<p><strong>ಹುಬ್ಬಳ್ಳಿ:</strong> ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸುತಗಟ್ಟಿಯ ಸೋಮು ಅವರಾಧಿಯನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹುಬ್ಬಳ್ಳಿ–ಧಾರವಾಡ ರಸ್ತೆ ಹಾಗೂ ಬಿಆರ್ಟಿಎಸ್ ರಸ್ತೆ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ.</p>.<p>ಆರೋಪಿಯನ್ನು ಬಂಧಿಸುವಂತೆ ಕಾರ್ಯಕರ್ತರು ಸಂಜೆಯಿಂದಲೂ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡುತ್ತಿದ್ದರು. ಸಂಜೆ ಆರು ಗಂಟೆಯ ಒಳಗೆ ಬಂಧನವಾಗದಿದ್ದರೆ ರಸ್ತೆ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ರಸ್ತೆ ಬಂದ್ ಮಾಡಿದರು.</p>.<p>ಕಾರ್ಯಕರ್ತರು ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ನವನಗರದ ಅಂಗಡಿಗಳನ್ನು ಬಂದ್ ಮಾಡಿಸಿದರು. ನವನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿ ಬಂದ ಕಾರ್ಯಕರ್ತರು ಮತಾಂತರ ವಿರೋಧ ಶಕ್ತಿಯ ಪ್ರದರ್ಶನಕ್ಕೆ ಜೊತೆಗೂಡಬೇಕು ಎಂದು ವ್ಯಾಪಾರಸ್ಥರಲ್ಲಿ ಮನವಿ ಮಾಡಿದರು.</p>.<p>ಹುಬ್ಬಳ್ಳಿ–ಧಾರವಾಡ ರಸ್ತೆಯಲ್ಲಿ ವಾಹನಗಳನ್ನು ತಡೆದು ಬಂದ್ ಮಾಡುತ್ತಿದ್ದ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ನೂಕಾಟ, ತಳ್ಳಾಟವೂ ಜರುಗಿತು.</p>.<p>ಸೋಮು ಅವರಾಧಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ನನ್ನನ್ನು ಪ್ರಚೋದಿಸಿದ್ದಾರೆ. ಜಾತಿನಿಂದನೆ ಮಾಡಿದ್ದಾರೆ ಎಂದು ವಿಶ್ವನಾಥ ಬೂದೂರು ಎಂಬುವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸೋಮು ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p><a href="https://www.prajavani.net/district/dharwad/anti-conversion-law-in-karnataka-arvind-bellad-says-will-discuss-with-cm-876192.html" itemprop="url">ಮತಾಂತರ ತಡೆಗೆ ಕಠಿಣ ಕಾನೂನು, ಸಿಎಂ ಜೊತೆ ಚರ್ಚೆ: ಅರವಿಂದಬೆಲ್ಲದ </a></p>.<p><strong>ರಸ್ತೆಯುದ್ದಕ್ಕೂ ವಾಹನಗಳ ಸಾಲು:</strong>ಸಂಘಟನೆಯ ಕಾರ್ಯಕರ್ತರು ರಸ್ತೆ ಮೇಲೆ ಪ್ರತಿಭಟನೆ ಮಾಡುತ್ತಿರುವುದರಿಂದ ವಾಹನಗಳ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ರಸ್ತೆಯುದ್ದಕ್ಕೂ ಕಣ್ಣು ಹಾಯಿಸಿದಷ್ಟೂ ದೂರ ವಾಹನಗಳ ಸಾಲು ಕಾಣುತ್ತಿದೆ. ಚಿಗರಿ ಬಸ್ಗಳಿಗಷ್ಟೇ ಸೀಮಿತವಾದ ಬಿಆರ್ಟಿಎಸ್ ಕಾರಿಡಾರ್ನಲ್ಲಿಯೂ ಬೇರೆ ವಾಹನಗಳು ನಿಂತುಕೊಂಡಿವೆ. ಪ್ರತಿಭಟನೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸುತಗಟ್ಟಿಯ ಸೋಮು ಅವರಾಧಿಯನ್ನು ಬಂಧಿಸುವಂತೆ ಆಗ್ರಹಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಹುಬ್ಬಳ್ಳಿ–ಧಾರವಾಡ ರಸ್ತೆ ಹಾಗೂ ಬಿಆರ್ಟಿಎಸ್ ರಸ್ತೆ ಬಂದ್ ಮಾಡಿ ಪ್ರತಿಭಟನೆ ಆರಂಭಿಸಿದ್ದಾರೆ.