ಬಾಗಲಕೋಟೆಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದ ನಿವಾಸಿ ಹಾಗೂ ಅಯ್ಯಪ್ಪಸ್ವಾಮಿ ಮಾಲಾಧಾರಿ ಸಚಿನ್ ಶೇಖಪ್ಪ ಅಂಗಡಿ ಎಂಬವರು ನ.21ರಂದುಕೆಲಸದ ನಿಮಿತ್ತ ನವಲಗುಂದಕ್ಕೆ ಬಂದಾಗ ಬಸ್ ನಿಲ್ದಾಣದಲ್ಲಿ ₹8,500 ನಗದು, ವಾಹನ ಚಾಲನಾ ಪರವಾನಗಿ ಪತ್ರ, ಆಧಾರ ಕಾರ್ಡ್ ಇದ್ದ ಪರ್ಸ್ ಕಳೆದುಕೊಂಡಿದ್ದರು. ಕಾನ್ಸ್ಟೆಬಲ್ ಭಗವತಿ ಅವರಿಗೆ ಈ ಪರ್ಸ್ ಸಿಕ್ಕಿತ್ತು. ದಾಖಲೆಗಳನ್ನು ಪರಿಶೀಲನೆ ಮಾಡಿ ಯುವಕನಿಗೆ ದೂರವಾಣಿ ಕರೆ ಮಾಡಿ,ನಗದು ಸೇರಿದಂತೆ ಎಲ್ಲ ವಸ್ತುಗಳನ್ನು ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.