<p><strong>ನವಲಗುಂದ:</strong> ‘ಡೆಂಗಿ ಸೇರಿದಂತೆ ಸಾಂಕ್ರಾಮಿಕ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು’ ಎಂದು ಅಳಗವಾಡಿ ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಶರಣಪ್ಪ ಕಡ್ಲಿಬಿಷ್ಠಿ ಹೇಳಿದರು.</p>.<p>ಅವರು ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಆರೋಗ್ಯ ಇಲಾಖೆಯಿಂದ ಅಂಗನವಾಡಿ ಕೇಂದ್ರ ನಂ.2ರಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.</p>.<p>‘ಮಳೆ ನೀರು ಸರಾಗವಾಗಿ ಹರಿಯಲು ಅವಕಾಶ ನೀಡದಿದ್ದರೆ ಸಾಂಕ್ರಾಮಿಕ ಕಾಯಿಲೆ ಹರಡುವ ಸೊಳ್ಳೆಗಳ ಉತ್ಪತ್ತಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ.</p>.<p>‘ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜನರಿಗೆ ಅರಿವು ಮೂಡಿಸುತ್ತಾರೆ. ಸಾರ್ವಜನಿಕರು ಇದನ್ನು ಅರಿತುಕೊಂಡು ಜಾಗೃತರಾಗಿರಬೇಕು’. ‘ಡೆಂಗಿ ರೋಗವು ಸೊಳ್ಳೆಯಿಂದ ಹರಡುತ್ತದೆ. ರೋಗ ಹರಡದಂತೆ ನಿಯಂತ್ರಿಸಲು ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾರೆ’ ಎಂದರು.</p>.<p>ಅರೋಗ್ಯ ಸುರಕ್ಷಣಾಧಿಕಾರಿ ಶೋಭಾ ಪತ್ತಾರ, ಮಹಾರುದ್ರಪ್ಪ ಅರ್ಕಸಾಲಿ, ದೇವಪ್ಪ ಹೊಂಗಲ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವಲಗುಂದ:</strong> ‘ಡೆಂಗಿ ಸೇರಿದಂತೆ ಸಾಂಕ್ರಾಮಿಕ ಕಾಯಿಲೆ ತಡೆಗಟ್ಟಲು ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು’ ಎಂದು ಅಳಗವಾಡಿ ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಶರಣಪ್ಪ ಕಡ್ಲಿಬಿಷ್ಠಿ ಹೇಳಿದರು.</p>.<p>ಅವರು ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಆರೋಗ್ಯ ಇಲಾಖೆಯಿಂದ ಅಂಗನವಾಡಿ ಕೇಂದ್ರ ನಂ.2ರಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಡೆಂಗಿ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.</p>.<p>‘ಮಳೆ ನೀರು ಸರಾಗವಾಗಿ ಹರಿಯಲು ಅವಕಾಶ ನೀಡದಿದ್ದರೆ ಸಾಂಕ್ರಾಮಿಕ ಕಾಯಿಲೆ ಹರಡುವ ಸೊಳ್ಳೆಗಳ ಉತ್ಪತ್ತಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ.</p>.<p>‘ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಜನರಿಗೆ ಅರಿವು ಮೂಡಿಸುತ್ತಾರೆ. ಸಾರ್ವಜನಿಕರು ಇದನ್ನು ಅರಿತುಕೊಂಡು ಜಾಗೃತರಾಗಿರಬೇಕು’. ‘ಡೆಂಗಿ ರೋಗವು ಸೊಳ್ಳೆಯಿಂದ ಹರಡುತ್ತದೆ. ರೋಗ ಹರಡದಂತೆ ನಿಯಂತ್ರಿಸಲು ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸುತ್ತಿದ್ದಾರೆ’ ಎಂದರು.</p>.<p>ಅರೋಗ್ಯ ಸುರಕ್ಷಣಾಧಿಕಾರಿ ಶೋಭಾ ಪತ್ತಾರ, ಮಹಾರುದ್ರಪ್ಪ ಅರ್ಕಸಾಲಿ, ದೇವಪ್ಪ ಹೊಂಗಲ ಪಾಲ್ಗೊಂಡಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>