<p><strong>ಹುಬ್ಬಳ್ಳಿ:</strong> ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ಕುತಂತ್ರವಿದೆ. ದಕ್ಷಿಣ ಭಾರತದ ರಾಜ್ಯಗಳು ಸಾಮಾನ್ಯವಾಗಿ ಬಿಜೆಪಿ ವಿರುದ್ಧ ಇವೆ. ಅದಕ್ಕಾಗಿ ಇಲ್ಲಿನ ಸ್ಥಾನಗಳನ್ನು ಕಡಿಮೆ ಮಾಡಿದರೆ ಅವರಿಗೆ (ಬಿಜೆಪಿ) ಲಾಭವಾಗುತ್ತದೆ ಎನ್ನುವ ದುರುದ್ದೇಶ ಇದೆ. ಅದಕ್ಕಾಗಿಯೇ ಬಿಜೆಪಿ ಕ್ಷೇತ್ರಗಳ ಮರುವಿಂಗಡಣೆಗೆ ಕೈಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಆರೋಪಿಸಿದರು. </p>.ಮತ್ತೆ ಮುನ್ನಲೆಗೆ ಬಂದ ‘ಅಧಿಕಾರ ಹಂಚಿಕೆ’ ವಿಚಾರ: ‘ಕೈ’ಯಲ್ಲಿ ಮೊಯಿಲಿ ಕಿಡಿ.<p>ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕ್ಷೇತ್ರಗಳ ಮರು ವಿಂಗಡಣೆಯಲ್ಲಿ ಜನಸಂಖ್ಯೆಯನ್ನು ಪ್ರಮುಖ ಮಾನದಂಡವನ್ನಾಗಿ ಪರಿಗಣಿಸಬಾರದು. ಭೌಗೋಳಿಕ ಅಂಶಗಳನ್ನು ಪರಿಗಣಿಸಬೇಕು. ಒಟ್ಟು ದೇಶದ ಚಿತ್ರಣವನ್ನು ಪರಿಗಣಿಸಬೇಕು, ಹೊರತು ಕೆಲವು ರಾಜ್ಯಗಳನ್ನಷ್ಟೇ ಅಲ್ಲ’ ಎಂದರು.</p><p>ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಲೋಕಸಭೆ ಕ್ಷೇತ್ರ ಮರು ವಿಂಗಡಣೆಯಲ್ಲಿ ಜನಸಂಖ್ಯೆಯನ್ನು ಪರಿಗಣಿಸಿದರೆ ಈ ರಾಜ್ಯಗಳಿಗೆ ಅನ್ಯಾಯವಾಗಲಿದೆ. ರಾಷ್ಟ್ರದ ಹಿತದೃಷ್ಟಿಯಿಂದ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತಂದಿದ್ದಕ್ಕೆ ಶಿಕ್ಷೆ ಕೊಟ್ಟಂತೆ ಆಗಲಿದೆ ಎಂದು ತಿಳಿಸಿದರು.</p><p>ಬಿಜೆಪಿಯವರು ಆಲೋಚನೆ ಮಾಡುತ್ತಿರುವ ಕ್ಷೇತ್ರ ವಿಂಗಡಣೆಯ ಸೂತ್ರವು ದೇಶದಲ್ಲಿ ಅತಂತ್ರತೆ ಹಾಗೂ ಸಮಗ್ರತೆಗೆ ಭಂಗ ತರುವ ಸಾಧ್ಯತೆ ಇದೆ ಎಂದು ಹೇಳಿದರು.</p>.ಎಲ್ಎಸ್ಎಸ್ ಜನ್ಮಶತಮಾನೋತ್ಸವವನ್ನು ಸರ್ಕಾರವೇ ಆಚರಿಸಬೇಕಿತ್ತ: ವೀರಪ್ಪ ಮೊಯಿಲಿ.<h2>ಹನಿಟ್ರ್ಯಾಪ್ ಹೊಸದೇನಲ್ಲ:</h2><p>ಹನಿಟ್ರ್ಯಾಪ್ನಂತಹ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನು ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಬಾರದು. ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು ಸಭ್ಯತೆಯ ಲಕ್ಷಣವಲ್ಲ. ಅವರ ಅಸಭ್ಯತೆಯಿಂದಲೇ ಅಮಾನತ್ತು ಮಾಡಲಾಗಿದೆ. ಅವರ ವರ್ತನೆ ವಿಕೋಪಕ್ಕೆ ಹೋದ ಹಿನ್ನೆಲೆ ವಿರೋಧ ಪಕ್ಷದ ಶಾಸಕರನ್ನು ಅಮಾನತ್ತು ಮಾಡಲಾಗಿದೆ ಎಂದರು.</p><p>ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದ್ದೇ ನಮ್ಮ ಪಕ್ಷದವರು. ನಮ್ಮ ಪಕ್ಷದ ಮಂತ್ರಿಗಳು ಇದನ್ನು ಆಂತರಿಕವಾಗಿ ಚರ್ಚೆ ಮಾಡಬೇಕಿತ್ತು. ಆದರೆ ಬಹಿರಂಗವಾಗಿ ಸದನದಲ್ಲಿ ಚರ್ಚೆ ಮಾಡಬಾರದಿತ್ತು. ಇದರಿಂದಾಗಿ ಪಕ್ಷಕ್ಕೆ ಮುಜುಗರ, ಅಭದ್ರತೆ ಹೆಚ್ಚಾಗುತ್ತದೆ ಎಂದು ಹೇಳಿದರು.</p><p>ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳಿಂದ ಸರ್ಕಾರಕ್ಕೆ ಅಭದ್ರತೆ ಕಾಡುವುದು ನಿಶ್ಚಿತ. ಇಂತಹ ಚರ್ಚೆಗಳನ್ನು ಸಾರ್ವಜನಿಕವಾಗಿ ಮಾಡಬಾರದು. ಅಧಿಕಾರ ಹಂಚಿಕೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಣಯಿಸುತ್ತದೆ ಎಂದು ತಿಳಿಸಿದರು.</p>.ಚಿಕ್ಕಬಳ್ಳಾಪುರ ಕಾಂಗ್ರೆಸ್ನಿಂದ ದೂರವಾದ ವೀರಪ್ಪ ಮೊಯಿಲಿ. <h2>ತ್ರಿಭಾಷಾ ಸೂತ್ರ ಹೇರಬಾರದು:</h2><p>ತ್ರಿಭಾಷಾ ಸೂತ್ರವನ್ನು ಹೇರಿಕೆ ಮಾಡಬಾರದು. ಯಾವುದೇ ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದಿಂದಲೂ ಕೂಡ ಸಾಧ್ಯವಿಲ್ಲ. ಭಾಷಾ ಕಲಿಕೆ ವಿಷಯದಲ್ಲಿ ಆಯಾ ಪ್ರಾದೇಶಿಕ ಭಾಷೆಯಲ್ಲಿಯೇ ಶಿಕ್ಷಣ ಕೊಡಬೇಕು ಎನ್ನುವ ನೀತಿ ಕರ್ನಾಟಕದಲ್ಲಿ ಇದೆ. ಕೇಂದ್ರ ಕಾಂಗ್ರೆಸ್ ಕೂಡ ಇದೇ ನೀತಿಯನ್ನು ಹೊಂದಿದೆ. ದ್ವಿಭಾಷಾ ಸೂತ್ರ ಮಾಡುವುದು ಬಿಡುವುದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು. ಅವುಗಳಿಗೆ ಅವಕಾಶವಿದೆ ಎಂದು ಹೇಳಿದರು.</p> .