<p><strong>ಹುಬ್ಬಳ್ಳಿ: </strong>ಔಷಧ, ಬೆಡ್ ನೀಡದ ಕಾರಣ ಕೋವಿಡ್ನಿಂದ ದೇಶದಲ್ಲಿ 52 ಲಕ್ಷ ಹಾಗೂ ರಾಜ್ಯದಲ್ಲಿ 5 ಲಕ್ಷ ಜನ ಮೃತರಾಗಿದ್ದಾರೆ. ಆದರೂ, ಬಿಜೆಪಿ ಅವರು 100 ಕೋಟಿ ಲಸಿಕೆ ನೀಡಲಾಗಿದೆಎಂದು ಸಂಭ್ರಮಿಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.</p>.<p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ 29 ಕೋಟಿ ಜನರಿಗೆ ಎರಡು ಡೋಸ್ ಲಸಿಕೆ ನೀಡಲಾಗಿದೆ ಎಂದರು.</p>.<p>ಹಾನಗಲ್ನಲ್ಲಿ ಮತದಾರರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ. ಬಿಜೆಪಿಯವರು ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ ಎಂದು ಸವಾಲು ಹಾಕಿದರು.</p>.<p>ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ನಾನು ಸಿಎಂ ಆದ ಮೇಲೆ ಹಾನಗಲ್ಗೆ ₹ 2,400 ಕೋಟಿ ಕೊಟ್ಟಿದ್ದೇನೆ. ಸಿಎಂ ಬೊಮ್ಮಾಯಿ ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ. ಹಣ ಹಂಚಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.</p>.<p>ಕಾಂಗ್ರೆಸ್ಗೆ ಜಾತಿ ರಾಜಕಾರಣ ಮಾಡಿ ಗೊತ್ತಿಲ್ಲ. ಅವರ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ? ಅವರನ್ನ ಯಾಕೆ ಸಚಿವರನ್ನಾಗಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಔಷಧ, ಬೆಡ್ ನೀಡದ ಕಾರಣ ಕೋವಿಡ್ನಿಂದ ದೇಶದಲ್ಲಿ 52 ಲಕ್ಷ ಹಾಗೂ ರಾಜ್ಯದಲ್ಲಿ 5 ಲಕ್ಷ ಜನ ಮೃತರಾಗಿದ್ದಾರೆ. ಆದರೂ, ಬಿಜೆಪಿ ಅವರು 100 ಕೋಟಿ ಲಸಿಕೆ ನೀಡಲಾಗಿದೆಎಂದು ಸಂಭ್ರಮಿಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.</p>.<p>ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ 29 ಕೋಟಿ ಜನರಿಗೆ ಎರಡು ಡೋಸ್ ಲಸಿಕೆ ನೀಡಲಾಗಿದೆ ಎಂದರು.</p>.<p>ಹಾನಗಲ್ನಲ್ಲಿ ಮತದಾರರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ. ಬಿಜೆಪಿಯವರು ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ ಎಂದು ಸವಾಲು ಹಾಕಿದರು.</p>.<p>ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ನಾನು ಸಿಎಂ ಆದ ಮೇಲೆ ಹಾನಗಲ್ಗೆ ₹ 2,400 ಕೋಟಿ ಕೊಟ್ಟಿದ್ದೇನೆ. ಸಿಎಂ ಬೊಮ್ಮಾಯಿ ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ. ಹಣ ಹಂಚಿಕೆ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.</p>.<p>ಕಾಂಗ್ರೆಸ್ಗೆ ಜಾತಿ ರಾಜಕಾರಣ ಮಾಡಿ ಗೊತ್ತಿಲ್ಲ. ಅವರ ಬಳಿ ಮುಸ್ಲಿಂ ಮಂತ್ರಿ ಇದ್ದಾರಾ? ಅವರನ್ನ ಯಾಕೆ ಸಚಿವರನ್ನಾಗಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>