ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕರು ವಾಸ್ತವ್ಯ ಹೂಡಿರುವಹೋಟೆಲ್ ಹೊರಗೆ ಬಿಜೆಪಿ ಕಾರ್ಯಕರ್ತರು ‘ಗೋ ಬ್ಯಾಕ್ ಶಿವಕುಮಾರ್’ ಎಂದು ಕೂಗಿರುವುದನ್ನು ಗಮನಿಸಿದರೆ, ಸರ್ಕಾರ ಅಸ್ಥಿರಗೊಳಿಸುವುದರಲ್ಲಿ ಬಿಜೆಪಿ ಪಿತೂರಿ ಸ್ಪಷ್ಟವಾಗಿದೆ. ಪ್ರಜಾಪ್ರಭುತ್ವದ ನಿಯಮಗಳಿಗೆ ಅನುಗುಣವಾಗಿ, ಒಬ್ಬ ಸಹೋದರನಾಗಿ ಶಿವಕುಮಾರ್ ಅವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಲು ಮುಂಬೈಗೆ ತೆರಳಿ ಶಾಸಕರನ್ನು ಮಾತನಾಡಿಸಲು ಪ್ರಯತ್ನಿಸಿದ್ದಾರೆ. ಆದರೆ ಇದಕ್ಕೆ ಅವಕಾಶ ನೀಡದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಜಾ ವಿರೋಧಿ ನೀತಿಗೆ ಹಿಡಿದ ಕನ್ನಡಿಯಾಗಿದೆ. ಇದು ಬಿಜೆಪಿಯ ಸಂವಿಧಾನ ವಿರೋಧಿ ನಡೆಯಾಗಿದೆ’ ಎಂದು ಆರೋಪಿಸಿದರು.