<p><strong>ಧಾರವಾಡ</strong>: ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಪರಿಚಿತರು ಅಯ್ಯಪ್ಪಸ್ವಾಮಿ ಮೂರ್ತಿ ತಂದಿಟ್ಟ ಸ್ಥಳದಲ್ಲಿ ಶುಕ್ರವಾರ ತಡರಾತ್ರಿ ಶೆಡ್ ನಿರ್ಮಿಸಲಾಗಿದೆ. ಮೂರ್ತಿ ಇರುವ ಕಟ್ಟೆಯ ನಾಲ್ಕು ಕಡೆ ಸಿಮೆಂಟ್ ಕಂಬ ನಿಲ್ಲಿಸಿ ಚಾವಣಿಗೆ ಶೀಟ್ ಅಳವಡಿಸಲಾಗಿದೆ. ತಳಿರು ತೋರಣ ಕಟ್ಟಲಾಗಿದೆ.</p>.<p>ಮಾಲಾಧಾರಿಗಳು ಅಯ್ಯಪ್ಪ ಸ್ವಾಮಿ ಮೂರ್ತಿಗೆ ಶನಿವಾರ ಪೂಜೆ ನೆರವೇರಿಸಿದರು. ಭಕ್ತರಿಗೆ ಪ್ರಸಾದ ವಿತರಿಸಿದರು. ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಇತರರು ಪಾಲ್ಗೊಂಡಿದ್ದರು. ‘ಮೂರ್ತಿಯನ್ನು ತೆರವುಗೊಳಿಸಿದರೆ, ಪ್ರತಿಭಟನೆ ನಡೆಸಲಾಗುವುದು’ ಎಂದು ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದರು.</p>.<p>‘ಅಯ್ಯಪ್ಪ ಸ್ವಾಮಿ ಮೂರ್ತಿ ಇಟ್ಟಿರುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ. ಜಿಲ್ಲಾಡಳಿತ ಮತ್ತು ಪೊಲೀಸರೊಂದಿಗೆ ಚರ್ಚಿಸಿ ಕ್ರಮ ವಹಿಸುವೆ’ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ವಿಶ್ವವಿದ್ಯಾಲಯದ ಜಾಗದಲ್ಲಿ ಮೂರ್ತಿ ಇಟ್ಟಿದ್ದಾರೆ. ವಿಶ್ವವಿದ್ಯಾಲಯದವರು ಕ್ರಮ ವಹಿಸಬೇಕು. ಜಿಲ್ಲಾಡಳಿತದ ಸಹಕಾರ ಕೋರಿದರೆ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ</strong>: ಕೃಷಿ ವಿಶ್ವವಿದ್ಯಾಲಯದ ಹೊಲದಲ್ಲಿ ಅಪರಿಚಿತರು ಅಯ್ಯಪ್ಪಸ್ವಾಮಿ ಮೂರ್ತಿ ತಂದಿಟ್ಟ ಸ್ಥಳದಲ್ಲಿ ಶುಕ್ರವಾರ ತಡರಾತ್ರಿ ಶೆಡ್ ನಿರ್ಮಿಸಲಾಗಿದೆ. ಮೂರ್ತಿ ಇರುವ ಕಟ್ಟೆಯ ನಾಲ್ಕು ಕಡೆ ಸಿಮೆಂಟ್ ಕಂಬ ನಿಲ್ಲಿಸಿ ಚಾವಣಿಗೆ ಶೀಟ್ ಅಳವಡಿಸಲಾಗಿದೆ. ತಳಿರು ತೋರಣ ಕಟ್ಟಲಾಗಿದೆ.</p>.<p>ಮಾಲಾಧಾರಿಗಳು ಅಯ್ಯಪ್ಪ ಸ್ವಾಮಿ ಮೂರ್ತಿಗೆ ಶನಿವಾರ ಪೂಜೆ ನೆರವೇರಿಸಿದರು. ಭಕ್ತರಿಗೆ ಪ್ರಸಾದ ವಿತರಿಸಿದರು. ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಇತರರು ಪಾಲ್ಗೊಂಡಿದ್ದರು. ‘ಮೂರ್ತಿಯನ್ನು ತೆರವುಗೊಳಿಸಿದರೆ, ಪ್ರತಿಭಟನೆ ನಡೆಸಲಾಗುವುದು’ ಎಂದು ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದರು.</p>.<p>‘ಅಯ್ಯಪ್ಪ ಸ್ವಾಮಿ ಮೂರ್ತಿ ಇಟ್ಟಿರುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ. ಜಿಲ್ಲಾಡಳಿತ ಮತ್ತು ಪೊಲೀಸರೊಂದಿಗೆ ಚರ್ಚಿಸಿ ಕ್ರಮ ವಹಿಸುವೆ’ ಎಂದು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ವಿಶ್ವವಿದ್ಯಾಲಯದ ಜಾಗದಲ್ಲಿ ಮೂರ್ತಿ ಇಟ್ಟಿದ್ದಾರೆ. ವಿಶ್ವವಿದ್ಯಾಲಯದವರು ಕ್ರಮ ವಹಿಸಬೇಕು. ಜಿಲ್ಲಾಡಳಿತದ ಸಹಕಾರ ಕೋರಿದರೆ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>