು ಅಧ್ಯಯನ ಎರಡನ್ನೂ ಸಮತೋಲನದಲ್ಲಿ ಬಳಸಬೇಕು ಮತ್ತು ಓದುವ ಜೊತೆಗೆ ಮಾಹಿತಿಯನ್ನು ನೆನಪಿಟ್ಟುಕೊಳ್ಳುವ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಪಿಎಎಸ್ಐ ಮಂಜುನಾಥ ಟಿ.ಎಂ.ಮಾತನಾಡಿ, ‘ಸ್ಪರ್ಧಾರ್ಥಿಗಳು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾದ ಸಮಯ ನಿರ್ವಹಣೆಯ ತಂತ್ರವನ್ನು ರೂಪಿಸಿಕೊಂಡರೆ ಯಶಸ್ಸು ಖಂಡಿತವಾಗಿಯೂ ಲಭಿಸುತ್ತದೆ. ತಮ್ಮಲ್ಲಿರುವ ದೌರ್ಬಲ್ಯ ತೊಡೆದು ಹಾಕಿ, ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು’ ಎಂದರು.</p>.<p>ಪಿಎಸ್ಐ ಮಲ್ಲಿಕಾರ್ಜುನ ಹೊಸೂರು ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಫಲತೆ ಹೊಂದಿದರೆ, ಎದೆಗುಂದುವ ಅವಶ್ಯಕತೆಯಿಲ್ಲ. ಬೇರೆ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬಹುದು’ ಎಂದರು.</p>.<p>ಪಿಎಸ್ಐ ಅಕ್ಷತಾ ಗದಗ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಪ್ರತಿ ವ್ಯಕ್ತಿಯೂ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರಬೇಕು. ಉತ್ತಮ ಸ್ನೇಹಿತರ ಸಹವಾಸ ಮಾಡಬೇಕು. ಸಮಯ ಪರಿಪಾಲನೆಗೆ ಒತ್ತು ನೀಡಬೇಕು’ಎಂದು ತಿಳಿಸಿದರು.</p>.<p>ಡಿಸಿಪಿಗಳಾದ ಮಹಾನಿಂಗ ನಂದಗಾವಿ, ಸಿ.ಆರ್ ರವೀಶ್, ಎಸಿಪಿ ಪ್ರಶಾಂತ ಸಿದ್ದನಗೌಡರ, ನಾಗರಾಜ ಕಟಕಬಾವಿ ಉಪಸ್ಥಿತರಿದ್ದರು. </p>.<p><strong>ಉತ್ತಮ ಬದುಕಿಗೆ ಹಲವಾರು ದಾರಿ ಉತ್ತರ ಬರೆಯಲು ಕೌಶಲವಿರಲಿ ಮಾನಸಿಕ, ದೈಹಿಕ ಸದೃಢತೆ ಇರಲಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಶ್ರದ್ಧೆ, ಕಠಿಣ ಪರಿಶ್ರಮದಿಂದ ಅಧ್ಯಯನ ನಡೆಸಿ ಪರೀಕ್ಷೆ ಎದುರಿಸಿದರೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ’ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಹೇಳಿದರು.</p>.<p>ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್ ಆಯುಕ್ತರ ಕಚೇರಿ ವತಿಯಿಂದ ನಗರದ ಮಗದುಮ್ಮ ಆನಂದ ಕಲ್ಯಾಣ ಮಂಟಪದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಆಕಾಂಕ್ಷಿಗಳಿಗೆ ಭಾನುವಾರ ಆಯೋಜಿಸಿದ್ದ ವಿಶೇಷ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದೃಢ ಮನಸ್ಸಿನಿಂದ ಸಾಧನೆ ಮಾಡುವವರಿಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧಿಸುವ ಛಲವಿರಬೇಕಷ್ಟೆ. ಸೋತರೆ ಕುಗ್ಗದೆ ಮತ್ತೆ ಪ್ರಯತ್ನ ಮಾಡಿದರೆ ಸೋಲೂ ಗೆಲುವಾಗಿ ಪರಿವರ್ತನೆಗೊಳ್ಳುತ್ತದೆ’ ಎಂದರು. </p>.