<p><strong>ಹುಬ್ಬಳ್ಳಿ:</strong> ‘ಮೂರುಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿವಾದಕ್ಕೆ ಸಂಬಂಧಿಸಿ ಫೆ.23ರಂದು ನಾನು ಕೆಲ ಸತ್ಯಗಳನ್ನು ಬಹಿರಂಗಪಡಿಸುತ್ತೇನೆ. ಅಂದು ಮಠದ ಪೀಠಾಧಿಪತಿ ಗುರುಸಿದ್ಧರಾಜಯೋಗಿಂದ್ರ ಸ್ವಾಮೀಜಿ, ಗಣ್ಯರು ಮತ್ತು ಭಕ್ತರು ಮಠದ ಆವರಣದಲ್ಲಿ ಬಹಿರಂಗ ಚರ್ಚೆಗೆ ಬರಬೇಕು’ ಎಂದು ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಸವಾಲೆಸೆದರು.</p>.<p>ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಠದ ಉತ್ತರಾಧಿಕಾರಿ ನೇಮಕಕ್ಕೆ ಸಂಬಂಧಿಸಿ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಹೇಳಿಕೆ ಗುರುಸಿದ್ಧರಾಜ ಸ್ವಾಮೀಜಿ ಅವರದ್ದಲ್ಲ. ಕೆಲ ದುಷ್ಕರ್ಮಿಗಳು ಸ್ವಾಮೀಜಿ ಹೆಸರಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿ ಅವರಿಂದ ಒತ್ತಾಯಪೂರ್ವಕವಾಗಿ ಈ ರೀತಿ ಹೇಳಿಸಿರಲೂಬಹುದು‘ ಎಂದು ಸಂಶಯ ವ್ಯಕ್ತಪಡಿಸಿದರು.</p>.<p>‘ನನ್ನ ವಿರುದ್ಧ ಕುತಂತ್ರ ಮಾಡುತ್ತಿರುವ ದುಷ್ಕರ್ಮಿಗಳು, ಖಾವಿಧಾರಿಗಳು ಕೂಡ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು. ಇದು ನನ್ನ ತೇಜೋವಧೆ ಹಾಗೂ ಮರ್ಯಾದೆಗೆ ಸಂಬಂಧಿಸಿದ ವಿಷಯ’ ಎಂದರು.</p>.<p>‘ಮಠದ ಉತ್ತರಾಧಿಕಾರಿ ನೇಮಕದ ಪರ ಹಾಗೂ ವಿರೋಧ ಹೇಳಿಕೆಗಳನ್ನು ನೀಡುವವರು ಬಾಯಿ ಮುಚ್ಚಿಕೊಳ್ಳಬೇಕು. ನಮ್ಮ ಸಮಾಧಾನವನ್ನು ದೌರ್ಬಲ್ಯ ಎಂದು ಭಾವಿಸಬಾರದು. ಮಠದ ಸಂಪ್ರದಾಯದಂತೆ ಉತ್ತರಾಧಿಕಾರಿ ನೇಮಕ ಮಾಡಲಾಗುವುದು’ ಎಂದು ಗುರುಸಿದ್ಧರಾಜ ಸ್ವಾಮೀಜಿ ಪತ್ರಿಕಾ ಹೇಳಿಕೆ ನೀಡಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಮಠದ ಉನ್ನತ ಸಮಿತಿ ಸದಸ್ಯರೂ ಆದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ‘ಬಹಿರಂಗ ಚರ್ಚೆಯಲ್ಲಿ ನಾನು ಪಾಲ್ಗೊಳ್ಳುವುದಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ನಾವು ಮಠದ ಭಕ್ತರು, ಈ ಸ್ವಾಮೀಜಿಗಳ ನಡುವಿನ ಗುದ್ದಾಟ ನಮಗೆ ಬೇಕಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ‘ಮೂರುಸಾವಿರ ಮಠದ ಉತ್ತರಾಧಿಕಾರಿ ನೇಮಕ ವಿವಾದಕ್ಕೆ ಸಂಬಂಧಿಸಿ ಫೆ.23ರಂದು ನಾನು ಕೆಲ ಸತ್ಯಗಳನ್ನು ಬಹಿರಂಗಪಡಿಸುತ್ತೇನೆ. ಅಂದು ಮಠದ ಪೀಠಾಧಿಪತಿ ಗುರುಸಿದ್ಧರಾಜಯೋಗಿಂದ್ರ ಸ್ವಾಮೀಜಿ, ಗಣ್ಯರು ಮತ್ತು ಭಕ್ತರು ಮಠದ ಆವರಣದಲ್ಲಿ ಬಹಿರಂಗ ಚರ್ಚೆಗೆ ಬರಬೇಕು’ ಎಂದು ಬಾಲೇಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಸವಾಲೆಸೆದರು.</p>.<p>ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಠದ ಉತ್ತರಾಧಿಕಾರಿ ನೇಮಕಕ್ಕೆ ಸಂಬಂಧಿಸಿ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಹೇಳಿಕೆ ಗುರುಸಿದ್ಧರಾಜ ಸ್ವಾಮೀಜಿ ಅವರದ್ದಲ್ಲ. ಕೆಲ ದುಷ್ಕರ್ಮಿಗಳು ಸ್ವಾಮೀಜಿ ಹೆಸರಿನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾಮೀಜಿ ಅವರಿಂದ ಒತ್ತಾಯಪೂರ್ವಕವಾಗಿ ಈ ರೀತಿ ಹೇಳಿಸಿರಲೂಬಹುದು‘ ಎಂದು ಸಂಶಯ ವ್ಯಕ್ತಪಡಿಸಿದರು.</p>.<p>‘ನನ್ನ ವಿರುದ್ಧ ಕುತಂತ್ರ ಮಾಡುತ್ತಿರುವ ದುಷ್ಕರ್ಮಿಗಳು, ಖಾವಿಧಾರಿಗಳು ಕೂಡ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು. ಇದು ನನ್ನ ತೇಜೋವಧೆ ಹಾಗೂ ಮರ್ಯಾದೆಗೆ ಸಂಬಂಧಿಸಿದ ವಿಷಯ’ ಎಂದರು.</p>.<p>‘ಮಠದ ಉತ್ತರಾಧಿಕಾರಿ ನೇಮಕದ ಪರ ಹಾಗೂ ವಿರೋಧ ಹೇಳಿಕೆಗಳನ್ನು ನೀಡುವವರು ಬಾಯಿ ಮುಚ್ಚಿಕೊಳ್ಳಬೇಕು. ನಮ್ಮ ಸಮಾಧಾನವನ್ನು ದೌರ್ಬಲ್ಯ ಎಂದು ಭಾವಿಸಬಾರದು. ಮಠದ ಸಂಪ್ರದಾಯದಂತೆ ಉತ್ತರಾಧಿಕಾರಿ ನೇಮಕ ಮಾಡಲಾಗುವುದು’ ಎಂದು ಗುರುಸಿದ್ಧರಾಜ ಸ್ವಾಮೀಜಿ ಪತ್ರಿಕಾ ಹೇಳಿಕೆ ನೀಡಿದ್ದರು.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ಮಠದ ಉನ್ನತ ಸಮಿತಿ ಸದಸ್ಯರೂ ಆದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ‘ಬಹಿರಂಗ ಚರ್ಚೆಯಲ್ಲಿ ನಾನು ಪಾಲ್ಗೊಳ್ಳುವುದಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ನಾವು ಮಠದ ಭಕ್ತರು, ಈ ಸ್ವಾಮೀಜಿಗಳ ನಡುವಿನ ಗುದ್ದಾಟ ನಮಗೆ ಬೇಕಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>