<p>ಧಾರವಾಡ: ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿರುವ ಧಾರವಾಡ–71 ವಿಧಾನಸಭಾ ಕ್ಷೇತ್ರ, ಯಾವುದೇ ಒಬ್ಬ ಅಭ್ಯರ್ಥಿಯನ್ನು ಸತತವಾಗಿ ಆರಿಸದ ಕಾರಣ ಪ್ರತಿಬಾರಿಯೂ ಕುತೂಲಹದ ಕಣವೇ ಆಗಿರುತ್ತದೆ.</p>.<p>1957ರಿಂದ ಇಲ್ಲಿಯವರೆಗೆ ಧಾರವಾಡ ವಿಧಾನಸಭಾ ಕ್ಷೇತ್ರ ಹಲವಾರು ಪ್ರಮುಖ ಘಟನಾವಳಿಗೆ ಸಾಕ್ಷಿಯಾಗುತ್ತಲೇ ಬಂದಿದೆ. ಹಿಂದಿನ ಚುನಾವಣೆಯಲ್ಲಿ ಮಹದಾಯಿ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮಗಳು ಚರ್ಚಿತ ವಿಷಯವಾದರೆ, ಈ ಬಾರಿ ವಿನಯ ಕುಲಕರ್ಣಿ ಇದೇ ಕ್ಷೇತ್ರದಿಂದ ಸ್ಪರ್ಧಿಸುವರೇ? ಎಂಬುದು ಗ್ರಾಮೀಣ ಭಾಗದಲ್ಲಿ ಕೇಳಿಬರುತ್ತಿರುವ ಸಾಮಾನ್ಯ ಪ್ರಶ್ನೆ.</p>.<p>80ರ ದಶಕದವರೆಗೂ ಕಾಂಗ್ರೆಸ್ಗೆ ನಿಚ್ಚಳ ಗೆಲುವು ತಂದುಕೊಡುತ್ತಿದ್ದ ಕ್ಷೇತ್ರ ಇದಾಗಿತ್ತು. 1980ರ ನರಗುಂದ ಬಂಡಾಯ ಹಾಗೂ ಅವೈಜ್ಞಾನಿಕ ಲೆವಿ ಪದ್ಧತಿ ವಿರುದ್ಧ ಸಿಡಿದೆದ್ದ ರೈತರು ನಡೆಸಿದ ಧರಣಿ, ಹೆದ್ದಾರಿ ಬಂದ್ ರಾಷ್ಟ್ರದ ಗಮನ ಸೆಳೆದಿದ್ದವು.</p>.<p>ರೈತ ಚಳವಳಿ ಮೂಲಕ ನಾಯಕರಾಗಿ ಹೊರಹೊಮ್ಮಿದ ಬಾಬಾಗೌಡ ಪಾಟೀಲ ಈ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದರು. 1989ರಲ್ಲಿ ನೆರೆಯ ಕಿತ್ತೂರು ಹಾಗೂ ಧಾರವಾಡ ಎರಡೂ ಕ್ಷೇತ್ರಗಳಲ್ಲಿ ಗೆದ್ದ ಅವರು, ನಂತರ ಧಾರವಾಡ ಕ್ಷೇತ್ರವನ್ನು ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರಿಗೆ ಬಿಟ್ಟುಕೊಟ್ಟು, ಅವರನ್ನೂ ಆರಿಸಿ ತಂದರು.</p>.<p>ಅಂಬಡಗಟ್ಟಿ ಸೋದರರಾದ ಶ್ರೀಕಾಂತ, ಶಶಿಧರ, ಶಿವಾನಂದ ಹಾಗೂ ವಿನಯ ಕುಲಕರ್ಣಿ (ಪಕ್ಷೇತರ ಅಭ್ಯರ್ಥಿಯಾಗಿ) ಕೂಡ ರೈತರ ಹೆಸರಿನಲ್ಲಿ ಆಯ್ಕೆಯಾಗಿದ್ದರು. ಅಷ್ಟರ ಮಟ್ಟಿಗೆ ರೈತ ಚಳವಳಿ ಈ ಕ್ಷೇತ್ರದ ಮೇಲೆ ಪ್ರಭಾವ ಬೀರಿತ್ತು. ವಿನಯ ಕುಲಕರ್ಣಿ ಕಾಂಗ್ರೆಸ್ ಸೇರಿದ ನಂತರ ಮೂರು ಬಾರಿ ಸ್ಪರ್ಧಿಸಿ ಎರಡು ಬಾರಿ ಪರಾಭವಗೊಂಡರು. </p>.<p>ಬಿಜೆಪಿಯಲ್ಲಿ ಹಾಲಿ ಶಾಸಕ ಅಮತ ದೇಸಾಯಿ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ, ಒಂದು ಬಾರಿ ಶಾಸಕರಾಗಿದ್ದ ಸೀಮಾ ಮಸೂತಿ ಅವರು ಈ ಬಾರಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.</p>.<p>ಕಾಂಗ್ರೆಸ್ನಲ್ಲೂ ಕಳೆದ ಬಾರಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಿ ಭಾರೀ ಅಂತರದಿಂದ ಪರಭಾವಗೊಂಡಿದ್ದ ಇಸ್ಮಾಯಿಲ್ ತಮಟಗಾರ ಅವರೂ ಈ ಬಾರಿ ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಜೆಡಿಎಸ್ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧಾರವಾಡ: ನಗರ ಮತ್ತು ಗ್ರಾಮೀಣ ಪ್ರದೇಶಗಳನ್ನು ಒಳಗೊಂಡಿರುವ ಧಾರವಾಡ–71 ವಿಧಾನಸಭಾ ಕ್ಷೇತ್ರ, ಯಾವುದೇ ಒಬ್ಬ ಅಭ್ಯರ್ಥಿಯನ್ನು ಸತತವಾಗಿ ಆರಿಸದ ಕಾರಣ ಪ್ರತಿಬಾರಿಯೂ ಕುತೂಲಹದ ಕಣವೇ ಆಗಿರುತ್ತದೆ.