<p><strong>ನವಲಗುಂದ</strong>: ‘ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಪುಸ್ತಕಗಳ ಜೊತೆಗೆ ಪತ್ರಿಕೆಗಳನ್ನು ಓದಬೇಕು’ ಎಂದು ತಾಲ್ಲೂಕಿನ ಚಿಲಕವಾಡ ಪಿಯು ಕಾಲೇಜು ಪ್ರಾಂಶುಪಾಲ ಮಂಜುಳಾ ಕಲ್ಯಾಣಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಮಂಗಳವಾರ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಜಿಲ್ಲಾ ಉದ್ಯೋಗ ಮಾಹಿತಿ ಕೇಂದ್ರ ಹುಬ್ಬಳ್ಳಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಯುವನಿಧಿ ಯೋಜನೆಯ ಅರಿವು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.</p>.<p>ಜಿಲ್ಲಾ ಉದ್ಯೋಗ ಮಾಹಿತಿ ಕೇಂದ್ರದ ಸಹಾಯಕ ನೇಮಕಾತಿ ಅಧಿಕಾರಿ ಎಂ.ಎಂ. ಕುದುರೆಗೊಂಡ ಹಾಗೂ ತರಬೇತಿದಾರರಾದ ನಾಗರಾಜ್ ಬಡಿಗೇರ ಮಾತನಾಡಿ, ‘ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಕೂಡ ಒಂದು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಈ ಯೋಜನೆ ತರಲಾಗಿದ್ದು ತಾಲ್ಲೂಕಿನಲ್ಲಿನರುವ ನಿರುದ್ಯೋಗಿ ಯುವಜನರು ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಎಂ.ಬಿ. ಬಾಗಡಿ ಮಾತನಾಡಿ ‘ಯುವನಿಧಿ ಯೋಜನೆಯು ಯುವ ಸಮೂಹಕ್ಕೆ ದಾರಿದೀಪವಾಗಿದ್ದು, ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದರು.</p>.<p>ಪ್ಲೇಸ್ಮೆಂಟ್ ಅಧಿಕಾರಿ ಗಂಗಾಧರ ಗೌಡರ ಪ್ರಸ್ತಾವಕವಾಗಿ ಮಾತನಾಡಿದರು, ಐ.ಕ್ಯೂ.ಎ.ಸಿ ಸಂಚಾಲಕರಾದ ಸಂತೋಷ ಹುಬ್ಬಳ್ಳಿ, ಸಹ ಸಂಚಾಲಕರಾದ ಪ್ರಸನ್ನ ಪಂಡರಿ ಉಪಸ್ಥಿತರಿದ್ದರು. ರವಿ ಬ್ಯಾಹಟ್ಟಿ ನಿರೂಪಣೆ ಗ್ರಂಥಪಾಲಕರಾದ ಶ್ರೀಧರ ಲೋಣಕರ ವಂದಿಸಿದರು.</p>.<p>ನಂತರ ಸ್ಥಳದಲ್ಲಿಯೇ ಇದ್ದ ಅಭ್ಯರ್ಥಿಗಳ ಯುವನಿಧಿ ಯೋಜನೆಗೆ ನೋಂದಣಿ ಕಾರ್ಯ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ</strong>: ‘ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಲು ಪುಸ್ತಕಗಳ ಜೊತೆಗೆ ಪತ್ರಿಕೆಗಳನ್ನು ಓದಬೇಕು’ ಎಂದು ತಾಲ್ಲೂಕಿನ ಚಿಲಕವಾಡ ಪಿಯು ಕಾಲೇಜು ಪ್ರಾಂಶುಪಾಲ ಮಂಜುಳಾ ಕಲ್ಯಾಣಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಮಂಗಳವಾರ ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ, ಜಿಲ್ಲಾ ಉದ್ಯೋಗ ಮಾಹಿತಿ ಕೇಂದ್ರ ಹುಬ್ಬಳ್ಳಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಯುವನಿಧಿ ಯೋಜನೆಯ ಅರಿವು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.</p>.<p>ಜಿಲ್ಲಾ ಉದ್ಯೋಗ ಮಾಹಿತಿ ಕೇಂದ್ರದ ಸಹಾಯಕ ನೇಮಕಾತಿ ಅಧಿಕಾರಿ ಎಂ.ಎಂ. ಕುದುರೆಗೊಂಡ ಹಾಗೂ ತರಬೇತಿದಾರರಾದ ನಾಗರಾಜ್ ಬಡಿಗೇರ ಮಾತನಾಡಿ, ‘ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಕೂಡ ಒಂದು. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಈ ಯೋಜನೆ ತರಲಾಗಿದ್ದು ತಾಲ್ಲೂಕಿನಲ್ಲಿನರುವ ನಿರುದ್ಯೋಗಿ ಯುವಜನರು ಇದರ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಎಂ.ಬಿ. ಬಾಗಡಿ ಮಾತನಾಡಿ ‘ಯುವನಿಧಿ ಯೋಜನೆಯು ಯುವ ಸಮೂಹಕ್ಕೆ ದಾರಿದೀಪವಾಗಿದ್ದು, ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದರು.</p>.<p>ಪ್ಲೇಸ್ಮೆಂಟ್ ಅಧಿಕಾರಿ ಗಂಗಾಧರ ಗೌಡರ ಪ್ರಸ್ತಾವಕವಾಗಿ ಮಾತನಾಡಿದರು, ಐ.ಕ್ಯೂ.ಎ.ಸಿ ಸಂಚಾಲಕರಾದ ಸಂತೋಷ ಹುಬ್ಬಳ್ಳಿ, ಸಹ ಸಂಚಾಲಕರಾದ ಪ್ರಸನ್ನ ಪಂಡರಿ ಉಪಸ್ಥಿತರಿದ್ದರು. ರವಿ ಬ್ಯಾಹಟ್ಟಿ ನಿರೂಪಣೆ ಗ್ರಂಥಪಾಲಕರಾದ ಶ್ರೀಧರ ಲೋಣಕರ ವಂದಿಸಿದರು.</p>.<p>ನಂತರ ಸ್ಥಳದಲ್ಲಿಯೇ ಇದ್ದ ಅಭ್ಯರ್ಥಿಗಳ ಯುವನಿಧಿ ಯೋಜನೆಗೆ ನೋಂದಣಿ ಕಾರ್ಯ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>