<p><strong>ಹುಬ್ಬಳ್ಳಿ:</strong> ‘ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮೋಹನ್ ಲಿಂಬಿಕಾಯಿ ಅವರ ಹೆಸರನ್ನು ಘೋಷಿಸಲಾಗಿದ್ದು, ನನಗೆ ಅನ್ಯಾಯವಾಗಿದೆ’ ಎಂದು ಟಿಕೆಟ್ ಆಕಾಂಕ್ಷಿ ಆರ್.ಎಂ.ಕುಬೇರಪ್ಪ ಹೇಳಿದರು.</p>.<p>‘ಬಿಜೆಪಿಯಿಂದ ಕಾಂಗ್ರೆಸ್ ಬಂದಿರುವ ಮೋಹನ್ ಲಿಂಬಿಕಾಯಿ ಅವರು ಅಹಿಂದ ವರ್ಗ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿಲ್ಲ. ಅವರು ಯಾರು ಎಂಬುದು ಕಾರ್ಯಕರ್ತರು, ಮುಖಂಡರಿಗೆ ಗೊತ್ತಿಲ್ಲ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಲಿಂಬಿಕಾಯಿ ಅವರಿಗೆ ನೀಡಿರುವ ಟಿಕೆಟ್ ರದ್ದುಪಡಿಸಿ, ಈ ಕ್ಷೇತ್ರದ ಅಹಿಂದ ಸಮುದಾಯದವರಿಗೆ ಟಿಕೆಟ್ ನೀಡಬೇಕು’ ಎಂದು ಒತ್ತಾಯಿಸಿದರು. </p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಫೆಬ್ರುವರಿ 13ರಂದು ಸರ್ಕಾರದ ಸಾವಿರ ದಿನಗಳ ಸಮಾವೇಶ ಆಯೋಜಿಸಿದ್ದು, ಅದಕ್ಕೆ ಪರ್ಯಾಯವಾಗಿ ಅದೇ ದಿನ ಸಾವಿರ ಅಹಿಂದ ಹೋರಾಟಗಾರರ ಸಮಾವೇಶ ಹಾವೇರಿಯಲ್ಲಿಯೇ ಹಮ್ಮಿಕೊಳ್ಳುತ್ತೇವೆ’ ಎಂದರು.</p>.<div><blockquote>ಕ್ಷೇತ್ರ ವ್ಯಾಪ್ತಿಯ ನಾಲ್ಕೂ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ನನ್ನ ಬೆಂಬಲಿಗರ ಜತೆ ಸಭೆ ನಡೆಸಿ ಮುಂದಿನ ರಾಜಕೀಯ ನಡೆ ನಿರ್ಧರಿಸುತ್ತೇನೆ </blockquote><span class="attribution">ಆರ್.ಎಂ. ಕುಬೇರಪ್ಪ ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮೋಹನ್ ಲಿಂಬಿಕಾಯಿ ಅವರ ಹೆಸರನ್ನು ಘೋಷಿಸಲಾಗಿದ್ದು, ನನಗೆ ಅನ್ಯಾಯವಾಗಿದೆ’ ಎಂದು ಟಿಕೆಟ್ ಆಕಾಂಕ್ಷಿ ಆರ್.ಎಂ.ಕುಬೇರಪ್ಪ ಹೇಳಿದರು.</p>.<p>‘ಬಿಜೆಪಿಯಿಂದ ಕಾಂಗ್ರೆಸ್ ಬಂದಿರುವ ಮೋಹನ್ ಲಿಂಬಿಕಾಯಿ ಅವರು ಅಹಿಂದ ವರ್ಗ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿಲ್ಲ. ಅವರು ಯಾರು ಎಂಬುದು ಕಾರ್ಯಕರ್ತರು, ಮುಖಂಡರಿಗೆ ಗೊತ್ತಿಲ್ಲ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಲಿಂಬಿಕಾಯಿ ಅವರಿಗೆ ನೀಡಿರುವ ಟಿಕೆಟ್ ರದ್ದುಪಡಿಸಿ, ಈ ಕ್ಷೇತ್ರದ ಅಹಿಂದ ಸಮುದಾಯದವರಿಗೆ ಟಿಕೆಟ್ ನೀಡಬೇಕು’ ಎಂದು ಒತ್ತಾಯಿಸಿದರು. </p>.<p>‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಫೆಬ್ರುವರಿ 13ರಂದು ಸರ್ಕಾರದ ಸಾವಿರ ದಿನಗಳ ಸಮಾವೇಶ ಆಯೋಜಿಸಿದ್ದು, ಅದಕ್ಕೆ ಪರ್ಯಾಯವಾಗಿ ಅದೇ ದಿನ ಸಾವಿರ ಅಹಿಂದ ಹೋರಾಟಗಾರರ ಸಮಾವೇಶ ಹಾವೇರಿಯಲ್ಲಿಯೇ ಹಮ್ಮಿಕೊಳ್ಳುತ್ತೇವೆ’ ಎಂದರು.</p>.<div><blockquote>ಕ್ಷೇತ್ರ ವ್ಯಾಪ್ತಿಯ ನಾಲ್ಕೂ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ನನ್ನ ಬೆಂಬಲಿಗರ ಜತೆ ಸಭೆ ನಡೆಸಿ ಮುಂದಿನ ರಾಜಕೀಯ ನಡೆ ನಿರ್ಧರಿಸುತ್ತೇನೆ </blockquote><span class="attribution">ಆರ್.ಎಂ. ಕುಬೇರಪ್ಪ ಪಶ್ಚಿಮ ಪದವೀಧರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>