ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜೀವ್ ಗಾಂಧಿ ಅವರು ಗ್ರಾಮೀಣ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮ ಸ್ವರಾಜ್ಯಕ್ಕೆ ಒತ್ತು ನೀಡಿದ್ದರು. ಪ್ರಧಾನಿಯಾಗಿದ್ದ ಪಿ.ವಿ. ನರಸಿಂಹರಾವ್ ಅವರು ಸಂವಿಧಾನದ 73 ಮತ್ತು 74ನೇ ಕಲಂ ತಿದ್ದುಪಡಿ ಮಾಡಿ ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಯಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದರು. ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸಿದ್ದು ಸಹ ಕಾಂಗ್ರೆಸ್’ ಎಂದರು.