<p>ಹುಬ್ಬಳ್ಳಿ: ಸಂವಿಧಾನ ಜಾಗೃತಿ ಜಾಥಾ ಅಭಿಯಾನದ ಪ್ರಯುಕ್ತ ಧಾರವಾಡ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ‘ಪಾರಂಪರಿಕ ನಡಿಗೆ’ ಹಾಗೂ ‘ಪಂಜಿನ ಮೆರವಣಿಗೆ‘ ಕಾರ್ಯಕ್ರಮ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (ಐಬಿಆರ್)ಗೆ ಸೇರ್ಪಡೆಯಾಗಿದೆ.</p>.<p>ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಐಬಿಆರ್ ನಿರ್ಣಾಯಕ ನರವಿಜಯ ಯಾದವ್ ಅವರು ಜಿಲ್ಲಾಧಿಕಾರಿ ದಿವ್ಯಾಪ್ರಭು ಮತ್ತು ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರಿಗೆ ಪ್ರಮಾಣಪತ್ರ ನೀಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ ಉಪಸ್ಥಿತರಿದ್ದರು.</p>.<p>ದಿವ್ಯಾ ಪ್ರಭು ಮಾತನಾಡಿ, ‘ಫೆಬ್ರುವರಿ 17ರಂದು ಧಾರವಾಡದಲ್ಲಿ ಹಮ್ಮಿಕೊಂಡಿದ್ದ ಪಾರಂಪರಿಕ ನಡಿಗೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮಂದಿ, ಫೆಬ್ರುವರಿ 19ರಂದು ಹುಬ್ಬಳ್ಳಿಯಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು‘ ಎಂದು ತಿಳಿಸಿದರು.</p>.<p>ಸಂವಿಧಾನ ಕುರಿತು ಅರಿವು ಮೂಡಿಸಲು ರಾಜ್ಯ ಸರ್ಕಾರ ಜನವರಿ 26ರಿಂದ ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಜಾಥಾ ಆಯೋಜಿಸಲು ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ಸಂವಿಧಾನ ಜಾಗೃತಿ ಜಾಥಾ ಅಭಿಯಾನದ ಪ್ರಯುಕ್ತ ಧಾರವಾಡ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ‘ಪಾರಂಪರಿಕ ನಡಿಗೆ’ ಹಾಗೂ ‘ಪಂಜಿನ ಮೆರವಣಿಗೆ‘ ಕಾರ್ಯಕ್ರಮ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ (ಐಬಿಆರ್)ಗೆ ಸೇರ್ಪಡೆಯಾಗಿದೆ.</p>.<p>ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಐಬಿಆರ್ ನಿರ್ಣಾಯಕ ನರವಿಜಯ ಯಾದವ್ ಅವರು ಜಿಲ್ಲಾಧಿಕಾರಿ ದಿವ್ಯಾಪ್ರಭು ಮತ್ತು ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರಿಗೆ ಪ್ರಮಾಣಪತ್ರ ನೀಡಿದರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕ ಪ್ರಸಾದ ಅಬ್ಬಯ್ಯ ಉಪಸ್ಥಿತರಿದ್ದರು.</p>.<p>ದಿವ್ಯಾ ಪ್ರಭು ಮಾತನಾಡಿ, ‘ಫೆಬ್ರುವರಿ 17ರಂದು ಧಾರವಾಡದಲ್ಲಿ ಹಮ್ಮಿಕೊಂಡಿದ್ದ ಪಾರಂಪರಿಕ ನಡಿಗೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮಂದಿ, ಫೆಬ್ರುವರಿ 19ರಂದು ಹುಬ್ಬಳ್ಳಿಯಲ್ಲಿ ನಡೆದ ಪಂಜಿನ ಮೆರವಣಿಗೆಯಲ್ಲಿ 15 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು‘ ಎಂದು ತಿಳಿಸಿದರು.</p>.<p>ಸಂವಿಧಾನ ಕುರಿತು ಅರಿವು ಮೂಡಿಸಲು ರಾಜ್ಯ ಸರ್ಕಾರ ಜನವರಿ 26ರಿಂದ ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಜಾಥಾ ಆಯೋಜಿಸಲು ಸೂಚಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>