ಮುಖಂಡ ಅನ್ವರ ಮುಧೋಳ ಮಾತನಾಡಿ, ‘ಕಾಂಗ್ರೆಸ್ ಮಟ್ಟ ಹಾಕಲು ಮುಂದಾಗಿರುವ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಈಗಾಗಲೇ ಪಿ. ಚಿದರಂಬರಂ, ಡಿ.ಕೆ. ಶಿವಕುಮಾರ್ ಅವರ ಮೇಲೆ ಇಲ್ಲದ ಆರೋಪ ಹೊರಿಸಿ ಜೈಲಿಗೆ ಕಳಿಸಿದ್ದಾರೆ. ಇದೀಗ ಶಾಸಕ ಜಿ. ಪರಮೇಶ್ವರ್ ಮತ್ತು ಮಾಜಿ ಕೇಂದ್ರ ಸಚಿವರಾದ ಆರ್.ಎಲ್. ಜಾಲಪ್ಪ ಅವರ ಮೇಲೂ ಆದಾಯ ತೆರಿಗೆ ಇಲಾಖೆಯನ್ನು ಛೂ ಬಿಡುವ ಮೂಲಕ, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ’ ಎಂದರು.