ಹುಬ್ಬಳ್ಳಿ: ಕೇಂದ್ರ ಸರ್ಕಾರವು ಮಜ್ಜಿಗೆ, ಮೊಸರು, ಮಂಡಕ್ಕಿ, ಪೆನ್ಸಿಲ್ ಸೇರಿಂದತೆ ಅಗತ್ಯ ವಸ್ತುಗಳ ಮೇಲೆ ಜಿಎಸ್ ಟಿ ವ್ಯಾಪ್ತಿಗೆ ತರುವುದರ ಮೂಲಕ, ಬಡ ಹಾಗೂ ಮಧ್ಯಮ ವರ್ಗದವರ ಮೇಲೆ ಬರೆ ಹಾಕಿದೆ. ಬಡವರ ಬದುಕಿನ ಮೇಲೆ ಆಕ್ರಮಣ ಮಾಡುತ್ತಿದೆ ಎಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪಿ.ವಿ. ಮೋಹನ್ ವಾಗ್ದಾಳಿ ಮಾಡಿದರು.