<p><strong>ಹುಬ್ಬಳ್ಳಿ</strong>: ದೇಶದಾದ್ಯಂತ ಲಾಕ್ಡೌನ್ ಘೋಷಣೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ನಗರದ ಅಂಗಡಿಗಳ ಮುಂದೆ ಗ್ರಾಹಕರು ಮುಗಿ ಬೀಳಬಾರದು ಎಂದು ಪೊಲೀಸರು ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ.</p>.<p>ದಿನಸಿ, ತರಕಾರಿ, ಹಾಲು, ಔಷಧಿ ಅಂಗಡಿಗಳ ಎದುರು ಮೂರು ಅಡಿ ಅಂತರ ಒಂದೊಂದು ವೃತ್ತ ಹಾಕಿ, ಅದರಲ್ಲಿಯೇ ನಿಂತು ಸರತಿ ಸಾಲಿನಲ್ಲಿ ಸಾಮಾನು ಖರೀದಿಸಲು ಸೂಚಿಸಿದ್ದಾರೆ. ಸಾರ್ವಜನಿಕರು ಮುಖಕ್ಕೆ ಮಾಸ್ಕ್ ಧರಿಸಿ, ಸಮಾಧಾನದಿಂದ ಸಾಮಾನು ಖರೀದಿಯಲ್ಲಿ ತೊಡಗಿದ್ದಾರೆ.</p>.<p>ಮನೆಯಿಂದ ಯಾರೂ ಹೊರಗೆ ಬರಬಾರದು ಎನ್ನುವ ಕಟ್ಟುನಿಟ್ಟಿನ ಆದೇಶ ಜಾರಿಗೆ ತಂದಿದ್ದರೂ, ಚನ್ನಮ್ಮ ವೃತ್ತದ ಬಳಿ ಕೆಲವು ಆಟೊಗಳು, ಬೈಕ್ಗಳುಸಂಚರಿಸುತ್ತಿದ್ದವು. ಅವುಗಳನ್ನು ತಡೆದ ಪೊಲೀಸರು, ಚಾಲಕರಿಗೆ ಮತ್ತು ಸವಾರರಿಗೆ ಲಾಠಿ ರುಚಿ ತೋರಿಸಿ ಮನೆಗೆ ತೆರಳುವಂತೆ ಸೂಚಿಸಿದರು.</p>.<p>ಈ ನಡುವೆಯೇ ಸಚಿವ ಜಗದೀಶ ಶೆಟ್ಟರ್ ಅವರು, ಜಿಲ್ಲಾಧಿಕಾರಿ ದೀಪಾ ಚೋಳನ್, ತಹಶೀಲ್ದಾರ್ ಶಶೀಧರ ಮಾಡ್ಯಾಳ ಜೊತೆ ಹಳೇ ಬಸ್ ನಿಲ್ದಾಣ, ಚನ್ನಮ್ಮ ವೃತ್ತದ ಕಡೆ ತೆರಳಿ ಬಂದ್ ಪರಿಶೀಲನೆ ನಡೆಸಿದರು.</p>.<p>ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಸೋಂಕು ಹರಡದಂತೆ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಪ್ರಮುಖ ಪ್ರದೇಶಗಳಲ್ಲಿ ರಾಸಾಯನಿಕ ಸಿಂಪಡಣೆ ಮಾಡಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ' ಎಂದರು.</p>.<p>'ದೇಶದ ಹಿತದೃಷ್ಟಿಯಿಂದ ಪ್ರಧಾನಿಯವರು 21ದಿನ ಲಾಕ್ಡೌನ್ಘೋಷಣೆ ಮಾಡಿದ್ದಾರೆ. ಇದಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಸಂಪೂರ್ಣ ಬೆಂಬಲ ನೀಡಬೇಕು. ಇಲ್ಲದಿದ್ದರೆ, 21 ವರ್ಷ ಹಿಂದೆ ಹೋಗಬೇಕಾಗುತ್ತದೆ' ಎಂದು ಎಚ್ಚರಿಸಿದರು.</p>.<p>'ಜಿಲ್ಲೆಯಲ್ಲಿ ಒಬ್ಬರಿಗೆ ಕೋವಿಡ್-19 ದೃಢಪಟ್ಟಿದ್ದು, ಕಿಮ್ಸ್ನಲ್ಲಿಚಿಕಿತ್ಸೆ ಪಡೆಯುತ್ತಿರುವ ಅವರು ಗುಣಮುಖರಾಗುತ್ತಿದ್ದಾರೆ. ಯಾವುದೇ ಕಾರಣಕ್ಕೂ ಜನ ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು, ಮನೆಯಲ್ಲಿಯೇ ಇದ್ದರೆ ಆದಷ್ಟು ಬೇಗ ನೆಮ್ಮದಿಯ ಬದುಕು ನೋಡಬಹುದು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ</strong>: ದೇಶದಾದ್ಯಂತ ಲಾಕ್ಡೌನ್ ಘೋಷಣೆ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ನಗರದ ಅಂಗಡಿಗಳ ಮುಂದೆ ಗ್ರಾಹಕರು ಮುಗಿ ಬೀಳಬಾರದು ಎಂದು ಪೊಲೀಸರು ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡಿದ್ದಾರೆ.