ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Last Updated 23 ಜೂನ್ 2022, 2:34 IST
ಅಕ್ಷರ ಗಾತ್ರ

ಅಣ್ಣಿಗೇರಿ: ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿಯು ಕಾಂಗ್ರೆಸ್ ನಾಯಕರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಅಣ್ಣಿಗೇರಿ ಬ್ಲಾಕ್ ಕಾಂಗ್ರೆಸ್‌ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಅಮೃತೇಶ್ವರ ದೇವಸ್ಥಾನದಿಂದ ಪುರಸಭೆ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಕೆಲ ಕಾಲ ರಸ್ತೆ ತಡೆ ನಡೆಸಿದರು. ತಹಶೀಲ್ದಾರ್ ಮಂಜುನಾಥ ಅಮಾಸೆ ಅವರಿಗೆ ಮನವಿ ಸಲ್ಲಿಸಿದರು. ಪಕ್ಷದ ಮುಖಂಡ ಎನ್‌.ಎಚ್. ಕೋನರಡ್ಡಿ, ಕೆ.ಎನ್.ಗಡ್ಡಿ, ಜಿಲ್ಲಾ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ವಿನೋದ ಅಸೂಟಿ, ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಮಾಯಣ್ಣವರ, ಶಿವಾನಂದ ಕರಿಗಾರ, ಶಿವಣ್ಣ ಹುಬ್ಬಳ್ಳಿ, ಪುರಸಭೆ ಅಧ್ಯಕ್ಷೆ ಗಂಗಾ ಕರೇಟ್ಟನವರ, ಉಪಾಧ್ಯಕ್ಷೆ ಜಯಲಕ್ಷ್ಮೀ ಜಕರಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT