<p><strong>ಹುಬ್ಬಳ್ಳಿ:</strong> ‘ಕಾಂಗ್ರೆಸ್ ಪುರಾತನ ಕಾಲದಿಂದ ಕೆಲ ಯೋಜನೆಗಳಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಹೆಸರು ಇಟ್ಟಿದೆ. ಅಲ್ಲೂ ಯೋಜನೆಗಳ ಹೆಸರು ಬದಲಿಸಬೇಕಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ತಿಳಿಸಿದರು.</p>.<p>‘ಮನರೇಗಾ’ ಯೋಜನೆ ಹೆಸರು ಬದಲಾವಣೆಯಿಂದ ಯಾವ ಲಾಭವೂ ನಮಗಿಲ್ಲ. ಕಾಂಗ್ರೆಸ್ನ ಹಿಂದಿನ ಯಾವುದೇ ಯೋಜನೆಗಳಿಂದ ನಾವು ಕ್ರೆಡಿಟ್ ತೆಗೆದುಕೊಳ್ಳಲ್ಲ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಮನರೇಗಾ’ ಬದಲು ‘ವಿಬಿ–ಜಿ ರಾಮ್ ಜಿ’ ಮಸೂದೆ ಎಂದು ಬದಲಾವಣೆಯಿಂದ ಯೋಜನೆಯನ್ನು ಮತ್ತಷ್ಟು ಸುಧಾರಿಸುವ ಪ್ರಯತ್ನ ನಡೆದಿದೆ’ ಎಂದು ಹೇಳಿದರು. </p>.<p><strong>₹5 ಸಾವಿರ ಕೋಟಿಗೆ ಮನವಿ: ‘</strong>ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಬಗ್ಗೆ ಸಮಗ್ರ ಚರ್ಚೆಯಾಗಬೇಕು. ಪ್ರಮುಖವಾಗಿ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿಗೆ ಆದ್ಯತೆ ನೀಡಬೇಕಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ₹5ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ಕೇಳಿದ್ದೇವೆ’ ಎಂದರು. </p>.<p>‘ಜನವರಿ 14ರ ಬಳಿಕ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಈ ಹಿಂದೆಯೇ ಹೇಳಿದ್ದೆ. ಸದನದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪರೋಕ್ಷವಾಗಿ ಇದನ್ನು ಒಪ್ಪಿಕೊಂಡಿದ್ದಾರೆ’ ಎಂದರು. </p>.<p><strong>ಬಿಜೆಪಿಯವರು ಮೊದಲು ದೇಶಭಕ್ತರಾಗಲಿ: ಎಚ್.ಕೆ.ಪಾಟೀಲ</strong> </p><p><strong>ಹುಬ್ಬಳ್ಳಿ</strong>: ‘ರಾಷ್ಟ್ರಪಿತ ಮಹಾತ್ಮ ಗಾಂಧಿ ಹೆಸರನ್ನು ಬದಲಾಯಿಸಿದ್ದಾರೆ ಎಂದರೆ ಬಿಜೆಪಿಯವರಿಗೆ ದೇಶಭಕ್ತಿ ಇಲ್ಲವೆಂದೇ ಅರ್ಥ. ಮೊದಲು ಬಿಜೆಪಿಯವರು ದೇಶಭಕ್ತರಾಗಲಿ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರಿಗೆ ಗೌರವಿಸಲಿ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p><p>‘ಯಾವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ‘ಮನರೇಗಾ’ ಯೋಜನೆ ಹೆಸರನ್ನು ಬದಲಿಸಿದೆ? ಗ್ರಾಮ ಸ್ವರಾಜ್ ಪರಿಕಲ್ಪನೆ ಮತ್ತು ರಾಮ ರಾಜ್ಯದ ಆದರ್ಶ ಗಾಂಧೀಜಿಯವರ ಪ್ರಜ್ಞೆಯ ಎರಡು