</p>.<p>ದಿನಸಿ, ತರಕಾರಿ, ಹಾಲು, ಔಷಧಿ ಅಂಗಡಿಗಳ ಎದುರು ಮೂರು ಅಡಿ ಅಂತರ ಒಂದೊಂದು ವೃತ್ತ ಹಾಕಿ, ಅದರಲ್ಲಿಯೇ ನಿಂತು ಸರತಿ ಸಾಲಿನಲ್ಲಿ ಸಾಮಾನು ಖರೀದಿಸಲು ಸೂಚಿಸಿದ್ದಾರೆ. ಸಾರ್ವಜನಿಕರು ಮುಖಕ್ಕೆ ಮಾಸ್ಕ್ ಧರಿಸಿ, ಸಮಾಧಾನದಿಂದ ಸಾಮಾನು ಖರೀದಿಯಲ್ಲಿ ತೊಡಗಿದ್ದಾರೆ.</p>.<p>ಮನೆಯಿಂದ ಯಾರೂ ಹೊರಗೆ ಬರಬಾರದು ಎನ್ನುವ ಕಟ್ಟುನಿಟ್ಟಿನ ಆದೇಶ ಜಾರಿಗೆ ತಂದಿದ್ದರೂ, ಚನ್ನಮ್ಮ ವೃತ್ತದ ಬಳಿ ಕೆಲವು ಆಟೊಗಳು, ಬೈಕ್ಗಳುಸಂಚರಿಸುತ್ತಿದ್ದವು. ಅವುಗಳನ್ನು ತಡೆದ ಪೊಲೀಸರು, ಚಾಲಕರಿಗೆ ಮತ್ತು ಸವಾರರಿಗೆ ಲಾಠಿ ರುಚಿ ತೋರಿಸಿ ಮನೆಗೆ ತೆರಳುವಂತೆ ಸೂಚಿಸಿದರು.</p>.<p>ಈ ನಡುವೆಯೇ ಸಚಿವ ಜಗದೀಶ ಶೆಟ್ಟರ್ ಅವರು, ಜಿಲ್ಲಾಧಿಕಾರಿ ದೀಪಾ ಚೋಳನ್, ತಹಶೀಲ್ದಾರ್ ಶಶೀಧರ ಮಾಡ್ಯಾಳ ಜೊತೆ ಹಳೇ ಬಸ್ ನಿಲ್ದಾಣ, ಚನ್ನಮ್ಮ ವೃತ್ತದ ಕಡೆ ತೆರಳಿ ಬಂದ್ ಪರಿಶೀಲನೆ ನಡೆಸಿದರು.</p>.<p>ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಸೋಂಕು ಹರಡದಂತೆ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ. ಪ್ರಮುಖ ಪ್ರದೇಶಗಳಲ್ಲಿ ರಾಸಾಯನಿಕ ಸಿಂಪಡಣೆ ಮಾಡಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಮಾಡಿ ಕಟ್ಟೆಚ್ಚರ ವಹಿಸಲಾಗಿದೆ' ಎಂದರು.</p>.<p>'ದೇಶದ ಹಿತದೃಷ್ಟಿಯಿಂದ ಪ್ರಧಾನಿಯವರು 21ದಿನ ಲಾಕ್ಡೌನ್ಘೋಷಣೆ ಮಾಡಿದ್ದಾರೆ. ಇದಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದ್ದು, ಸಂಪೂರ್ಣ ಬೆಂಬಲ ನೀಡಬೇಕು. ಇಲ್ಲದಿದ್ದರೆ, 21 ವರ್ಷ ಹಿಂದೆ ಹೋಗಬೇಕಾಗುತ್ತದೆ' ಎಂದು ಎಚ್ಚರಿಸಿದರು.</p>.<p>'ಜಿಲ್ಲೆಯಲ್ಲಿ ಒಬ್ಬರಿಗೆ ಕೋವಿಡ್-19 ದೃಢಪಟ್ಟಿದ್ದು, ಕಿಮ್ಸ್ನಲ್ಲಿಚಿಕಿತ್ಸೆ ಪಡೆಯುತ್ತಿರುವ ಅವರು ಗುಣಮುಖರಾಗುತ್ತಿದ್ದಾರೆ. ಯಾವುದೇ ಕಾರಣಕ್ಕೂ ಜನ ಭಯಪಡುವ ಅಗತ್ಯವಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡು, ಮನೆಯಲ್ಲಿಯೇ ಇದ್ದರೆ ಆದಷ್ಟು ಬೇಗ ನೆಮ್ಮದಿಯ ಬದುಕು ನೋಡಬಹುದು' ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>