ಇದರ ಬಗ್ಗೆ ಪ್ರತಿಕ್ರಿಯಿಸಿದ ಅಬ್ಬಯ್ಯ ‘ಅರಳಿಕಟ್ಟಿ ಓಣಿಯಲ್ಲಿ ಮೊಣಕಾಲಿಗಿಂತಲೂ ಹೆಚ್ಚು ನೀರು ನಿಂತಿದ್ದರಿಂದ ಬೂಟು ಹಾಕಿಕೊಂಡು ಹೋಗಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಪಕ್ಕದಲ್ಲಿದ್ದವರ ಚಪ್ಪಲಿ ಇಸಿದುಕೊಂಡು ಹೋದೆ. ನಂತರ ಏನಾಯಿತು ಎಂಬುದು ಗೊತ್ತಿಲ್ಲ. ಆ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಜನರನ್ನು ರಕ್ಷಿಸುವುದಷ್ಟೇ ನನ್ನ ಗುರಿಯಾಗಿತ್ತು. ಈ ರೀತಿಯ ಕೀಳು ಮಟ್ಟದ ರಾಜಕಾರಣ ಮಾಡುವುದು ಸರಿಯಲ್ಲ. ಗನ್ ಮ್ಯಾನ್ ಕೈಯಲ್ಲಿ ಶೂ ಕೊಟ್ಟಿಲ್ಲ’ ಎಂದು ಸ್ಪಷ್ಟಪಡಿಸಿದರು.