ಸ್ತಂಭಗಳಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಕಾಂಗ್ರೆಸ್ ಪುರಾತನ ಕಾಲದಿಂದ ಕೆಲ ಯೋಜನೆಗಳಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಹೆಸರು ಇಟ್ಟಿದೆ. ಅಲ್ಲೂ ಯೋಜನೆಗಳ ಹೆಸರು ಬದಲಿಸಬೇಕಿದೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ತಿಳಿಸಿದರು.</p>.<p>‘ಮನರೇಗಾ’ ಯೋಜನೆ ಹೆಸರು ಬದಲಾವಣೆಯಿಂದ ಯಾವ ಲಾಭವೂ ನಮಗಿಲ್ಲ. ಕಾಂಗ್ರೆಸ್ನ ಹಿಂದಿನ ಯಾವುದೇ ಯೋಜನೆಗಳಿಂದ ನಾವು ಕ್ರೆಡಿಟ್ ತೆಗೆದುಕೊಳ್ಳಲ್ಲ’ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಮನರೇಗಾ’ ಬದಲು ‘ವಿಬಿ–ಜಿ ರಾಮ್ ಜಿ’ ಮಸೂದೆ ಎಂದು ಬದಲಾವಣೆಯಿಂದ ಯೋಜನೆಯನ್ನು ಮತ್ತಷ್ಟು ಸುಧಾರಿಸುವ ಪ್ರಯತ್ನ ನಡೆದಿದೆ’ ಎಂದು ಹೇಳಿದರು. </p>.<p><strong>₹5 ಸಾವಿರ ಕೋಟಿಗೆ ಮನವಿ: ‘</strong>ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಬಗ್ಗೆ ಸಮಗ್ರ ಚರ್ಚೆಯಾಗಬೇಕು. ಪ್ರಮುಖವಾಗಿ ಸರ್ಕಾರಿ ಶಾಲೆಗಳ ಕಟ್ಟಡಗಳ ದುರಸ್ತಿಗೆ ಆದ್ಯತೆ ನೀಡಬೇಕಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ₹5ಸಾವಿರ ಕೋಟಿ ಅನುದಾನ ಮೀಸಲಿಡಬೇಕು ಎಂದು ಕೇಳಿದ್ದೇವೆ’ ಎಂದರು. </p>.<p>‘ಜನವರಿ 14ರ ಬಳಿಕ ಹೊಸ ಮುಖ್ಯಮಂತ್ರಿ ಬರುತ್ತಾರೆ ಎಂದು ಈ ಹಿಂದೆಯೇ ಹೇಳಿದ್ದೆ. ಸದನದಲ್ಲಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪರೋಕ್ಷವಾಗಿ ಇದನ್ನು ಒಪ್ಪಿಕೊಂಡಿದ್ದಾರೆ’ ಎಂದರು. </p>.<p><strong>ಬಿಜೆಪಿಯವರು ಮೊದಲು ದೇಶಭಕ್ತರಾಗಲಿ: ಎಚ್.ಕೆ.ಪಾಟೀಲ</strong> </p><p><strong>ಹುಬ್ಬಳ್ಳಿ</strong>: ‘ರಾಷ್ಟ್ರಪಿತ ಮಹಾತ್ಮ ಗಾಂಧಿ ಹೆಸರನ್ನು ಬದಲಾಯಿಸಿದ್ದಾರೆ ಎಂದರೆ ಬಿಜೆಪಿಯವರಿಗೆ ದೇಶಭಕ್ತಿ ಇಲ್ಲವೆಂದೇ ಅರ್ಥ. ಮೊದಲು ಬಿಜೆಪಿಯವರು ದೇಶಭಕ್ತರಾಗಲಿ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರಿಗೆ ಗೌರವಿಸಲಿ’ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.</p><p>‘ಯಾವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ‘ಮನರೇಗಾ’ ಯೋಜನೆ ಹೆಸರನ್ನು ಬದಲಿಸಿದೆ? ಗ್ರಾಮ ಸ್ವರಾಜ್ ಪರಿಕಲ್ಪನೆ ಮತ್ತು ರಾಮ ರಾಜ್ಯದ ಆದರ್ಶ ಗಾಂಧೀಜಿಯವರ ಪ್ರಜ್ಞೆಯ ಎರಡು ಸ್ತಂಭಗಳಾಗಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>