ಹಿಂದೂ: ಜಾತಿ ವ್ಯವಸ್ಥೆಯ ಸಂಕೇತವಲ್ಲ –ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಲೋಕಸಭೆ ಕ್ಷೇತ್ರಗಳ ಮರು ವಿಂಗಡಣೆಯಲ್ಲಿ ಕೇಂದ್ರದ ಬಿಜೆಪಿ ಸರ್ಕಾರದ ಕುತಂತ್ರವಿದೆ. ದಕ್ಷಿಣ ಭಾರತದ ರಾಜ್ಯಗಳು ಸಾಮಾನ್ಯವಾಗಿ ಬಿಜೆಪಿ ವಿರುದ್ಧ ಇವೆ. ಅದಕ್ಕಾಗಿ ಇಲ್ಲಿನ ಸ್ಥಾನಗಳನ್ನು ಕಡಿಮೆ ಮಾಡಿದರೆ ಅವರಿಗೆ (ಬಿಜೆಪಿ) ಲಾಭವಾಗುತ್ತದೆ ಎನ್ನುವ ದುರುದ್ದೇಶ ಇದೆ. ಅದಕ್ಕಾಗಿಯೇ ಬಿಜೆಪಿ ಕ್ಷೇತ್ರಗಳ ಮರುವಿಂಗಡಣೆಗೆ ಕೈಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಆರೋಪಿಸಿದರು. </p>.ಮತ್ತೆ ಮುನ್ನಲೆಗೆ ಬಂದ ‘ಅಧಿಕಾರ ಹಂಚಿಕೆ’ ವಿಚಾರ: ‘ಕೈ’ಯಲ್ಲಿ ಮೊಯಿಲಿ ಕಿಡಿ.<p>ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕ್ಷೇತ್ರಗಳ ಮರು ವಿಂಗಡಣೆಯಲ್ಲಿ ಜನಸಂಖ್ಯೆಯನ್ನು ಪ್ರಮುಖ ಮಾನದಂಡವನ್ನಾಗಿ ಪರಿಗಣಿಸಬಾರದು. ಭೌಗೋಳಿಕ ಅಂಶಗಳನ್ನು ಪರಿಗಣಿಸಬೇಕು. ಒಟ್ಟು ದೇಶದ ಚಿತ್ರಣವನ್ನು ಪರಿಗಣಿಸಬೇಕು, ಹೊರತು ಕೆಲವು ರಾಜ್ಯಗಳನ್ನಷ್ಟೇ ಅಲ್ಲ’ ಎಂದರು.</p><p>ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರಪ್ರದೇಶ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿವೆ. ಲೋಕಸಭೆ ಕ್ಷೇತ್ರ ಮರು ವಿಂಗಡಣೆಯಲ್ಲಿ ಜನಸಂಖ್ಯೆಯನ್ನು ಪರಿಗಣಿಸಿದರೆ ಈ ರಾಜ್ಯಗಳಿಗೆ ಅನ್ಯಾಯವಾಗಲಿದೆ. ರಾಷ್ಟ್ರದ ಹಿತದೃಷ್ಟಿಯಿಂದ ಜನಸಂಖ್ಯೆಯನ್ನು ನಿಯಂತ್ರಣಕ್ಕೆ ತಂದಿದ್ದಕ್ಕೆ ಶಿಕ್ಷೆ ಕೊಟ್ಟಂತೆ ಆಗಲಿದೆ ಎಂದು ತಿಳಿಸಿದರು.</p><p>ಬಿಜೆಪಿಯವರು ಆಲೋಚನೆ ಮಾಡುತ್ತಿರುವ ಕ್ಷೇತ್ರ ವಿಂಗಡಣೆಯ ಸೂತ್ರವು ದೇಶದಲ್ಲಿ ಅತಂತ್ರತೆ ಹಾಗೂ ಸಮಗ್ರತೆಗೆ ಭಂಗ ತರುವ ಸಾಧ್ಯತೆ ಇದೆ ಎಂದು ಹೇಳಿದರು.</p>.ಎಲ್ಎಸ್ಎಸ್ ಜನ್ಮಶತಮಾನೋತ್ಸವವನ್ನು ಸರ್ಕಾರವೇ ಆಚರಿಸಬೇಕಿತ್ತ: ವೀರಪ್ಪ ಮೊಯಿಲಿ.