ಹುಬ್ಬಳ್ಳಿ: ‘ಅಸ್ಪೃಶ್ಯತೆ, ಲಿಂಗ ತಾರತಮ್ಯ, ಭ್ರಷ್ಟಾಚಾರದಂತಹ ಅನಿಷ್ಟಗಳು ಸಮಾಜವನ್ನು ಅನಾದಿ ಕಾಲದಿಂದ ಬಾಧಿಸುತ್ತಿವೆ. ಸಂಸ್ಕೃತಿ ಮತ್ತು ಸಂಸ್ಕಾರಗಳಿಂದ ಮನುಷ್ಯ ದೂರ ಸರಿಯುತ್ತಿರುವುದು ಇದಕ್ಕೆ ಕಾರಣ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮೌಲ್ಯಾಧಾರಿತ ಶಿಕ್ಷಣದ ಅಗತ್ಯವಿದೆ’ ಎಂದುಕಾನೂನು ವಿಶ್ವವಿದ್ಯಾಲಯದ ಕುಲಪತಿ ಡಾ. ಸಿ. ಬಸವರಾಜು ಅಭಿಪ್ರಾಯಪಟ್ಟರು.