<p><strong>ಹುಬ್ಬಳ್ಳಿ</strong>: ‘ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದಾಗಿ ಎಷ್ಟೆಲ್ಲ ಅವಾಂತರಗಳು ಸೃಷ್ಟಿಯಾದರೂ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ಮಾತ್ರ ಕಣ್ಣು, ಕಿವಿ ಇಲ್ಲದವರಂತೆ ವರ್ತಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ವೇದವ್ಯಾಸ ಕೌಲಗಿ ಆರೋಪಿಸಿದ್ದಾರೆ.</p>.<p>‘ಇಡೀ ದೇಶದಲ್ಲಿ ಗೃಹಬಳಕೆ ಅನಿಲದ ಸಿಲಿಂಡರ್ಗಳು ಸಿಗದೇ ಏಜನ್ಸಿಗಳ ಮುಂದೆ ಜನರು ಕಾಯುತ್ತಿದ್ದಾರೆ. ಉತ್ತರಪ್ರದೇಶದಲ್ಲಿ ಮಹಿಳೆಯೊಬ್ಬರು ಕಾಯುವಿಕೆಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾರೆ. ಆದರೆ ಕೇಂದ್ರ ಸಚಿವರು ಮಾತ್ರ ಇದೆಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವ ಅಪಪ್ರಚಾರ ಎಂದು ಲಜ್ಜೆಗೆಟ್ಟು ಆರೋಪಿಸುತ್ತಾರೆ’ ಎಂದು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.</p>.<p>‘ವಾಣಿಜ್ಯ ಸಿಲಿಂಡರ್ಗಳು ಇಲ್ಲದೇ ಹೋಟೆಲ್ಗಳು ಬಂದ್ ಆಗಿವೆ. ಕೆಲವು ಕಡೆ ಸೌದೆ ಒಲೆ ಮೇಲೆ ಅಡುಗೆ ಮಾಡುತ್ತಿದ್ದಾರೆ. ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ₹4,000ದಿಂದ ₹5,000ಕ್ಕೆ ಮಾರಾಟವಾಗುತ್ತಿವೆ. ಮಠ, ದೇವಸ್ಥಾನಗಳಲ್ಲಿ ದಾಸೋಹಕ್ಕೆ ಸಮಸ್ಯೆ ಆಗಿ ವಿದ್ಯೆ ಕಲಿಯಲು ಬಂದ ಮಕ್ಕಳು ಸೌದೆ ಒಲೆ ಹಚ್ಚಿ ಪರದಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ‘ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಕೊರತೆಯಿಂದಾಗಿ ಎಷ್ಟೆಲ್ಲ ಅವಾಂತರಗಳು ಸೃಷ್ಟಿಯಾದರೂ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ ಜೋಶಿ ಮಾತ್ರ ಕಣ್ಣು, ಕಿವಿ ಇಲ್ಲದವರಂತೆ ವರ್ತಿಸುತ್ತಿದ್ದಾರೆ’ ಎಂದು ಕಾಂಗ್ರೆಸ್ ಮುಖಂಡ ವೇದವ್ಯಾಸ ಕೌಲಗಿ ಆರೋಪಿಸಿದ್ದಾರೆ.</p>.<p>‘ಇಡೀ ದೇಶದಲ್ಲಿ ಗೃಹಬಳಕೆ ಅನಿಲದ ಸಿಲಿಂಡರ್ಗಳು ಸಿಗದೇ ಏಜನ್ಸಿಗಳ ಮುಂದೆ ಜನರು ಕಾಯುತ್ತಿದ್ದಾರೆ. ಉತ್ತರಪ್ರದೇಶದಲ್ಲಿ ಮಹಿಳೆಯೊಬ್ಬರು ಕಾಯುವಿಕೆಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾರೆ. ಆದರೆ ಕೇಂದ್ರ ಸಚಿವರು ಮಾತ್ರ ಇದೆಲ್ಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ನಡೆಯುತ್ತಿರುವ ಅಪಪ್ರಚಾರ ಎಂದು ಲಜ್ಜೆಗೆಟ್ಟು ಆರೋಪಿಸುತ್ತಾರೆ’ ಎಂದು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.</p>.<p>‘ವಾಣಿಜ್ಯ ಸಿಲಿಂಡರ್ಗಳು ಇಲ್ಲದೇ ಹೋಟೆಲ್ಗಳು ಬಂದ್ ಆಗಿವೆ. ಕೆಲವು ಕಡೆ ಸೌದೆ ಒಲೆ ಮೇಲೆ ಅಡುಗೆ ಮಾಡುತ್ತಿದ್ದಾರೆ. ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ₹4,000ದಿಂದ ₹5,000ಕ್ಕೆ ಮಾರಾಟವಾಗುತ್ತಿವೆ. ಮಠ, ದೇವಸ್ಥಾನಗಳಲ್ಲಿ ದಾಸೋಹಕ್ಕೆ ಸಮಸ್ಯೆ ಆಗಿ ವಿದ್ಯೆ ಕಲಿಯಲು ಬಂದ ಮಕ್ಕಳು ಸೌದೆ ಒಲೆ ಹಚ್ಚಿ ಪರದಾಡುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>