<p>‘ಸ್ಪರ್ಧಾತ್ಮಕ ಪರೀಕ್ಷೆಗೆ ಕೋಚಿಂಗ್ ಬೇಕೋ? ಅಥವಾ ಬೇಡವೋ? ಎಂಬುದು ಮುಖ್ಯ. ಏನು? ಓದಬೇಕು. ಎಷ್ಟು ಓದಬೇಕು. ಹೇಗೆ ಓದಬೇಕೆಂಬ ಅರಿವು ಇರಬೇಕು. ಪರೀಕ್ಷೆ ಎದುರಿಸಲು ಸಾಕಷ್ಟು ಪೂರ್ವ ತಯಾರಿ ನಡೆಸಬೇಕು’ ಎಂದು ಸಲಹೆ ನೀಡಿದರು. </p>.<p>‘ಮನೆಯಲ್ಲಿ ಕಷ್ಟ ಇದೆ, ಹಣಕಾಸಿನ ತೊಂದರೆ ಇದೆ, ಓದುವಾಗ ಏಕಾಗ್ರತೆ ಸಿಗುತ್ತಿಲ್ಲ. ಮುಂತಾದ ಕಾರಣಗಳನ್ನು ನೀಡಿ ಕಲಿಕೆಯಿಂದ ಹಲವರು ದೂರ ಹೋಗುತ್ತಾರೆ. ಸಮಸ್ಯೆಗಳನ್ನೆಲ್ಲಾ ಪಕ್ಕಕ್ಕಿಟ್ಟು ಕಷ್ಟ ಪಟ್ಟು ಓದಿ ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ಬದುಕಬೇಕು’ ಎಂದರು.</p>.<p>‘ಸ್ಪರ್ಧಾರ್ಥಿಗಳು ಪರೀಕ್ಷೆಗೆ ಅಗತ್ಯವಿರುವ ಪುಸ್ತಕಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ನಿಗದಿತ ಕಾಲಾವಧಿಯಲ್ಲಿ ಎಲ್ಲ ಪ್ರಶ್ನೆಗಳಿಗೆ ಉತ್ತರಿಸುವ ಕೌಶಲವನ್ನು ರೂಢಿಸಿಕೊಳ್ಳಿಬೇಕು. ಏಕಾಂಗಿ ಮತ್ತು ಗುಂಪು ಅಧ್ಯಯನ ಎರಡನ್ನೂ ಸಮತೋಲನದಲ್ಲಿ ಬಳಸಬೇಕು ಮತ್ತು ಓದುವ ಜೊತೆಗೆ ಮಾಹಿತಿಯನ್ನು ನೆನಪಿಟ್ಟುಕೊಳ್ಳುವ ತಂತ್ರಗಳನ್ನು ಅಳವಡಿಸಿಕೊಳ್ಳಬೇಕು’ ಎಂದರು.</p>.<p>ಪಿಎಎಸ್ಐ ಮಂಜುನಾಥ ಟಿ.ಎಂ.ಮಾತನಾಡಿ, ‘ಸ್ಪರ್ಧಾರ್ಥಿಗಳು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾದ ಸಮಯ ನಿರ್ವಹಣೆಯ ತಂತ್ರವನ್ನು ರೂಪಿಸಿಕೊಂಡರೆ ಯಶಸ್ಸು ಖಂಡಿತವಾಗಿಯೂ ಲಭಿಸುತ್ತದೆ. ತಮ್ಮಲ್ಲಿರುವ ದೌರ್ಬಲ್ಯ ತೊಡೆದು ಹಾಕಿ, ಆತ್ಮವಿಶ್ವಾಸದಿಂದ ಮುನ್ನುಗ್ಗಬೇಕು’ ಎಂದರು.</p>.<p>ಪಿಎಸ್ಐ ಮಲ್ಲಿಕಾರ್ಜುನ ಹೊಸೂರು ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಫಲತೆ ಹೊಂದಿದರೆ, ಎದೆಗುಂದುವ ಅವಶ್ಯಕತೆಯಿಲ್ಲ. ಬೇರೆ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬಹುದು’ ಎಂದರು.</p>.<p>ಪಿಎಸ್ಐ ಅಕ್ಷತಾ ಗದಗ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಪ್ರತಿ ವ್ಯಕ್ತಿಯೂ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರಬೇಕು. ಉತ್ತಮ ಸ್ನೇಹಿತರ ಸಹವಾಸ ಮಾಡಬೇಕು. ಸಮಯ ಪರಿಪಾಲನೆಗೆ ಒತ್ತು ನೀಡಬೇಕು’ಎಂದು ತಿಳಿಸಿದರು.</p>.<p>ಡಿಸಿಪಿಗಳಾದ ಮಹಾನಿಂಗ ನಂದಗಾವಿ, ಸಿ.ಆರ್ ರವೀಶ್, ಎಸಿಪಿ ಪ್ರಶಾಂತ ಸಿದ್ದನಗೌಡರ, ನಾಗರಾಜ ಕಟಕಬಾವಿ ಉಪಸ್ಥಿತರಿದ್ದರು. </p>.<p><strong>ಉತ್ತಮ ಬದುಕಿಗೆ ಹಲವಾರು ದಾರಿ ಉತ್ತರ ಬರೆಯಲು ಕೌಶಲವಿರಲಿ ಮಾನಸಿಕ, ದೈಹಿಕ ಸದೃಢತೆ ಇರಲಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>