<p><strong>ಹುಬ್ಬಳ್ಳಿ: </strong>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಮಿನಿವಿಧಾನಸೌಧ ಎದುರು ಗುರುವಾರ ಪ್ರತಿಭಟನೆ ಮಾಡಿದರು.</p>.<p>ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೈಗಾರಿಕಾ ವಿರೋಧಿ ಕಾಯ್ದೆಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಲಾಯಿತು.</p>.<p>ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ತೀವ್ರ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ಕೇಂದ್ರಗಳನ್ನು ತೆರದು ಸಂಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.</p>.<p>ಕೊರೊನಾ ನಿಯಂತ್ರಣ ಕಾರ್ಯಕ್ರಮದಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ನ್ಯಾಯಾಂಗ ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರಿಂದ ಮಾಡಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಮಿನಿವಿಧಾನಸೌಧ ಎದುರು ಗುರುವಾರ ಪ್ರತಿಭಟನೆ ಮಾಡಿದರು.</p>.<p>ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೈಗಾರಿಕಾ ವಿರೋಧಿ ಕಾಯ್ದೆಗಳನ್ನು ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಲಾಯಿತು.</p>.<p>ರಾಜ್ಯದಲ್ಲಿ ಅತಿವೃಷ್ಟಿಯಿಂದ ಆಗಿರುವ ತೀವ್ರ ಹಾನಿಗೆ ಸೂಕ್ತ ಪರಿಹಾರ ನೀಡಬೇಕು. ಪರಿಹಾರ ಕೇಂದ್ರಗಳನ್ನು ತೆರದು ಸಂಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.</p>.<p>ಕೊರೊನಾ ನಿಯಂತ್ರಣ ಕಾರ್ಯಕ್ರಮದಲ್ಲಿ ನಡೆದಿರುವ ವ್ಯಾಪಕ ಭ್ರಷ್ಟಾಚಾರದ ನ್ಯಾಯಾಂಗ ತನಿಖೆಯನ್ನು ಹೈಕೋರ್ಟ್ ನ್ಯಾಯಾಧೀಶರಿಂದ ಮಾಡಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>