<p><strong>ಹುಬ್ಬಳ್ಳಿ:</strong> ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ‘100 ನಾಟ್ ಔಟ್’ ಪ್ರತಿಭಟನೆ ಮೂರನೇ ದಿನವಾದ ಭಾನುವಾರವೂ ಮುಂದುವರಿಯಿತು. ನಗರದ ಇಂಡಿಪಂಪ್, ಆನಂದ ನಗರ, ಕಾರವಾರ ರಸ್ತೆ ಹಾಗೂ ಕೇಶ್ವಾಪುರದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಕೇಶ್ವಾಪುರದ ರಮೇಶ ಭವನದ ಪೆಟ್ರೋಲ್ ಬಂಕ್ ಎದುರು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.</p>.<p>ಹರಿಪ್ರಸಾದ್ ಮಾತನಾಡಿ, ‘ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಯಾವ ರಾಷ್ಟ್ರದಲ್ಲೂ ಈ ನೀತಿಯಿಲ್ಲ. 2014ರಿಂದ 2021ರ ವರೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ದರ ಹೆಚ್ಚಳ ಮಾಡುತ್ತಲೇ ಬಂದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮದ್ಯದ ಅಂಗಡಿಯಲ್ಲಿ ₹ 70ಕ್ಕೆ ಬಿಯರ್ ಬಾಟಲ್ ದೊರೆಯುತ್ತದೆ. ಆದರೆ, ಪೆಟ್ರೋಲ್ ದರ ₹ 100 ದಾಟಿದೆ. ಇನ್ನುಮುಂದೆ ಪೆಟ್ರೋಲ್ ಉಪಯೋಗಿಸಬೇಡಿ, ಬಿಯರ್ಕುಡಿಯಿರಿ ಎಂದು ಸರ್ಕಾರ ಹೇಳುತ್ತಿದೆ’ ಎಂದು ವ್ಯಂಗ್ಯವಾಡಿದರು.</p>.<p>ಹುಬ್ಬಳ್ಳಿ–ಧಾರವಾಡಮಹಾನಗರ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಪ್ರಮುಖರಾದರಜತ್ ಉಳ್ಳಾಗಡ್ಡಿಮಠ, ಅಬ್ದುಲ್ಗನಿ ಅಹ್ಮದ್ವಲಿ, ಸಮೀರ್ ಖಾನ್, ರಾಜೇಂದ್ರ ಪಾಟೀಲ, ಸತೀಶ ಮೆಹರವಾಡೆ, ಜ್ಯೋತಿ ವಾಲೀಕಾರ, ಶಾಕೀರ್ ಸನದಿ ಇದ್ದರು.</p>.<p class="Subhead"><strong>ಮಹಿಳಾ ಕಾಂಗ್ರೆಸ್:</strong>ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿ ನೇತೃತ್ವದಲ್ಲಿ ಇಂದಿರಾನಗರ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಿದರು.</p>.<p>ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿ, ಜನ ಸಾಮಾನ್ಯರ ಸಂಕಷ್ಟಕ್ಕೆನೆರವಾಗಬೇಕು ಎಂದು ಆಗ್ರಹಿಸಿದರು. ಚೇತನಾ ಲಿಂಗದಾಳ, ಬಾಳಮ್ಮ ಜಂಗಿನವರ, ಪ್ರೀತಿ ಜೈನ, ಖೈರುನ್ನೀಸಾ ಧಾರವಾಡ, ಮಂಜುಳಾ ಹೆಬ್ಬಳ್ಳಿ, ಸಲ್ಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ‘100 ನಾಟ್ ಔಟ್’ ಪ್ರತಿಭಟನೆ ಮೂರನೇ ದಿನವಾದ ಭಾನುವಾರವೂ ಮುಂದುವರಿಯಿತು. ನಗರದ ಇಂಡಿಪಂಪ್, ಆನಂದ ನಗರ, ಕಾರವಾರ ರಸ್ತೆ ಹಾಗೂ ಕೇಶ್ವಾಪುರದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.</p>.<p>ಕೇಶ್ವಾಪುರದ ರಮೇಶ ಭವನದ ಪೆಟ್ರೋಲ್ ಬಂಕ್ ಎದುರು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.</p>.<p>ಹರಿಪ್ರಸಾದ್ ಮಾತನಾಡಿ, ‘ಕಚ್ಚಾ ತೈಲದ ಬೆಲೆ ಇಳಿಕೆಯಾದರೂ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಲೇ ಇದೆ. ಯಾವ ರಾಷ್ಟ್ರದಲ್ಲೂ ಈ ನೀತಿಯಿಲ್ಲ. 2014ರಿಂದ 2021ರ ವರೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ದರ ಹೆಚ್ಚಳ ಮಾಡುತ್ತಲೇ ಬಂದಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮದ್ಯದ ಅಂಗಡಿಯಲ್ಲಿ ₹ 70ಕ್ಕೆ ಬಿಯರ್ ಬಾಟಲ್ ದೊರೆಯುತ್ತದೆ. ಆದರೆ, ಪೆಟ್ರೋಲ್ ದರ ₹ 100 ದಾಟಿದೆ. ಇನ್ನುಮುಂದೆ ಪೆಟ್ರೋಲ್ ಉಪಯೋಗಿಸಬೇಡಿ, ಬಿಯರ್ಕುಡಿಯಿರಿ ಎಂದು ಸರ್ಕಾರ ಹೇಳುತ್ತಿದೆ’ ಎಂದು ವ್ಯಂಗ್ಯವಾಡಿದರು.</p>.<p>ಹುಬ್ಬಳ್ಳಿ–ಧಾರವಾಡಮಹಾನಗರ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ಪ್ರಮುಖರಾದರಜತ್ ಉಳ್ಳಾಗಡ್ಡಿಮಠ, ಅಬ್ದುಲ್ಗನಿ ಅಹ್ಮದ್ವಲಿ, ಸಮೀರ್ ಖಾನ್, ರಾಜೇಂದ್ರ ಪಾಟೀಲ, ಸತೀಶ ಮೆಹರವಾಡೆ, ಜ್ಯೋತಿ ವಾಲೀಕಾರ, ಶಾಕೀರ್ ಸನದಿ ಇದ್ದರು.</p>.<p class="Subhead"><strong>ಮಹಿಳಾ ಕಾಂಗ್ರೆಸ್:</strong>ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿ ನೇತೃತ್ವದಲ್ಲಿ ಇಂದಿರಾನಗರ ಹಾಗೂ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಿದರು.</p>.<p>ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿ, ಜನ ಸಾಮಾನ್ಯರ ಸಂಕಷ್ಟಕ್ಕೆನೆರವಾಗಬೇಕು ಎಂದು ಆಗ್ರಹಿಸಿದರು. ಚೇತನಾ ಲಿಂಗದಾಳ, ಬಾಳಮ್ಮ ಜಂಗಿನವರ, ಪ್ರೀತಿ ಜೈನ, ಖೈರುನ್ನೀಸಾ ಧಾರವಾಡ, ಮಂಜುಳಾ ಹೆಬ್ಬಳ್ಳಿ, ಸಲ್ಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>