</p>.<p>ಆರೋಪಿಯನ್ನು ಬಂಧಿಸುವಂತೆ ಕಾರ್ಯಕರ್ತರು ಸಂಜೆಯಿಂದಲೂ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಮಾಡುತ್ತಿದ್ದರು. ಸಂಜೆ ಆರು ಗಂಟೆಯ ಒಳಗೆ ಬಂಧನವಾಗದಿದ್ದರೆ ರಸ್ತೆ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಅದರಂತೆ ರಸ್ತೆ ಬಂದ್ ಮಾಡಿದರು.</p>.<p>ಕಾರ್ಯಕರ್ತರು ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ನವನಗರದ ಅಂಗಡಿಗಳನ್ನು ಬಂದ್ ಮಾಡಿಸಿದರು. ನವನಗರದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಮೂಲಕ ಸಾಗಿ ಬಂದ ಕಾರ್ಯಕರ್ತರು ಮತಾಂತರ ವಿರೋಧ ಶಕ್ತಿಯ ಪ್ರದರ್ಶನಕ್ಕೆ ಜೊತೆಗೂಡಬೇಕು ಎಂದು ವ್ಯಾಪಾರಸ್ಥರಲ್ಲಿ ಮನವಿ ಮಾಡಿದರು.</p>.<p>ಹುಬ್ಬಳ್ಳಿ–ಧಾರವಾಡ ರಸ್ತೆಯಲ್ಲಿ ವಾಹನಗಳನ್ನು ತಡೆದು ಬಂದ್ ಮಾಡುತ್ತಿದ್ದ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ನೂಕಾಟ, ತಳ್ಳಾಟವೂ ಜರುಗಿತು.</p>.<p>ಸೋಮು ಅವರಾಧಿ ಕ್ರೈಸ್ತ ಧರ್ಮಕ್ಕೆ ಮತಾಂತರವಾಗುವಂತೆ ನನ್ನನ್ನು ಪ್ರಚೋದಿಸಿದ್ದಾರೆ. ಜಾತಿನಿಂದನೆ ಮಾಡಿದ್ದಾರೆ ಎಂದು ವಿಶ್ವನಾಥ ಬೂದೂರು ಎಂಬುವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಸೋಮು ವಿರುದ್ಧ ಎಫ್ಐಆರ್ ದಾಖಲಾಗಿದೆ.</p>.<p><a href="https://www.prajavani.net/district/dharwad/anti-conversion-law-in-karnataka-arvind-bellad-says-will-discuss-with-cm-876192.html" itemprop="url">ಮತಾಂತರ ತಡೆಗೆ ಕಠಿಣ ಕಾನೂನು, ಸಿಎಂ ಜೊತೆ ಚರ್ಚೆ: ಅರವಿಂದಬೆಲ್ಲದ </a></p>.<p><strong>ರಸ್ತೆಯುದ್ದಕ್ಕೂ ವಾಹನಗಳ ಸಾಲು:</strong>ಸಂಘಟನೆಯ ಕಾರ್ಯಕರ್ತರು ರಸ್ತೆ ಮೇಲೆ ಪ್ರತಿಭಟನೆ ಮಾಡುತ್ತಿರುವುದರಿಂದ ವಾಹನಗಳ ಸಂಚಾರಕ್ಕೆ ಅವಕಾಶ ನೀಡುತ್ತಿಲ್ಲ. ಇದರಿಂದಾಗಿ ರಸ್ತೆಯುದ್ದಕ್ಕೂ ಕಣ್ಣು ಹಾಯಿಸಿದಷ್ಟೂ ದೂರ ವಾಹನಗಳ ಸಾಲು ಕಾಣುತ್ತಿದೆ. ಚಿಗರಿ ಬಸ್ಗಳಿಗಷ್ಟೇ ಸೀಮಿತವಾದ ಬಿಆರ್ಟಿಎಸ್ ಕಾರಿಡಾರ್ನಲ್ಲಿಯೂ ಬೇರೆ ವಾಹನಗಳು ನಿಂತುಕೊಂಡಿವೆ. ಪ್ರತಿಭಟನೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>