ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಬ್ಬಳ್ಳಿ: ಜೆಡಿಎಸ್‌–ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ವಾಗ್ವಾದ

Published 30 ಏಪ್ರಿಲ್ 2024, 20:53 IST
Last Updated 30 ಏಪ್ರಿಲ್ 2024, 20:53 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯ ಗೋಕುಲ ರಸ್ತೆ ಬಳಿಯಿರುವ ಹೋಟೆಲ್‌ವೊಂದರ ಆವರಣದಲ್ಲಿ ಮಂಗಳವಾರ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಪರಸ್ಪರ ಚಪ್ಪಲಿ ತೋರಿಸಿ, ಕೈ ಕೈ ಮಿಲಾಯಿಸಿದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿ ಮುಗಿಸಿ, ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಕೋರ್ ಕಮಿಟಿ ಸಭೆಗೆ ತೆರಳುತ್ತಿದ್ದರು. ಹೋಟೆಲ್‌ ಹೊರಗಡೆ ಅವರ ಬರುವಿಕೆಯನ್ನೇ ಕಾಯುತ್ತಿದ್ದ ಕಾಂಗ್ರೆಸ್‌ ಮುಖಂಡ ಅನಿಲಕುಮಾರ್‌ ಪಾಟೀಲ ನೇತೃತ್ವದಲ್ಲಿ ಕಾರ್ಯಕರ್ತರು, ‘ಗೋ ಬ್ಯಾಕ್‌ ಕುಮಾರಸ್ವಾಮಿ’ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಧಿಕ್ಕಾರ, ಧಿಕ್ಕಾರ ಕುಮಾರಸ್ವಾಮಿಗೆ ಧಿಕ್ಕಾರ’ ಎಂದು ಘೋಷಣೆ ಹಾಕಿದರು.

ಇದರಿಂದ ಕೋಪಗೊಂಡ ಕುಮಾರಸ್ವಾಮಿ ‘ಏನು ನಿಮ್ಮದು?’ ಎಂದು ಅವರತ್ತ ತೆರಳಲು ಮುಂದಾದರು. ಪರಿಸ್ಥಿತಿಯ ಸೂಕ್ಷ್ಮತೆ ಅರಿತ ಕೆಲ ಜೆಡಿಎಸ್‌ ಮುಖಂಡರು ಹಾಗೂ ಪೊಲೀಸ್‌ ಅಧಿಕಾರಿಗಳು ಅವರನ್ನು ಸ್ಥಳದಿಂದ ದೂರ ಕರೆದೊಯ್ದರು. ಇತ್ತ ಜೆಡಿಎಸ್‌ ಕಾರ್ಯಕರ್ತರು, ಕಾಂಗ್ರೆಸ್‌ ಕಾರ್ಯಕರ್ತರ ಘೋಷಣೆಗೆ ಪ್ರತಿಯಾಗಿ ‘ರಾಜ್ಯ ಸರ್ಕಾರದ ಗೂಂಡಾಗಿರಿಗೆ ಧಿಕ್ಕಾರ’ ಎಂದು ಘೋಷಣೆ ಕೂಗಿದರು.

ಆಗ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ನಡೆಯಿತು. ಪರಸ್ಪರ ಚಪ್ಪಲಿ ತೋರಿಸುತ್ತ, ಕೈ ಕೈ ಮಿಲಾಯಿಸಿಕೊಂಡರು. ಎರಡೂ ಗುಂಪನ್ನು ಚದುರಿಸಲು ಪೊಲೀಸರು ಹರಸಾಹಸ ಪಟ್ಟರು. ಮಧ್ಯಾಹ್ನ 1.30ಕ್ಕೆ ಆರಂಭವಾದ ಗಲಾಟೆ 2ರವರೆಗೂ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಕಾಂಗ್ರೆಸ್‌ನ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದು, ವಾಹನದಲ್ಲಿ ಕರೆದೊಯ್ದರು.

ನಂತರ ಜೆಡಿಎಸ್ ಕೋರ್ ಕಮಿಟಿ ಸಭೆ ಪ್ರಾರಂಭವಾಯಿತು. ಘಟನೆ ಹಿನ್ನೆಲೆಯಲ್ಲಿ ಹೋಟೆಲ್‌ ಆವರಣದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.

ಕಾಂಗ್ರೆಸ್‌ ಕಾರ್ಯಕರ್ತರ ವಾಗ್ವಾದಕ್ಕಿಳಿಯಲು ಮುಂದಾದ ಜೆಡಿಎಸ್‌ ಕಾರ್ಯಕರ್ತರನ್ನು ಪೊಲೀಸರು ತಡೆದರು
ಕಾಂಗ್ರೆಸ್‌ ಕಾರ್ಯಕರ್ತರ ವಾಗ್ವಾದಕ್ಕಿಳಿಯಲು ಮುಂದಾದ ಜೆಡಿಎಸ್‌ ಕಾರ್ಯಕರ್ತರನ್ನು ಪೊಲೀಸರು ತಡೆದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT