<p><strong>ಹುನಗುಂದ</strong>: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಶಕ್ತಿ ಯೋಜನೆ ಅಡಿ ₹500 ಕೋಟಿ ಜನ ಮಹಿಳೆಯರು ಉಚಿತ ಪ್ರಯಾಣವನ್ನು ಮಾಡಿದ್ದು ವಿಶೇಷವಾಗಿದೆ’ ಎಂದು ಶಾಸಕ ವಿಜಯಾನಂದ ಕಾಶಪ್ಪನವರು ಹೇಳಿದರು.</p>.<p>ಪಟ್ಟಣದ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ದೇಶದಲ್ಲಿ ಯಾವ ಸರ್ಕಾರವೂ ಇಂತಹ ಮಹತ್ವದ ಪಂಚ ಗ್ಯಾರಂಟಿ ಯೋಜನೆಯನ್ನು ಕೊಟ್ಟಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗ ಮತ್ತು ಎಲ್ಲ ಕೋಮೀನ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಯ ತಲುಪಿದೆ. ನುಡಿದಂತೆ ನಡೆದ ಸರ್ಕಾರ ನಮ್ಮದು’ ಎಂದರು.</p>.<p>‘ಶಕ್ತಿ ಯೋಜನೆಯಡಿ ಹುನಗುಂದ ಮತ್ತು ಇಳಕಲ್ ಅವಳಿ ತಾಲ್ಲೂಕಿನಿಂದ 2,50 ಕೋಟಿ ಮಹಿಳೆಯರು ಪ್ರಯಾಣ ಬೆಳೆಸಿದ್ದು, ಇದಕ್ಕೆ ಸರ್ಕಾರ ₹92.78 ಕೋಟಿ ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಅವಳಿ ತಾಲ್ಲೂಕಿನ 67,728 ಫಲಾನುಭವಿಗಳ ಖಾತೆಗೆ ₹167 ಕೋಟಿ ಜಮಾ ಮಾಡಲಾಗಿದೆ. ಇನ್ನು ಗೃಹ ಜ್ಯೋತಿ ಯೋಜನೆಯಲ್ಲಿ ಅವಳಿ ತಾಲ್ಲೂಕಿನ 70,425 ಕುಟುಂಬಗಳಿಗೆ ₹54.56 ಕೋಟಿ ಮೌಲ್ಯದ ಉಚಿತ ವಿದ್ಯುತ್ ನೀಡಲಾಗಿದೆ. ಯುವನಿಧಿ ಅಡಿಯಲ್ಲಿ 1,350 ನಿರುದ್ಯೋಗಿ ಯುವಕರ ಖಾತೆಗೆ ₹2,62 ಕೋಟಿ ಜಮಾ ಮಾಡಲಾಗಿದೆ’ ಎಂದರು.</p>.<p>ಚಿತ್ತರಗಿ ಸಂಸ್ಥಾನ ಮಠ ಇಳಕಲ್ ಗುರು ಮಹಾಂತ ಶ್ರೀ ಮಾತನಾಡಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಘಟಕದ ಅಧ್ಯಕ್ಷ ಸಾಗರ ತೆಕ್ಕಣ್ಣವರ ಮಾತನಾಡಿ, ‘ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುವುದಕ್ಕಾಗಿ ಆರಂಭದಲ್ಲಿ ₹36 ಸಾವಿರ ಕೋಟಿ ಹಣ ಮೀಸಲಿಟ್ಟರೆ ಸದ್ಯ ₹52.32 ಸಾವಿರ ಕೋಟಿ ಮೀಸಲಿಡಲಾಗಿದೆ’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಅಧ್ಯಕ್ಷ ಮುತ್ತಣ್ಣ ಕಲಗುಡಿ ಮತ್ತು ಮಹಾಂತೇಶ ಹನಮನಾಳ ಅವರು ಅಧಿಕಾರ ಸ್ವೀಕಾರ ಮಾಡಿದರು.</p>.<p>ಪುರಸಭೆಯ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಇಳಕಲ್ ನಗರಸಭೆಯ ಅಧ್ಯಕ್ಷೆ ಸುಧಾರಾಣಿ ಸಂಗಮ, ಹುನಗುಂದ ಮತ್ತು ಇಳಕಲ್ ತಾಲ್ಲೂಕು ಪಂಚಾಯಿತಿ ಇಒಗಳಾದ ಮುರಳಿಧರ ದೇಶಪಾಂಡೆ, ಸೋಮಲಿಂಗಪ್ಪ ಅಂಟರತಾನಿ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅವಳಿ ತಾಲ್ಲೂಕಿನ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುನಗುಂದ</strong>: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲಿ ಶಕ್ತಿ ಯೋಜನೆ ಅಡಿ ₹500 ಕೋಟಿ ಜನ ಮಹಿಳೆಯರು ಉಚಿತ ಪ್ರಯಾಣವನ್ನು ಮಾಡಿದ್ದು ವಿಶೇಷವಾಗಿದೆ’ ಎಂದು ಶಾಸಕ ವಿಜಯಾನಂದ ಕಾಶಪ್ಪನವರು ಹೇಳಿದರು.