’ದೇಶದಲ್ಲಿ ಇಬ್ಬರು ಸಿದ್ದುಗಳು ಇದ್ದಾರೆ. ಒಬ್ಬ ಸಿದ್ದು ಪಂಜಾಬ್ನಲ್ಲಿ ಕಾಂಗ್ರೆಸ್ ಹಾಳು ಮಾಡಿದರೆ, ಕರ್ನಾಟಕದಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅನ್ನು ಅವನತಿಯತ್ತ ಕೊಂಡೊಯ್ಯುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಬಣಗಳು ಬೇರೆ, ಬೇರೆಯಾಗಿವೆ. ಅವರಲ್ಲೇ ಗುಂಪುಗಾರಿಕೆ ಆರಂಭವಾಗಿದೆ. ಭಾರತ ಕಾಂಗ್ರೆಸ್ ಮುಕ್ತವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದರು. ಅದರಂತೆಯೇ ಈಗಿನ ದೇಶದ ರಾಜಕಾರಣ ಸಾಗುತ್ತಿದೆ‘ ಎಂದರು.