ಹುಬ್ಬಳ್ಳಿ: ‘ನನ್ನ ಮೇಲೆ ಬಂದಿರುವುದು ಚೆಕ್ ಬೌನ್ಸ್ ಪ್ರಕರಣದ ಆರೋಪವಲ್ಲ. ನಾವೇ ಕೋರ್ಟ್ನಲ್ಲಿ ರಾಜಿ ಮಾಡಿಕೊಂಡಿದ್ದೇವೆ’ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ರಾಜೇಶ್ ಎಕ್ಸ್ ಪೋರ್ಟ್ ಸಂಸ್ಥೆ ಮಾಡಿದ ಚೆಕ್ ಬೌನ್ಸ್ ಪ್ರಕರಣದ ಕೋರ್ಟ್ ತೀರ್ಪಿಗೆ ಶುಕ್ರವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಕೋರ್ಟ್ ನಲ್ಲಿ ಒಪ್ಪಿಕೊಂಡು, ಲಿಖಿತವಾಗಿ ಬರೆದು ಇತ್ಯರ್ಥ ಮಾಡಿಕೊಳ್ಳುವುದಾಗಿ ಹೇಳಿದ್ದೇನೆ. ಇದು 12 ವರ್ಷದ ಹಿಂದಿನ ವ್ಯಾಜ್ಯ. ಅಲ್ಲದೇ ಇದು ನನ್ನ ವೈಯಕ್ತಿಕವೂ ಅಲ್ಲ. ಮಾಧ್ಯಮದವರು ಜವಾಬ್ದಾರಿಯುತವಾಗಿ ಮಾಹಿತಿ ನೀಡಬೇಕು’ ಎಂದರು.