<h2>ಹನಿಟ್ರ್ಯಾಪ್ ಹೊಸದೇನಲ್ಲ:</h2><p>ಹನಿಟ್ರ್ಯಾಪ್ನಂತಹ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನು ಹುಡುಕುತ್ತಲೇ ಇರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಬಾರದು. ಸದನದಲ್ಲಿ ವಿರೋಧ ಪಕ್ಷದವರ ವರ್ತನೆ ಸರಿಯಲ್ಲ. ಇದು ಸಭ್ಯತೆಯ ಲಕ್ಷಣವಲ್ಲ. ಅವರ ಅಸಭ್ಯತೆಯಿಂದಲೇ ಅಮಾನತ್ತು ಮಾಡಲಾಗಿದೆ. ಅವರ ವರ್ತನೆ ವಿಕೋಪಕ್ಕೆ ಹೋದ ಹಿನ್ನೆಲೆ ವಿರೋಧ ಪಕ್ಷದ ಶಾಸಕರನ್ನು ಅಮಾನತ್ತು ಮಾಡಲಾಗಿದೆ ಎಂದರು.</p><p>ಸದನದಲ್ಲಿ ಹನಿಟ್ರ್ಯಾಪ್ ಬಗ್ಗೆ ಚರ್ಚೆಯನ್ನು ಹುಟ್ಟು ಹಾಕಿದ್ದೇ ನಮ್ಮ ಪಕ್ಷದವರು. ನಮ್ಮ ಪಕ್ಷದ ಮಂತ್ರಿಗಳು ಇದನ್ನು ಆಂತರಿಕವಾಗಿ ಚರ್ಚೆ ಮಾಡಬೇಕಿತ್ತು. ಆದರೆ ಬಹಿರಂಗವಾಗಿ ಸದನದಲ್ಲಿ ಚರ್ಚೆ ಮಾಡಬಾರದಿತ್ತು. ಇದರಿಂದಾಗಿ ಪಕ್ಷಕ್ಕೆ ಮುಜುಗರ, ಅಭದ್ರತೆ ಹೆಚ್ಚಾಗುತ್ತದೆ ಎಂದು ಹೇಳಿದರು.</p><p>ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳಿಂದ ಸರ್ಕಾರಕ್ಕೆ ಅಭದ್ರತೆ ಕಾಡುವುದು ನಿಶ್ಚಿತ. ಇಂತಹ ಚರ್ಚೆಗಳನ್ನು ಸಾರ್ವಜನಿಕವಾಗಿ ಮಾಡಬಾರದು. ಅಧಿಕಾರ ಹಂಚಿಕೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಣಯಿಸುತ್ತದೆ ಎಂದು ತಿಳಿಸಿದರು.</p>.ಚಿಕ್ಕಬಳ್ಳಾಪುರ ಕಾಂಗ್ರೆಸ್ನಿಂದ ದೂರವಾದ ವೀರಪ್ಪ ಮೊಯಿಲಿ. <h2>ತ್ರಿಭಾಷಾ ಸೂತ್ರ ಹೇರಬಾರದು:</h2><p>ತ್ರಿಭಾಷಾ ಸೂತ್ರವನ್ನು ಹೇರಿಕೆ ಮಾಡಬಾರದು. ಯಾವುದೇ ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದಿಂದಲೂ ಕೂಡ ಸಾಧ್ಯವಿಲ್ಲ. ಭಾಷಾ ಕಲಿಕೆ ವಿಷಯದಲ್ಲಿ ಆಯಾ ಪ್ರಾದೇಶಿಕ ಭಾಷೆಯಲ್ಲಿಯೇ ಶಿಕ್ಷಣ ಕೊಡಬೇಕು ಎನ್ನುವ ನೀತಿ ಕರ್ನಾಟಕದಲ್ಲಿ ಇದೆ. ಕೇಂದ್ರ ಕಾಂಗ್ರೆಸ್ ಕೂಡ ಇದೇ ನೀತಿಯನ್ನು ಹೊಂದಿದೆ. ದ್ವಿಭಾಷಾ ಸೂತ್ರ ಮಾಡುವುದು ಬಿಡುವುದು ಆಯಾ ರಾಜ್ಯಗಳಿಗೆ ಬಿಟ್ಟಿದ್ದು. ಅವುಗಳಿಗೆ ಅವಕಾಶವಿದೆ ಎಂದು ಹೇಳಿದರು.</p> .ಹಿಂದೂ: ಜಾತಿ ವ್ಯವಸ್ಥೆಯ ಸಂಕೇತವಲ್ಲ –ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>