ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶೋತ್ಸವಕ್ಕಾಗಿ ಹಿಂದೂ ಸಂಘಟನೆಗಳು ಹಾಗೂ ಗಜಾನನ ಮಂಡಳಿಗಳು ಹಿಂದಿನಿಂದಲೂ ಅನುಮತಿ ಕೇಳುತ್ತಲೇ ಇದ್ದವು. ಅವರ ಮನವಿಯನ್ನು ಪರಿಗಣಿಸಿ ಮಹಾನಗರ ಪಾಲಿಕೆ ಈ ಬಾರಿ ಅನುಮತಿ ಕೊಟ್ಟಿದೆ. ಹೈಕೋರ್ಟ್ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಅದರಂತೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಲಾಗಿದೆ ಎಂದರು.