</p>.<p>1957ರಿಂದ ಇಲ್ಲಿಯವರೆಗೆ ಧಾರವಾಡ ವಿಧಾನಸಭಾ ಕ್ಷೇತ್ರ ಹಲವಾರು ಪ್ರಮುಖ ಘಟನಾವಳಿಗೆ ಸಾಕ್ಷಿಯಾಗುತ್ತಲೇ ಬಂದಿದೆ. ಹಿಂದಿನ ಚುನಾವಣೆಯಲ್ಲಿ ಮಹದಾಯಿ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮಗಳು ಚರ್ಚಿತ ವಿಷಯವಾದರೆ, ಈ ಬಾರಿ ವಿನಯ ಕುಲಕರ್ಣಿ ಇದೇ ಕ್ಷೇತ್ರದಿಂದ ಸ್ಪರ್ಧಿಸುವರೇ? ಎಂಬುದು ಗ್ರಾಮೀಣ ಭಾಗದಲ್ಲಿ ಕೇಳಿಬರುತ್ತಿರುವ ಸಾಮಾನ್ಯ ಪ್ರಶ್ನೆ.</p>.<p>80ರ ದಶಕದವರೆಗೂ ಕಾಂಗ್ರೆಸ್ಗೆ ನಿಚ್ಚಳ ಗೆಲುವು ತಂದುಕೊಡುತ್ತಿದ್ದ ಕ್ಷೇತ್ರ ಇದಾಗಿತ್ತು. 1980ರ ನರಗುಂದ ಬಂಡಾಯ ಹಾಗೂ ಅವೈಜ್ಞಾನಿಕ ಲೆವಿ ಪದ್ಧತಿ ವಿರುದ್ಧ ಸಿಡಿದೆದ್ದ ರೈತರು ನಡೆಸಿದ ಧರಣಿ, ಹೆದ್ದಾರಿ ಬಂದ್ ರಾಷ್ಟ್ರದ ಗಮನ ಸೆಳೆದಿದ್ದವು.</p>.<p>ರೈತ ಚಳವಳಿ ಮೂಲಕ ನಾಯಕರಾಗಿ ಹೊರಹೊಮ್ಮಿದ ಬಾಬಾಗೌಡ ಪಾಟೀಲ ಈ ಕ್ಷೇತ್ರದಲ್ಲಿ ಸಂಚಲನ ಮೂಡಿಸಿದ್ದರು. 1989ರಲ್ಲಿ ನೆರೆಯ ಕಿತ್ತೂರು ಹಾಗೂ ಧಾರವಾಡ ಎರಡೂ ಕ್ಷೇತ್ರಗಳಲ್ಲಿ ಗೆದ್ದ ಅವರು, ನಂತರ ಧಾರವಾಡ ಕ್ಷೇತ್ರವನ್ನು ಪ್ರೊ. ಎಂ.ಡಿ.ನಂಜುಂಡಸ್ವಾಮಿ ಅವರಿಗೆ ಬಿಟ್ಟುಕೊಟ್ಟು, ಅವರನ್ನೂ ಆರಿಸಿ ತಂದರು.</p>.<p>ಅಂಬಡಗಟ್ಟಿ ಸೋದರರಾದ ಶ್ರೀಕಾಂತ, ಶಶಿಧರ, ಶಿವಾನಂದ ಹಾಗೂ ವಿನಯ ಕುಲಕರ್ಣಿ (ಪಕ್ಷೇತರ ಅಭ್ಯರ್ಥಿಯಾಗಿ) ಕೂಡ ರೈತರ ಹೆಸರಿನಲ್ಲಿ ಆಯ್ಕೆಯಾಗಿದ್ದರು. ಅಷ್ಟರ ಮಟ್ಟಿಗೆ ರೈತ ಚಳವಳಿ ಈ ಕ್ಷೇತ್ರದ ಮೇಲೆ ಪ್ರಭಾವ ಬೀರಿತ್ತು. ವಿನಯ ಕುಲಕರ್ಣಿ ಕಾಂಗ್ರೆಸ್ ಸೇರಿದ ನಂತರ ಮೂರು ಬಾರಿ ಸ್ಪರ್ಧಿಸಿ ಎರಡು ಬಾರಿ ಪರಾಭವಗೊಂಡರು. </p>.<p>ಬಿಜೆಪಿಯಲ್ಲಿ ಹಾಲಿ ಶಾಸಕ ಅಮತ ದೇಸಾಯಿ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ, ಒಂದು ಬಾರಿ ಶಾಸಕರಾಗಿದ್ದ ಸೀಮಾ ಮಸೂತಿ ಅವರು ಈ ಬಾರಿ ಪಕ್ಷದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.</p>.<p>ಕಾಂಗ್ರೆಸ್ನಲ್ಲೂ ಕಳೆದ ಬಾರಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಿ ಭಾರೀ ಅಂತರದಿಂದ ಪರಭಾವಗೊಂಡಿದ್ದ ಇಸ್ಮಾಯಿಲ್ ತಮಟಗಾರ ಅವರೂ ಈ ಬಾರಿ ಧಾರವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಜೆಡಿಎಸ್ ಇಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>