ಶುಕ್ರವಾರ ಇಲ್ಲಿನ ಮೂರುಸಾವಿರ ಮಠದಲ್ಲಿ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ‘ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಲಿಂಗಾಯತ ಭವನ ನಿರ್ಮಿಸಿ ಅಲ್ಲಿ ಚಟುವಟಿಕೆಗಳನ್ನು ನಡೆಸಿ ಮಹಿಳೆಯರಿಗೆ ನೆರವಾಗುವುದು ಮಹಾಸಭಾದ ಪ್ರಮುಖ ಉದ್ದೇಶವಾಗಿದೆ. ಪಕ್ಷಾತೀತವಾಗಿ ಎಲ್ಲ ಸಮಾಜದವರನ್ನು ತಲುಪುವ ಗುರಿ ಹೊಂದಲಾಗಿದೆ. ಒಳ್ಳೆಯ ಕೆಲಸಕ್ಕೆ ನನ್ನ ತಂದೆ ನೆರವಾಗುತ್ತಾರೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರಿ ಅರುಣಾದೇವಿ ಭರವಸೆ ವ್ಯಕ್ತಪಡಿಸಿದರು.