ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿ ಮುಗಿಸಿ, ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಕೋರ್ ಕಮಿಟಿ ಸಭೆಗೆ ತೆರಳುತ್ತಿದ್ದರು. ಹೋಟೆಲ್ ಹೊರಗಡೆ ಅವರ ಬರುವಿಕೆಯನ್ನೇ ಕಾಯುತ್ತಿದ್ದ ಕಾಂಗ್ರೆಸ್ ಮುಖಂಡ ಅನಿಲಕುಮಾರ್ ಪಾಟೀಲ ನೇತೃತ್ವದಲ್ಲಿ ಕಾರ್ಯಕರ್ತರು, ‘ಗೋ ಬ್ಯಾಕ್ ಕುಮಾರಸ್ವಾಮಿ’ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಧಿಕ್ಕಾರ, ಧಿಕ್ಕಾರ ಕುಮಾರಸ್ವಾಮಿಗೆ ಧಿಕ್ಕಾರ’ ಎಂದು ಘೋಷಣೆ ಹಾಕಿದರು.