<p><strong>ಧಾರವಾಡ:</strong> ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಬಳಗವು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ‘ಸಂವಿಧಾನವೇ ಬೆಳಕು’ ಅಭಿಯಾನದಡಿ ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರುವರಿ 6ರಂದು ಬೆಳಿಗ್ಗೆ 7ರಿಂದ ಸಂವಿಧಾನ ಕುರಿತು ವಿಚಾರ ಸಂಕಿರಣ ಮತ್ತು ವಾಕಥಾನ್ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಸಂವಿಧಾನದ ಮಹತ್ವವನ್ನು ಯುವಜನರಿಗೆ ತಿಳಿಪಡಿಸುವುದು ‘ಸಂವಿಧಾನವೇ ಬೆಳಕು’ ಅಭಿಯಾನದ ಉದ್ದೇಶ. ಅಂದು ನಡೆಯುವ ವಿಚಾರ ಸಂಕಿರಣದಲ್ಲಿ ಸಂವಿಧಾನದ ಕುರಿತು ತಜ್ಞರು ವಿಶೇಷ ಉಪನ್ಯಾಸ ನೀಡುವರು. ಭಾರತೀಯರಿಗೆ ಸಂವಿಧಾನವು ಎಷ್ಟು ಮೌಲಿಕ ಮತ್ತು ಮುಖ್ಯವಾದದ್ದು ಎಂಬುದರ ಬಗ್ಗೆ ಅರಿವು ಮೂಡಿಸುವರು.</p>.<p>ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಸಂಯೋಜಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಇಲ್ಲಿ ನೀಡಲಾದ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿನ ಗಾಂಧಿ ಭವನದಲ್ಲಿ ವಿಚಾರ ಸಂಕಿರಣ ನಡೆಯಲಿದೆ. ನಂತರ ಮೂರು ಕಿ.ಮೀ. ವಾಕಥಾನ್ ಇರಲಿದೆ. ನೋಂದಣಿ ಮಾಡಿಕೊಂಡ ಪ್ರತಿಯೊಬ್ಬರಿಗೂ ಟಿ–ಶರ್ಟ್ ಮತ್ತು ಕ್ಯಾಪ್ ನೀಡಲಾಗುವುದು.</p>.<p>ಮಾಹಿತಿಗೆ ಸಂಪರ್ಕ ದೂರವಾಣಿ ಸಂಖ್ಯೆ: 8105015560</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್’ ಪತ್ರಿಕಾ ಬಳಗವು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ‘ಸಂವಿಧಾನವೇ ಬೆಳಕು’ ಅಭಿಯಾನದಡಿ ಇಲ್ಲಿನ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಫೆಬ್ರುವರಿ 6ರಂದು ಬೆಳಿಗ್ಗೆ 7ರಿಂದ ಸಂವಿಧಾನ ಕುರಿತು ವಿಚಾರ ಸಂಕಿರಣ ಮತ್ತು ವಾಕಥಾನ್ ಕಾರ್ಯಕ್ರಮ ಹಮ್ಮಿಕೊಂಡಿದೆ.</p>.<p>ಸಂವಿಧಾನದ ಮಹತ್ವವನ್ನು ಯುವಜನರಿಗೆ ತಿಳಿಪಡಿಸುವುದು ‘ಸಂವಿಧಾನವೇ ಬೆಳಕು’ ಅಭಿಯಾನದ ಉದ್ದೇಶ. ಅಂದು ನಡೆಯುವ ವಿಚಾರ ಸಂಕಿರಣದಲ್ಲಿ ಸಂವಿಧಾನದ ಕುರಿತು ತಜ್ಞರು ವಿಶೇಷ ಉಪನ್ಯಾಸ ನೀಡುವರು. ಭಾರತೀಯರಿಗೆ ಸಂವಿಧಾನವು ಎಷ್ಟು ಮೌಲಿಕ ಮತ್ತು ಮುಖ್ಯವಾದದ್ದು ಎಂಬುದರ ಬಗ್ಗೆ ಅರಿವು ಮೂಡಿಸುವರು.</p>.<p>ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಸಂಯೋಜಿತ ಪದವಿ ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಇಲ್ಲಿ ನೀಡಲಾದ ಕ್ಯುಆರ್ ಕೋಡ್ ಸ್ಕ್ಯಾನ್ ಮಾಡುವ ಮೂಲಕ ವಿದ್ಯಾರ್ಥಿಗಳು ತಮ್ಮ ಹೆಸರನ್ನು ಕಡ್ಡಾಯವಾಗಿ ನೋಂದಣಿ ಮಾಡಬೇಕು.</p>.<p>ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿನ ಗಾಂಧಿ ಭವನದಲ್ಲಿ ವಿಚಾರ ಸಂಕಿರಣ ನಡೆಯಲಿದೆ. ನಂತರ ಮೂರು ಕಿ.ಮೀ. ವಾಕಥಾನ್ ಇರಲಿದೆ. ನೋಂದಣಿ ಮಾಡಿಕೊಂಡ ಪ್ರತಿಯೊಬ್ಬರಿಗೂ ಟಿ–ಶರ್ಟ್ ಮತ್ತು ಕ್ಯಾಪ್ ನೀಡಲಾಗುವುದು.</p>.<p>ಮಾಹಿತಿಗೆ ಸಂಪರ್ಕ ದೂರವಾಣಿ ಸಂಖ್ಯೆ: 8105015560</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>