‘ಕುಂದಗೋಳದಲ್ಲಿ ದಿನೇಶ್ ಮತ್ತು ಸತೀಶ್ ನೇತೃತ್ವವಿದೆ. ಚಿಂಚೋಳಿಯಲ್ಲಿ ಖರ್ಗೆಯವರ ನೇತೃತ್ವವಿದೆ. ನಾನು, ಉಪ ಮುಖ್ಯಮಂತ್ರಿ, ಈಶ್ವರ ಖಂಡ್ರೆ, ಪ್ರಿಯಾಂಕ್ ಖರ್ಗೆ ಎಲ್ಲರೂ ಪ್ರಚಾರ ಮಾಡಿದ್ದೇವೆ. ಗುಂಡ್ಲುಪೇಟೆ, ನಂಜನಗೂಡು ಉಪ ಚುನಾವಣೆಯಲ್ಲಿ ಕೆಲಸ ಮಾಡಿದಂತೆ ಈ ಎರಡೂ ಕ್ಷೇತ್ರಗಳಲ್ಲೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಎರಡೂ ಕ್ಷೇತ್ರಗಳನ್ನು ಗೆಲ್ಲುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.