</p>.<p>ಪಟ್ಟಣದ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಆಡಳಿತ ಮತ್ತು ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ತಾಲ್ಲೂಕುಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಕಚೇರಿ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ದೇಶದಲ್ಲಿ ಯಾವ ಸರ್ಕಾರವೂ ಇಂತಹ ಮಹತ್ವದ ಪಂಚ ಗ್ಯಾರಂಟಿ ಯೋಜನೆಯನ್ನು ಕೊಟ್ಟಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗ ಮತ್ತು ಎಲ್ಲ ಕೋಮೀನ ಫಲಾನುಭವಿಗಳಿಗೆ ನೇರವಾಗಿ ಅವರ ಖಾತೆಯ ತಲುಪಿದೆ. ನುಡಿದಂತೆ ನಡೆದ ಸರ್ಕಾರ ನಮ್ಮದು’ ಎಂದರು.</p>.<p>‘ಶಕ್ತಿ ಯೋಜನೆಯಡಿ ಹುನಗುಂದ ಮತ್ತು ಇಳಕಲ್ ಅವಳಿ ತಾಲ್ಲೂಕಿನಿಂದ 2,50 ಕೋಟಿ ಮಹಿಳೆಯರು ಪ್ರಯಾಣ ಬೆಳೆಸಿದ್ದು, ಇದಕ್ಕೆ ಸರ್ಕಾರ ₹92.78 ಕೋಟಿ ಖರ್ಚು ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಅವಳಿ ತಾಲ್ಲೂಕಿನ 67,728 ಫಲಾನುಭವಿಗಳ ಖಾತೆಗೆ ₹167 ಕೋಟಿ ಜಮಾ ಮಾಡಲಾಗಿದೆ. ಇನ್ನು ಗೃಹ ಜ್ಯೋತಿ ಯೋಜನೆಯಲ್ಲಿ ಅವಳಿ ತಾಲ್ಲೂಕಿನ 70,425 ಕುಟುಂಬಗಳಿಗೆ ₹54.56 ಕೋಟಿ ಮೌಲ್ಯದ ಉಚಿತ ವಿದ್ಯುತ್ ನೀಡಲಾಗಿದೆ. ಯುವನಿಧಿ ಅಡಿಯಲ್ಲಿ 1,350 ನಿರುದ್ಯೋಗಿ ಯುವಕರ ಖಾತೆಗೆ ₹2,62 ಕೋಟಿ ಜಮಾ ಮಾಡಲಾಗಿದೆ’ ಎಂದರು.</p>.<p>ಚಿತ್ತರಗಿ ಸಂಸ್ಥಾನ ಮಠ ಇಳಕಲ್ ಗುರು ಮಹಾಂತ ಶ್ರೀ ಮಾತನಾಡಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಘಟಕದ ಅಧ್ಯಕ್ಷ ಸಾಗರ ತೆಕ್ಕಣ್ಣವರ ಮಾತನಾಡಿ, ‘ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ಕೊಟ್ಟ ಭರವಸೆಯನ್ನು ಈಡೇರಿಸುವುದಕ್ಕಾಗಿ ಆರಂಭದಲ್ಲಿ ₹36 ಸಾವಿರ ಕೋಟಿ ಹಣ ಮೀಸಲಿಟ್ಟರೆ ಸದ್ಯ ₹52.32 ಸಾವಿರ ಕೋಟಿ ಮೀಸಲಿಡಲಾಗಿದೆ’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಅಧ್ಯಕ್ಷ ಮುತ್ತಣ್ಣ ಕಲಗುಡಿ ಮತ್ತು ಮಹಾಂತೇಶ ಹನಮನಾಳ ಅವರು ಅಧಿಕಾರ ಸ್ವೀಕಾರ ಮಾಡಿದರು.</p>.<p>ಪುರಸಭೆಯ ಅಧ್ಯಕ್ಷೆ ಭಾಗ್ಯಶ್ರೀ ರೇವಡಿ, ಇಳಕಲ್ ನಗರಸಭೆಯ ಅಧ್ಯಕ್ಷೆ ಸುಧಾರಾಣಿ ಸಂಗಮ, ಹುನಗುಂದ ಮತ್ತು ಇಳಕಲ್ ತಾಲ್ಲೂಕು ಪಂಚಾಯಿತಿ ಇಒಗಳಾದ ಮುರಳಿಧರ ದೇಶಪಾಂಡೆ, ಸೋಮಲಿಂಗಪ್ಪ ಅಂಟರತಾನಿ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅವಳಿ ತಾಲ್ಲೂಕಿನ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>